ದೇವರಹಿಪ್ಪರಗಿ: ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊ*ಲೆ ನಡೆದು ಬರೋಬ್ಬರಿ 24 ದಿನಗಳ ಬಳಿಕ ಆರೋಪಿಯ ಅಸಲಿ ಮುಖ ಅನಾವರಣಗೊಂಡಿದ್ದು, ಸಾಲದ ವಿಚಾರಕ್ಕೆ ಜಗಳ ನಡೆದ ಹಿನ್ನೆಲೆಯಲ್ಲಿ ಹೆಂಡತಿಯನ್ನು ದುಷ್ಟ ಕೊಂದಿದ್ದ ಎಂಬುದು ಪೊಲೀಸರ ತನಿಖೆ ವೇಳೆ ಬಯಲಾಗಿದೆ.
ದೇವರಹಿಪ್ಪರಗಿ ನಿವಾಸಿ ಸರೋಜಿನಿ ಪ್ರಭು ರತ್ನಾಕರ (44) ಕೊ*ಲೆಯಾದವಳು. ಈಕೆಯ ಪತಿ, ಪ್ರಭು ರತ್ನಾಕರ (46) ಕೊ*ಲೆ ಆರೋಪಿ. ಆರೋಪಿ ಪ್ರಭು ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದ. ವಿವಿಧೆಡೆ ಕೈ ಸಾಲ ಮಾಡಿಕೊಂಡು, ವಿಪರೀತ ಸಾಲ ಮಾಡಿದ್ದ. ಸಾಲಗಾರರಿಗೆ ತನ್ನ ಪತ್ನಿಯ ಹೆಸರಿನಲ್ಲಿ ಚೆಕ್ ನೀಡಿದ್ದ. ಈ ಸಂಬಂಧ ಸರೋಜಿನಿ ವಿರುದ್ಧ ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಚೆಕ್ ಬೌನ್ಸ್ ಪ್ರಕರಣ ಕೂಡ ದಾಖಲಾಗಿತ್ತು. ಹೀಗಾಗಿ, ಹಣ ಕಟ್ಟುವಂತೆ ಸರೋಜಿನಿ ಆತನನ್ನು ಒತ್ತಾಯಿಸಿದ್ದಳು. ಈ ವಿಚಾರವಾಗಿ ಪತಿ-ಪತ್ನಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು.
ಹೆಂಡತಿ ಸಾವಿನ ಬಗ್ಗೆ ಕಥೆ ಕಟ್ಟಿದ್ದ ಪಾಪಿ ಪತಿ
ಇದೇ ವಿಚಾರವಾಗಿ ಜನವರಿ 24ರ ರಾತ್ರಿ ಇಬ್ಬರ ನಡುವೆ ಜಗಳವಾಗಿತ್ತು. ಈ ವೇಳೆ, ಕೋಪದ ಭರದಲ್ಲಿ ಪ್ರಭು ರತ್ನಾಕರ, ಖಾರ ಕುಟ್ಟುವ ಹಾರೆಯಿಂದ ಪತ್ನಿಯ ತಲೆಗೆ ಹೊಡೆದಿದ್ದ. ಆಕೆ ರಕ್ತಸ್ರಾವದಿಂದ ಕೊನೆಯುಸಿರೆಳೆದಿದ್ದಳು. ಬಳಿಕ, ಮನೆಯ ಆವರಣದಲ್ಲೇ ಗುಂಡಿ ತೋಡಿ, ಶವವನ್ನು ಹೂತು ಹಾಕಿದ್ದ.
ಫೆ.2ರಂದು ದೇವರಹಿಪ್ಪರಗಿ ಪೊಲೀಸ್ ಠಾಣೆಗೆ ತೆರಳಿ, ಮನೆಗೆ ಸಾಮಾನು ತರಲು ಕಿರಾಣಿ ಅಂಗಡಿಗೆ ಹೋಗಿ ಬರುವೆ ಎಂದು ಹೊರಹೋದ ಪತ್ನಿ ತಿರುಗಿ ಬಂದಿಲ್ಲ. ಆಕೆಗಾಗಿ ಎಲ್ಲಾ ಕಡೆ ಹುಡುಕಾಡಿದ್ದೇನೆ. ಆದರೆ ಆಕೆಯ ಪತ್ತೆಯಾಗಿಲ್ಲ. ನೆಂಟರಿಷ್ಟರ ಮನೆಗಳಿಗೂ ಕರೆ ಮಾಡಿ ಆಕೆಯ ಬಗ್ಗೆ ವಿಚಾರಿಸಿದರೂ ಪತ್ನಿಯ ಸುಳಿವು ಸಿಕ್ಕಿಲ್ಲ ಎಂದು ದೂರು ನೀಡಿದ್ದ. ಪತ್ನಿಯ ತವರು ಮನೆಯವರು, ನೆಂಟರ ಜೊತೆ ಸೇರಿಕೊಂಡು ಆಕೆಯನ್ನು ಹುಡುಕುವ ನಾಟಕವಾಡಿದ್ದ.
ಪೊಲೀಸ್ ತನಿಖೆ ವೇಳೆ ಸತ್ಯ ಒಪ್ಪಿಕೊಂಡ ಗಂಡ
ಪ್ರಕರಣದ ವಿಚಾರಣೆ ನಡೆಸಿದ ಪೊಲೀಸರಿಗೆ ಈತನ ಮೇಲೆಯೇ ಸಂಶಯ ಬಂದಿತ್ತು. ತೀವ್ರ ವಿಚಾರಣೆ ಬಳಿಕ ಆತ ಸತ್ಯ ಒಪ್ಪಿಕೊಂಡಿದ್ದು, ತಾನೇ ಕೊ*ಲೆ ಮಾಡಿದ್ದಾಗಿ ತಿಳಿಸಿದ್ದಾನೆ. ಕೊ*ಲೆ ಆರೋಪದ ಮೇಲೆ ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಹೂತಿದ್ದ ಶವ ಹೊರ ತೆಗೆದು, ಮರಣೋತ್ತರ ಪರೀಕ್ಷೆ ಬಳಿಕ ತವರು ಮನೆಯವರಿಗೆ ಶವ ಹಸ್ತಾಂತರಿಸಿದ್ದಾರೆ.
ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…
ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…
ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ತಲಾ ಒಂದು ಕೋಟಿ ರೂ.…
ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…
ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…