ದೇವರಹಿಪ್ಪರಗಿ: ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊ*ಲೆ ನಡೆದು ಬರೋಬ್ಬರಿ 24 ದಿನಗಳ ಬಳಿಕ ಆರೋಪಿಯ ಅಸಲಿ ಮುಖ ಅನಾವರಣಗೊಂಡಿದ್ದು, ಸಾಲದ ವಿಚಾರಕ್ಕೆ ಜಗಳ ನಡೆದ ಹಿನ್ನೆಲೆಯಲ್ಲಿ ಹೆಂಡತಿಯನ್ನು ದುಷ್ಟ ಕೊಂದಿದ್ದ ಎಂಬುದು ಪೊಲೀಸರ ತನಿಖೆ ವೇಳೆ ಬಯಲಾಗಿದೆ.
ದೇವರಹಿಪ್ಪರಗಿ ನಿವಾಸಿ ಸರೋಜಿನಿ ಪ್ರಭು ರತ್ನಾಕರ (44) ಕೊ*ಲೆಯಾದವಳು. ಈಕೆಯ ಪತಿ, ಪ್ರಭು ರತ್ನಾಕರ (46) ಕೊ*ಲೆ ಆರೋಪಿ. ಆರೋಪಿ ಪ್ರಭು ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದ. ವಿವಿಧೆಡೆ ಕೈ ಸಾಲ ಮಾಡಿಕೊಂಡು, ವಿಪರೀತ ಸಾಲ ಮಾಡಿದ್ದ. ಸಾಲಗಾರರಿಗೆ ತನ್ನ ಪತ್ನಿಯ ಹೆಸರಿನಲ್ಲಿ ಚೆಕ್ ನೀಡಿದ್ದ. ಈ ಸಂಬಂಧ ಸರೋಜಿನಿ ವಿರುದ್ಧ ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಚೆಕ್ ಬೌನ್ಸ್ ಪ್ರಕರಣ ಕೂಡ ದಾಖಲಾಗಿತ್ತು. ಹೀಗಾಗಿ, ಹಣ ಕಟ್ಟುವಂತೆ ಸರೋಜಿನಿ ಆತನನ್ನು ಒತ್ತಾಯಿಸಿದ್ದಳು. ಈ ವಿಚಾರವಾಗಿ ಪತಿ-ಪತ್ನಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು.
ಹೆಂಡತಿ ಸಾವಿನ ಬಗ್ಗೆ ಕಥೆ ಕಟ್ಟಿದ್ದ ಪಾಪಿ ಪತಿ
ಇದೇ ವಿಚಾರವಾಗಿ ಜನವರಿ 24ರ ರಾತ್ರಿ ಇಬ್ಬರ ನಡುವೆ ಜಗಳವಾಗಿತ್ತು. ಈ ವೇಳೆ, ಕೋಪದ ಭರದಲ್ಲಿ ಪ್ರಭು ರತ್ನಾಕರ, ಖಾರ ಕುಟ್ಟುವ ಹಾರೆಯಿಂದ ಪತ್ನಿಯ ತಲೆಗೆ ಹೊಡೆದಿದ್ದ. ಆಕೆ ರಕ್ತಸ್ರಾವದಿಂದ ಕೊನೆಯುಸಿರೆಳೆದಿದ್ದಳು. ಬಳಿಕ, ಮನೆಯ ಆವರಣದಲ್ಲೇ ಗುಂಡಿ ತೋಡಿ, ಶವವನ್ನು ಹೂತು ಹಾಕಿದ್ದ.
ಫೆ.2ರಂದು ದೇವರಹಿಪ್ಪರಗಿ ಪೊಲೀಸ್ ಠಾಣೆಗೆ ತೆರಳಿ, ಮನೆಗೆ ಸಾಮಾನು ತರಲು ಕಿರಾಣಿ ಅಂಗಡಿಗೆ ಹೋಗಿ ಬರುವೆ ಎಂದು ಹೊರಹೋದ ಪತ್ನಿ ತಿರುಗಿ ಬಂದಿಲ್ಲ. ಆಕೆಗಾಗಿ ಎಲ್ಲಾ ಕಡೆ ಹುಡುಕಾಡಿದ್ದೇನೆ. ಆದರೆ ಆಕೆಯ ಪತ್ತೆಯಾಗಿಲ್ಲ. ನೆಂಟರಿಷ್ಟರ ಮನೆಗಳಿಗೂ ಕರೆ ಮಾಡಿ ಆಕೆಯ ಬಗ್ಗೆ ವಿಚಾರಿಸಿದರೂ ಪತ್ನಿಯ ಸುಳಿವು ಸಿಕ್ಕಿಲ್ಲ ಎಂದು ದೂರು ನೀಡಿದ್ದ. ಪತ್ನಿಯ ತವರು ಮನೆಯವರು, ನೆಂಟರ ಜೊತೆ ಸೇರಿಕೊಂಡು ಆಕೆಯನ್ನು ಹುಡುಕುವ ನಾಟಕವಾಡಿದ್ದ.
ಪೊಲೀಸ್ ತನಿಖೆ ವೇಳೆ ಸತ್ಯ ಒಪ್ಪಿಕೊಂಡ ಗಂಡ
ಪ್ರಕರಣದ ವಿಚಾರಣೆ ನಡೆಸಿದ ಪೊಲೀಸರಿಗೆ ಈತನ ಮೇಲೆಯೇ ಸಂಶಯ ಬಂದಿತ್ತು. ತೀವ್ರ ವಿಚಾರಣೆ ಬಳಿಕ ಆತ ಸತ್ಯ ಒಪ್ಪಿಕೊಂಡಿದ್ದು, ತಾನೇ ಕೊ*ಲೆ ಮಾಡಿದ್ದಾಗಿ ತಿಳಿಸಿದ್ದಾನೆ. ಕೊ*ಲೆ ಆರೋಪದ ಮೇಲೆ ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಹೂತಿದ್ದ ಶವ ಹೊರ ತೆಗೆದು, ಮರಣೋತ್ತರ ಪರೀಕ್ಷೆ ಬಳಿಕ ತವರು ಮನೆಯವರಿಗೆ ಶವ ಹಸ್ತಾಂತರಿಸಿದ್ದಾರೆ.
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…
ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…
ಇಂದು ವಿಕಾಸಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ವಿವಿಧ ಇಲಾಖಾ ಮುಖ್ಯಸ್ಥರ ಸಮ್ಮುಖದಲ್ಲಿ ನಡೆದ ಪರಿಶೀಲನಾ…
ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಬಳಿ ನಡೆದಿದೆ..…
ಮೈಸೂರಿನ ತಿ. ನರಸೀಪುರ ತಾಲೂಕಿನ ಕೆಂಪಯ್ಯನ ಹುಂಡಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ.…
ದೊಡ್ಡಬಳ್ಳಾಪುರ ನಗರದಲ್ಲಿ ಇಂದು (ಜೂ.22) 66/11ಕೆವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್…