ಹೆಂಡತಿಗೆ ಜಿಮ್ ಡಂಬಲ್ಸ್​ನಿಂದ ಹೊಡೆದು ಕೊಲೆ ಮಾಡಿ ನಂತರ ಗಂಡ ನೇಣಿಗೆ ಶರಣು

ಗಂಡ ಹೆಂಡತಿ ಜಗಳ ಉಂಡು ಮಲಗೋ ವರೆಗೆ ಅಂತಾ ಇರಬೇಕು. ಆದರೆ ಕೆಲವೊಂದು ಬಾರಿ ಗಂಡ ಹೆಂಡತಿ ಜಗಳ ಮಿತಿ ಮೀರಿದರೆ ಒಂದೊಂದು ಸಲ ಏನ್ ಆಗುತ್ತೋ ಅನ್ನೋದು ಊಹೆಗೆ ಸಿಕ್ಕುವುದಿಲ್ಲ. ಗಂಡ ಹೆಂಡತಿ ಜಗಳ ಮಾಡಿಕೊಳ್ಳುವ ಮುನ್ನ ಒಂದು ಸಲ ಅಲೋಚನೆ ಮಾಡಬೇಕು. ಆದ್ರೆ ಇಲ್ಲೊಂದು ಜೋಡಿ ಯಾವುದು ಯೋಚನೆ ಮಾಡ್ದೆ ದೊಡ್ಡದೊಂದು ಅನಾಚಾರ ನಡೆದು ಹೋಗಿದೆ..‌

ಸತ್ತು ಮಲಗಿರುವ ಗಂಡ.. ರಕ್ತದ ಮಡುವಿನಲ್ಲಿ ಬಿದ್ದಿರುವ ಹೆಂಡತಿ.. ಘಟನೆ ಸ್ಥಳದಲ್ಲಿ ಇಂಚು ಇಂಚು ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು…. ಈ ಎಲ್ಲಾ ದೃಶ್ಯಗಳು ಕಂಡು ಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ದೇವನಹಳ್ಳಿ ಮುಖ್ಯ ರಸ್ತೆಯಲ್ಲಿ ಕಂಡು ಬಂದಿದ್ದು..

ಹೌದು ಗಂಡ ಮೊದಲು ಹೆಂಡತಿಯನ್ನ ಜಿಮ್ ಡಂಬಲ್ಸ್ ನಿಂದ ಹೊಡೆದು ಕೊಲೆ ಮಾಡಿದ್ದಾನೆ ನಂತರ ಕಾರಣಾಂತರಗಳಿಂದ ಗಂಡ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಜಯಪುರ ಪಟ್ಟಣದ ಬಸವಚಾರಿ ಅಲಿಯಾಸ್ ಶಾಮ್ (40) ಮತ್ತು ಸುಮಾ (35) ಮೃತ ದುರ್ದೈವಿಗಳು. ಶಾಮಣ್ಣ ಮತ್ತು ಸುಮಾ ಮಕ್ಕಳು ಶಾಲೆಯಿಂದ ಬಂದ ನಂತರ ಘಟನೆ ಹೊರ ಬಂದಿದೆ.

ಶಾಮಣ್ಣ ಮತ್ತು ಸುಮಾ ಇಬ್ಬರ ನಡುವೆ ಕೌಟುಂಬಿಕ ಕಲಹ ಸಾಕಷ್ಟು ದಿನಗಳಿಂದ ನಡೆಯುತ್ತಿದ್ದು, ಇದು ಅತಿರೇಕಕ್ಕೆ ಹೋಗಿ ಜಗಳ‌ ಉಂಟಾಗಿ ಇಬ್ಬರ ಪ್ರಾಣ ಹೋಗಿದೆ. ಇನ್ನೂ ಇಬ್ಬರೂ ಗಂಡು ಮಕ್ಕಳು ಇದ್ದು, ಗಂಡ ಹೆಂಡತಿ ಕಲಹಕ್ಕೆ ಮಕ್ಕಳು ಅನಾಥಾರಾಗಿದ್ದಾರೆ. ಸದ್ಯಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಪಿ ಸಿ.ಕೆ ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌.

ಈ ಘಟನೆ ವಿಜಯಪುರ ಪಟ್ಟಣದ ಹೊರವಲಯದಲ್ಲಿ ನಡೆದಿದ್ದು, ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣದಿಂದ ವಿಜಯಪುರ ಪಟ್ಟಣದ ಬೆಚ್ಚಿ ಬಿದ್ದಿದೆ.

ಒಟ್ಟಾರೆ ಗಂಡ ಹೆಂಡತಿ ಜಗಳ ಹೆಂಡತಿ ಉಂಡು ಮಲಗೋ ವರೆಗೂ ಅಂತಾ ಇರಬೇಕು ಆದ್ರೆ ಮುಂದುವರೆದರೆ ವಿಕೋಪಕ್ಕೆ ತಲುಪುತ್ತದೆ. ಅದಕ್ಕೊಂದು ತಾಜಾ ಉದಾಹರಣೆ ಇಂದು ವಿಜಯಪುರ ಪಟ್ಟಣದಲ್ಲಿ ನಡೆದಿರುವ ಘಟನೆ. ಹೆಂಡತಿಯನ್ನ ಕೊಲೆ ಮಾಡಿ ಗಂಡ ಆತ್ಮಹತ್ಯೆ ಮಾಡಿಕೊಂಡಿರುವುದು ಅಸಲಿ ಸತ್ಯ ಪೋಲಿಸರ ತನಿಖೆಯಿಂದ ಹೊರಬರಬೇಕಾಗಿದೆ.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

6 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

7 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

20 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

20 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

20 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

21 hours ago