ಹೆಂಡತಿಗೆ ಜಿಮ್ ಡಂಬಲ್ಸ್​ನಿಂದ ಹೊಡೆದು ಕೊಲೆ ಮಾಡಿ ನಂತರ ಗಂಡ ನೇಣಿಗೆ ಶರಣು

ಗಂಡ ಹೆಂಡತಿ ಜಗಳ ಉಂಡು ಮಲಗೋ ವರೆಗೆ ಅಂತಾ ಇರಬೇಕು. ಆದರೆ ಕೆಲವೊಂದು ಬಾರಿ ಗಂಡ ಹೆಂಡತಿ ಜಗಳ ಮಿತಿ ಮೀರಿದರೆ ಒಂದೊಂದು ಸಲ ಏನ್ ಆಗುತ್ತೋ ಅನ್ನೋದು ಊಹೆಗೆ ಸಿಕ್ಕುವುದಿಲ್ಲ. ಗಂಡ ಹೆಂಡತಿ ಜಗಳ ಮಾಡಿಕೊಳ್ಳುವ ಮುನ್ನ ಒಂದು ಸಲ ಅಲೋಚನೆ ಮಾಡಬೇಕು. ಆದ್ರೆ ಇಲ್ಲೊಂದು ಜೋಡಿ ಯಾವುದು ಯೋಚನೆ ಮಾಡ್ದೆ ದೊಡ್ಡದೊಂದು ಅನಾಚಾರ ನಡೆದು ಹೋಗಿದೆ..‌

ಸತ್ತು ಮಲಗಿರುವ ಗಂಡ.. ರಕ್ತದ ಮಡುವಿನಲ್ಲಿ ಬಿದ್ದಿರುವ ಹೆಂಡತಿ.. ಘಟನೆ ಸ್ಥಳದಲ್ಲಿ ಇಂಚು ಇಂಚು ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು…. ಈ ಎಲ್ಲಾ ದೃಶ್ಯಗಳು ಕಂಡು ಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ದೇವನಹಳ್ಳಿ ಮುಖ್ಯ ರಸ್ತೆಯಲ್ಲಿ ಕಂಡು ಬಂದಿದ್ದು..

ಹೌದು ಗಂಡ ಮೊದಲು ಹೆಂಡತಿಯನ್ನ ಜಿಮ್ ಡಂಬಲ್ಸ್ ನಿಂದ ಹೊಡೆದು ಕೊಲೆ ಮಾಡಿದ್ದಾನೆ ನಂತರ ಕಾರಣಾಂತರಗಳಿಂದ ಗಂಡ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಜಯಪುರ ಪಟ್ಟಣದ ಬಸವಚಾರಿ ಅಲಿಯಾಸ್ ಶಾಮ್ (40) ಮತ್ತು ಸುಮಾ (35) ಮೃತ ದುರ್ದೈವಿಗಳು. ಶಾಮಣ್ಣ ಮತ್ತು ಸುಮಾ ಮಕ್ಕಳು ಶಾಲೆಯಿಂದ ಬಂದ ನಂತರ ಘಟನೆ ಹೊರ ಬಂದಿದೆ.

ಶಾಮಣ್ಣ ಮತ್ತು ಸುಮಾ ಇಬ್ಬರ ನಡುವೆ ಕೌಟುಂಬಿಕ ಕಲಹ ಸಾಕಷ್ಟು ದಿನಗಳಿಂದ ನಡೆಯುತ್ತಿದ್ದು, ಇದು ಅತಿರೇಕಕ್ಕೆ ಹೋಗಿ ಜಗಳ‌ ಉಂಟಾಗಿ ಇಬ್ಬರ ಪ್ರಾಣ ಹೋಗಿದೆ. ಇನ್ನೂ ಇಬ್ಬರೂ ಗಂಡು ಮಕ್ಕಳು ಇದ್ದು, ಗಂಡ ಹೆಂಡತಿ ಕಲಹಕ್ಕೆ ಮಕ್ಕಳು ಅನಾಥಾರಾಗಿದ್ದಾರೆ. ಸದ್ಯಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಪಿ ಸಿ.ಕೆ ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌.

ಈ ಘಟನೆ ವಿಜಯಪುರ ಪಟ್ಟಣದ ಹೊರವಲಯದಲ್ಲಿ ನಡೆದಿದ್ದು, ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣದಿಂದ ವಿಜಯಪುರ ಪಟ್ಟಣದ ಬೆಚ್ಚಿ ಬಿದ್ದಿದೆ.

ಒಟ್ಟಾರೆ ಗಂಡ ಹೆಂಡತಿ ಜಗಳ ಹೆಂಡತಿ ಉಂಡು ಮಲಗೋ ವರೆಗೂ ಅಂತಾ ಇರಬೇಕು ಆದ್ರೆ ಮುಂದುವರೆದರೆ ವಿಕೋಪಕ್ಕೆ ತಲುಪುತ್ತದೆ. ಅದಕ್ಕೊಂದು ತಾಜಾ ಉದಾಹರಣೆ ಇಂದು ವಿಜಯಪುರ ಪಟ್ಟಣದಲ್ಲಿ ನಡೆದಿರುವ ಘಟನೆ. ಹೆಂಡತಿಯನ್ನ ಕೊಲೆ ಮಾಡಿ ಗಂಡ ಆತ್ಮಹತ್ಯೆ ಮಾಡಿಕೊಂಡಿರುವುದು ಅಸಲಿ ಸತ್ಯ ಪೋಲಿಸರ ತನಿಖೆಯಿಂದ ಹೊರಬರಬೇಕಾಗಿದೆ.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

6 minutes ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

12 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

13 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

14 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

14 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

21 hours ago