ಹೆಂಡತಿಗೆ ಜಿಮ್ ಡಂಬಲ್ಸ್​ನಿಂದ ಹೊಡೆದು ಕೊಲೆ ಮಾಡಿ ನಂತರ ಗಂಡ ನೇಣಿಗೆ ಶರಣು

ಗಂಡ ಹೆಂಡತಿ ಜಗಳ ಉಂಡು ಮಲಗೋ ವರೆಗೆ ಅಂತಾ ಇರಬೇಕು. ಆದರೆ ಕೆಲವೊಂದು ಬಾರಿ ಗಂಡ ಹೆಂಡತಿ ಜಗಳ ಮಿತಿ ಮೀರಿದರೆ ಒಂದೊಂದು ಸಲ ಏನ್ ಆಗುತ್ತೋ ಅನ್ನೋದು ಊಹೆಗೆ ಸಿಕ್ಕುವುದಿಲ್ಲ. ಗಂಡ ಹೆಂಡತಿ ಜಗಳ ಮಾಡಿಕೊಳ್ಳುವ ಮುನ್ನ ಒಂದು ಸಲ ಅಲೋಚನೆ ಮಾಡಬೇಕು. ಆದ್ರೆ ಇಲ್ಲೊಂದು ಜೋಡಿ ಯಾವುದು ಯೋಚನೆ ಮಾಡ್ದೆ ದೊಡ್ಡದೊಂದು ಅನಾಚಾರ ನಡೆದು ಹೋಗಿದೆ..‌

ಸತ್ತು ಮಲಗಿರುವ ಗಂಡ.. ರಕ್ತದ ಮಡುವಿನಲ್ಲಿ ಬಿದ್ದಿರುವ ಹೆಂಡತಿ.. ಘಟನೆ ಸ್ಥಳದಲ್ಲಿ ಇಂಚು ಇಂಚು ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು…. ಈ ಎಲ್ಲಾ ದೃಶ್ಯಗಳು ಕಂಡು ಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ದೇವನಹಳ್ಳಿ ಮುಖ್ಯ ರಸ್ತೆಯಲ್ಲಿ ಕಂಡು ಬಂದಿದ್ದು..

ಹೌದು ಗಂಡ ಮೊದಲು ಹೆಂಡತಿಯನ್ನ ಜಿಮ್ ಡಂಬಲ್ಸ್ ನಿಂದ ಹೊಡೆದು ಕೊಲೆ ಮಾಡಿದ್ದಾನೆ ನಂತರ ಕಾರಣಾಂತರಗಳಿಂದ ಗಂಡ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಜಯಪುರ ಪಟ್ಟಣದ ಬಸವಚಾರಿ ಅಲಿಯಾಸ್ ಶಾಮ್ (40) ಮತ್ತು ಸುಮಾ (35) ಮೃತ ದುರ್ದೈವಿಗಳು. ಶಾಮಣ್ಣ ಮತ್ತು ಸುಮಾ ಮಕ್ಕಳು ಶಾಲೆಯಿಂದ ಬಂದ ನಂತರ ಘಟನೆ ಹೊರ ಬಂದಿದೆ.

ಶಾಮಣ್ಣ ಮತ್ತು ಸುಮಾ ಇಬ್ಬರ ನಡುವೆ ಕೌಟುಂಬಿಕ ಕಲಹ ಸಾಕಷ್ಟು ದಿನಗಳಿಂದ ನಡೆಯುತ್ತಿದ್ದು, ಇದು ಅತಿರೇಕಕ್ಕೆ ಹೋಗಿ ಜಗಳ‌ ಉಂಟಾಗಿ ಇಬ್ಬರ ಪ್ರಾಣ ಹೋಗಿದೆ. ಇನ್ನೂ ಇಬ್ಬರೂ ಗಂಡು ಮಕ್ಕಳು ಇದ್ದು, ಗಂಡ ಹೆಂಡತಿ ಕಲಹಕ್ಕೆ ಮಕ್ಕಳು ಅನಾಥಾರಾಗಿದ್ದಾರೆ. ಸದ್ಯಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಪಿ ಸಿ.ಕೆ ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌.

ಈ ಘಟನೆ ವಿಜಯಪುರ ಪಟ್ಟಣದ ಹೊರವಲಯದಲ್ಲಿ ನಡೆದಿದ್ದು, ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣದಿಂದ ವಿಜಯಪುರ ಪಟ್ಟಣದ ಬೆಚ್ಚಿ ಬಿದ್ದಿದೆ.

ಒಟ್ಟಾರೆ ಗಂಡ ಹೆಂಡತಿ ಜಗಳ ಹೆಂಡತಿ ಉಂಡು ಮಲಗೋ ವರೆಗೂ ಅಂತಾ ಇರಬೇಕು ಆದ್ರೆ ಮುಂದುವರೆದರೆ ವಿಕೋಪಕ್ಕೆ ತಲುಪುತ್ತದೆ. ಅದಕ್ಕೊಂದು ತಾಜಾ ಉದಾಹರಣೆ ಇಂದು ವಿಜಯಪುರ ಪಟ್ಟಣದಲ್ಲಿ ನಡೆದಿರುವ ಘಟನೆ. ಹೆಂಡತಿಯನ್ನ ಕೊಲೆ ಮಾಡಿ ಗಂಡ ಆತ್ಮಹತ್ಯೆ ಮಾಡಿಕೊಂಡಿರುವುದು ಅಸಲಿ ಸತ್ಯ ಪೋಲಿಸರ ತನಿಖೆಯಿಂದ ಹೊರಬರಬೇಕಾಗಿದೆ.

Ramesh Babu

Journalist

Recent Posts

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

2 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

2 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

7 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

10 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

12 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

12 hours ago