ಹೆಂಡತಿಗೆ ಜಿಮ್ ಡಂಬಲ್ಸ್​ನಿಂದ ಹೊಡೆದು ಕೊಲೆ ಮಾಡಿ ನಂತರ ಗಂಡ ನೇಣಿಗೆ ಶರಣು

ಗಂಡ ಹೆಂಡತಿ ಜಗಳ ಉಂಡು ಮಲಗೋ ವರೆಗೆ ಅಂತಾ ಇರಬೇಕು. ಆದರೆ ಕೆಲವೊಂದು ಬಾರಿ ಗಂಡ ಹೆಂಡತಿ ಜಗಳ ಮಿತಿ ಮೀರಿದರೆ ಒಂದೊಂದು ಸಲ ಏನ್ ಆಗುತ್ತೋ ಅನ್ನೋದು ಊಹೆಗೆ ಸಿಕ್ಕುವುದಿಲ್ಲ. ಗಂಡ ಹೆಂಡತಿ ಜಗಳ ಮಾಡಿಕೊಳ್ಳುವ ಮುನ್ನ ಒಂದು ಸಲ ಅಲೋಚನೆ ಮಾಡಬೇಕು. ಆದ್ರೆ ಇಲ್ಲೊಂದು ಜೋಡಿ ಯಾವುದು ಯೋಚನೆ ಮಾಡ್ದೆ ದೊಡ್ಡದೊಂದು ಅನಾಚಾರ ನಡೆದು ಹೋಗಿದೆ..‌

ಸತ್ತು ಮಲಗಿರುವ ಗಂಡ.. ರಕ್ತದ ಮಡುವಿನಲ್ಲಿ ಬಿದ್ದಿರುವ ಹೆಂಡತಿ.. ಘಟನೆ ಸ್ಥಳದಲ್ಲಿ ಇಂಚು ಇಂಚು ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು…. ಈ ಎಲ್ಲಾ ದೃಶ್ಯಗಳು ಕಂಡು ಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ದೇವನಹಳ್ಳಿ ಮುಖ್ಯ ರಸ್ತೆಯಲ್ಲಿ ಕಂಡು ಬಂದಿದ್ದು..

ಹೌದು ಗಂಡ ಮೊದಲು ಹೆಂಡತಿಯನ್ನ ಜಿಮ್ ಡಂಬಲ್ಸ್ ನಿಂದ ಹೊಡೆದು ಕೊಲೆ ಮಾಡಿದ್ದಾನೆ ನಂತರ ಕಾರಣಾಂತರಗಳಿಂದ ಗಂಡ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಜಯಪುರ ಪಟ್ಟಣದ ಬಸವಚಾರಿ ಅಲಿಯಾಸ್ ಶಾಮ್ (40) ಮತ್ತು ಸುಮಾ (35) ಮೃತ ದುರ್ದೈವಿಗಳು. ಶಾಮಣ್ಣ ಮತ್ತು ಸುಮಾ ಮಕ್ಕಳು ಶಾಲೆಯಿಂದ ಬಂದ ನಂತರ ಘಟನೆ ಹೊರ ಬಂದಿದೆ.

ಶಾಮಣ್ಣ ಮತ್ತು ಸುಮಾ ಇಬ್ಬರ ನಡುವೆ ಕೌಟುಂಬಿಕ ಕಲಹ ಸಾಕಷ್ಟು ದಿನಗಳಿಂದ ನಡೆಯುತ್ತಿದ್ದು, ಇದು ಅತಿರೇಕಕ್ಕೆ ಹೋಗಿ ಜಗಳ‌ ಉಂಟಾಗಿ ಇಬ್ಬರ ಪ್ರಾಣ ಹೋಗಿದೆ. ಇನ್ನೂ ಇಬ್ಬರೂ ಗಂಡು ಮಕ್ಕಳು ಇದ್ದು, ಗಂಡ ಹೆಂಡತಿ ಕಲಹಕ್ಕೆ ಮಕ್ಕಳು ಅನಾಥಾರಾಗಿದ್ದಾರೆ. ಸದ್ಯಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಪಿ ಸಿ.ಕೆ ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌.

ಈ ಘಟನೆ ವಿಜಯಪುರ ಪಟ್ಟಣದ ಹೊರವಲಯದಲ್ಲಿ ನಡೆದಿದ್ದು, ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣದಿಂದ ವಿಜಯಪುರ ಪಟ್ಟಣದ ಬೆಚ್ಚಿ ಬಿದ್ದಿದೆ.

ಒಟ್ಟಾರೆ ಗಂಡ ಹೆಂಡತಿ ಜಗಳ ಹೆಂಡತಿ ಉಂಡು ಮಲಗೋ ವರೆಗೂ ಅಂತಾ ಇರಬೇಕು ಆದ್ರೆ ಮುಂದುವರೆದರೆ ವಿಕೋಪಕ್ಕೆ ತಲುಪುತ್ತದೆ. ಅದಕ್ಕೊಂದು ತಾಜಾ ಉದಾಹರಣೆ ಇಂದು ವಿಜಯಪುರ ಪಟ್ಟಣದಲ್ಲಿ ನಡೆದಿರುವ ಘಟನೆ. ಹೆಂಡತಿಯನ್ನ ಕೊಲೆ ಮಾಡಿ ಗಂಡ ಆತ್ಮಹತ್ಯೆ ಮಾಡಿಕೊಂಡಿರುವುದು ಅಸಲಿ ಸತ್ಯ ಪೋಲಿಸರ ತನಿಖೆಯಿಂದ ಹೊರಬರಬೇಕಾಗಿದೆ.

Ramesh Babu

Journalist

Recent Posts

ಕರ್ನಾಟಕ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ…

6 hours ago

ಇತಿಹಾಸ ಒಂದು ಪಾಠವಾಗಬೇಕೆ ಹೊರತು ರಾಜಕೀಯ ಅಸ್ತ್ರವಾಗಬಾರದು

ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…

9 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಹವಾ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…

21 hours ago

ಇಂದಿನಿಂದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

23 hours ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

1 day ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

1 day ago