ಗಂಡ ಹೆಂಡತಿ ಜಗಳ ಉಂಡು ಮಲಗೋ ವರೆಗೆ ಅಂತಾ ಇರಬೇಕು. ಆದರೆ ಕೆಲವೊಂದು ಬಾರಿ ಗಂಡ ಹೆಂಡತಿ ಜಗಳ ಮಿತಿ ಮೀರಿದರೆ ಒಂದೊಂದು ಸಲ ಏನ್ ಆಗುತ್ತೋ ಅನ್ನೋದು ಊಹೆಗೆ ಸಿಕ್ಕುವುದಿಲ್ಲ. ಗಂಡ ಹೆಂಡತಿ ಜಗಳ ಮಾಡಿಕೊಳ್ಳುವ ಮುನ್ನ ಒಂದು ಸಲ ಅಲೋಚನೆ ಮಾಡಬೇಕು. ಆದ್ರೆ ಇಲ್ಲೊಂದು ಜೋಡಿ ಯಾವುದು ಯೋಚನೆ ಮಾಡ್ದೆ ದೊಡ್ಡದೊಂದು ಅನಾಚಾರ ನಡೆದು ಹೋಗಿದೆ..
ಸತ್ತು ಮಲಗಿರುವ ಗಂಡ.. ರಕ್ತದ ಮಡುವಿನಲ್ಲಿ ಬಿದ್ದಿರುವ ಹೆಂಡತಿ.. ಘಟನೆ ಸ್ಥಳದಲ್ಲಿ ಇಂಚು ಇಂಚು ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು…. ಈ ಎಲ್ಲಾ ದೃಶ್ಯಗಳು ಕಂಡು ಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ದೇವನಹಳ್ಳಿ ಮುಖ್ಯ ರಸ್ತೆಯಲ್ಲಿ ಕಂಡು ಬಂದಿದ್ದು..
ಹೌದು ಗಂಡ ಮೊದಲು ಹೆಂಡತಿಯನ್ನ ಜಿಮ್ ಡಂಬಲ್ಸ್ ನಿಂದ ಹೊಡೆದು ಕೊಲೆ ಮಾಡಿದ್ದಾನೆ ನಂತರ ಕಾರಣಾಂತರಗಳಿಂದ ಗಂಡ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಜಯಪುರ ಪಟ್ಟಣದ ಬಸವಚಾರಿ ಅಲಿಯಾಸ್ ಶಾಮ್ (40) ಮತ್ತು ಸುಮಾ (35) ಮೃತ ದುರ್ದೈವಿಗಳು. ಶಾಮಣ್ಣ ಮತ್ತು ಸುಮಾ ಮಕ್ಕಳು ಶಾಲೆಯಿಂದ ಬಂದ ನಂತರ ಘಟನೆ ಹೊರ ಬಂದಿದೆ.
ಶಾಮಣ್ಣ ಮತ್ತು ಸುಮಾ ಇಬ್ಬರ ನಡುವೆ ಕೌಟುಂಬಿಕ ಕಲಹ ಸಾಕಷ್ಟು ದಿನಗಳಿಂದ ನಡೆಯುತ್ತಿದ್ದು, ಇದು ಅತಿರೇಕಕ್ಕೆ ಹೋಗಿ ಜಗಳ ಉಂಟಾಗಿ ಇಬ್ಬರ ಪ್ರಾಣ ಹೋಗಿದೆ. ಇನ್ನೂ ಇಬ್ಬರೂ ಗಂಡು ಮಕ್ಕಳು ಇದ್ದು, ಗಂಡ ಹೆಂಡತಿ ಕಲಹಕ್ಕೆ ಮಕ್ಕಳು ಅನಾಥಾರಾಗಿದ್ದಾರೆ. ಸದ್ಯಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಪಿ ಸಿ.ಕೆ ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ವಿಜಯಪುರ ಪಟ್ಟಣದ ಹೊರವಲಯದಲ್ಲಿ ನಡೆದಿದ್ದು, ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣದಿಂದ ವಿಜಯಪುರ ಪಟ್ಟಣದ ಬೆಚ್ಚಿ ಬಿದ್ದಿದೆ.
ಒಟ್ಟಾರೆ ಗಂಡ ಹೆಂಡತಿ ಜಗಳ ಹೆಂಡತಿ ಉಂಡು ಮಲಗೋ ವರೆಗೂ ಅಂತಾ ಇರಬೇಕು ಆದ್ರೆ ಮುಂದುವರೆದರೆ ವಿಕೋಪಕ್ಕೆ ತಲುಪುತ್ತದೆ. ಅದಕ್ಕೊಂದು ತಾಜಾ ಉದಾಹರಣೆ ಇಂದು ವಿಜಯಪುರ ಪಟ್ಟಣದಲ್ಲಿ ನಡೆದಿರುವ ಘಟನೆ. ಹೆಂಡತಿಯನ್ನ ಕೊಲೆ ಮಾಡಿ ಗಂಡ ಆತ್ಮಹತ್ಯೆ ಮಾಡಿಕೊಂಡಿರುವುದು ಅಸಲಿ ಸತ್ಯ ಪೋಲಿಸರ ತನಿಖೆಯಿಂದ ಹೊರಬರಬೇಕಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪೂರು ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ ನೂತನ ಅಧ್ಯಕ್ಷರಾಗಿ…
ನೆಲಮಂಗಲ: ನೆಲಮಂಗಲದಲ್ಲಿ ನವಿಲುಗಳ ಸಾಮೂಹಿಕ ಸಾವು ಪ್ರಕರಣ ಬೆಳಕಿಗೆ ಬಂದಿದೆ. ಹಕ್ಕಿಜ್ವರ (Bird Flu)ಶಂಕೆಯಿಂದ ಸುಮಾರು 10-15 ನವಿಲುಗಳು ಸಾವನ್ನಪ್ಪಿದ…
ದೊಡ್ಡಬೆಳವಂಗಲ ಹೋಬಳಿಯ 2100 ಎಕರೆಯ ಭೂಸ್ವಾಧೀನ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿಗೆ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ಸೊಣ್ಣೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳ ರೈತರಿಂದ…
ದೊಡ್ಡಬಳ್ಳಾಪುರ: ಸ್ನೇಹಿತನ ಬರ್ತಡೇ ಪಾರ್ಟಿಗೆಂದು ಖಾಸಗಿ ರೆಸಾರ್ಟ್ಗೆ ಬಂದಿದ್ದ ಯುವಕನೊಬ್ಬ ನಿದ್ದೆಗಣ್ಣಿನಲ್ಲಿ ಈಜುಕೊಳಕ್ಕೆ ಬಿದ್ದು ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…
ರಾಜ್ಯ ರಾಜಧಾನಿ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಜಿಲ್ಲೆ ಎಂದರೆ ಅದು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಕೈಗಾರಿಕಾ ಬೆಳವಣಿಗೆ, ವೇಗವಾದ ನಗರೀಕರಣ,…
ಸನ್ಮಾನ್ಯ ಶ್ರೀ ಎಚ್. ಡಿ. ದೇವೇಗೌಡ,... 94, ನಾಟ್ ಔಟ್, ಶತಕಕ್ಕೆ 6 ಮಾತ್ರ ಬಾಕಿ, ಅವರು ಶತಕವನ್ನು ಪೂರೈಸಲಿ…