Categories: Crime

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊ*ಲೆ ನಡೆದು ಬರೋಬ್ಬರಿ 24 ದಿನಗಳ ಬಳಿಕ ಆರೋಪಿಯ ಅಸಲಿ ಮುಖ ಅನಾವರಣಗೊಂಡಿದ್ದು, ಸಾಲದ ವಿಚಾರಕ್ಕೆ ಜಗಳ ನಡೆದ ಹಿನ್ನೆಲೆಯಲ್ಲಿ ಹೆಂಡತಿಯನ್ನು ದುಷ್ಟ ಕೊಂದಿದ್ದ ಎಂಬುದು ಪೊಲೀಸರ ತನಿಖೆ ವೇಳೆ ಬಯಲಾಗಿದೆ.

ದೇವರಹಿಪ್ಪರಗಿ ನಿವಾಸಿ ಸರೋಜಿನಿ ಪ್ರಭು ರತ್ನಾಕರ (44) ಕೊ*ಲೆಯಾದವಳು. ಈಕೆಯ ಪತಿ, ಪ್ರಭು ರತ್ನಾಕರ (46) ಕೊ*ಲೆ ಆರೋಪಿ. ಆರೋಪಿ ಪ್ರಭು ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದ. ವಿವಿಧೆಡೆ ಕೈ ಸಾಲ ಮಾಡಿಕೊಂಡು, ವಿಪರೀತ ಸಾಲ ಮಾಡಿದ್ದ. ಸಾಲಗಾರರಿಗೆ ತನ್ನ ಪತ್ನಿಯ ಹೆಸರಿನಲ್ಲಿ ಚೆಕ್ ನೀಡಿದ್ದ. ಈ ಸಂಬಂಧ ಸರೋಜಿನಿ ವಿರುದ್ಧ ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಚೆಕ್ ಬೌನ್ಸ್ ಪ್ರಕರಣ ಕೂಡ ದಾಖಲಾಗಿತ್ತು. ಹೀಗಾಗಿ, ಹಣ ಕಟ್ಟುವಂತೆ ಸರೋಜಿನಿ ಆತನನ್ನು ಒತ್ತಾಯಿಸಿದ್ದಳು. ಈ ವಿಚಾರವಾಗಿ ಪತಿ-ಪತ್ನಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು.

ಹೆಂಡತಿ ಸಾವಿನ ಬಗ್ಗೆ ಕಥೆ ಕಟ್ಟಿದ್ದ ಪಾಪಿ ಪತಿ

ಇದೇ ವಿಚಾರವಾಗಿ ಜನವರಿ 24ರ ರಾತ್ರಿ ಇಬ್ಬರ ನಡುವೆ ಜಗಳವಾಗಿತ್ತು. ಈ ವೇಳೆ, ಕೋಪದ ಭರದಲ್ಲಿ ಪ್ರಭು ರತ್ನಾಕರ, ಖಾರ ಕುಟ್ಟುವ ಹಾರೆಯಿಂದ ಪತ್ನಿಯ ತಲೆಗೆ ಹೊಡೆದಿದ್ದ. ಆಕೆ ರಕ್ತಸ್ರಾವದಿಂದ ಕೊನೆಯುಸಿರೆಳೆದಿದ್ದಳು. ಬಳಿಕ, ಮನೆಯ ಆವರಣದಲ್ಲೇ ಗುಂಡಿ ತೋಡಿ, ಶವವನ್ನು ಹೂತು ಹಾಕಿದ್ದ.

ಫೆ.2ರಂದು ದೇವರಹಿಪ್ಪರಗಿ ಪೊಲೀಸ್‌ ಠಾಣೆಗೆ ತೆರಳಿ, ಮನೆಗೆ ಸಾಮಾನು ತರಲು ಕಿರಾಣಿ ಅಂಗಡಿಗೆ ಹೋಗಿ ಬರುವೆ ಎಂದು ಹೊರಹೋದ ಪತ್ನಿ ತಿರುಗಿ ಬಂದಿಲ್ಲ. ಆಕೆಗಾಗಿ ಎಲ್ಲಾ ಕಡೆ ಹುಡುಕಾಡಿದ್ದೇನೆ. ಆದರೆ ಆಕೆಯ ಪತ್ತೆಯಾಗಿಲ್ಲ. ನೆಂಟರಿಷ್ಟರ ಮನೆಗಳಿಗೂ ಕರೆ ಮಾಡಿ ಆಕೆಯ ಬಗ್ಗೆ ವಿಚಾರಿಸಿದರೂ ಪತ್ನಿಯ ಸುಳಿವು ಸಿಕ್ಕಿಲ್ಲ ಎಂದು ದೂರು ನೀಡಿದ್ದ. ಪತ್ನಿಯ ತವರು ಮನೆಯವರು, ನೆಂಟರ ಜೊತೆ ಸೇರಿಕೊಂಡು ಆಕೆಯನ್ನು ಹುಡುಕುವ ನಾಟಕವಾಡಿದ್ದ.

ಪೊಲೀಸ್ ತನಿಖೆ ವೇಳೆ ಸತ್ಯ ಒಪ್ಪಿಕೊಂಡ ಗಂಡ

ಪ್ರಕರಣದ ವಿಚಾರಣೆ ನಡೆಸಿದ ಪೊಲೀಸರಿಗೆ ಈತನ ಮೇಲೆಯೇ ಸಂಶಯ ಬಂದಿತ್ತು. ತೀವ್ರ ವಿಚಾರಣೆ ಬಳಿಕ ಆತ ಸತ್ಯ ಒಪ್ಪಿಕೊಂಡಿದ್ದು, ತಾನೇ ಕೊ*ಲೆ ಮಾಡಿದ್ದಾಗಿ ತಿಳಿಸಿದ್ದಾನೆ. ಕೊ*ಲೆ ಆರೋಪದ ಮೇಲೆ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಹೂತಿದ್ದ ಶವ ಹೊರ ತೆಗೆದು, ಮರಣೋತ್ತರ ಪರೀಕ್ಷೆ ಬಳಿಕ ತವರು ಮನೆಯವರಿಗೆ ಶವ ಹಸ್ತಾಂತರಿಸಿದ್ದಾರೆ.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

5 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

6 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

10 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

11 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

17 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

18 hours ago