Categories: Crime

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊ*ಲೆ ನಡೆದು ಬರೋಬ್ಬರಿ 24 ದಿನಗಳ ಬಳಿಕ ಆರೋಪಿಯ ಅಸಲಿ ಮುಖ ಅನಾವರಣಗೊಂಡಿದ್ದು, ಸಾಲದ ವಿಚಾರಕ್ಕೆ ಜಗಳ ನಡೆದ ಹಿನ್ನೆಲೆಯಲ್ಲಿ ಹೆಂಡತಿಯನ್ನು ದುಷ್ಟ ಕೊಂದಿದ್ದ ಎಂಬುದು ಪೊಲೀಸರ ತನಿಖೆ ವೇಳೆ ಬಯಲಾಗಿದೆ.

ದೇವರಹಿಪ್ಪರಗಿ ನಿವಾಸಿ ಸರೋಜಿನಿ ಪ್ರಭು ರತ್ನಾಕರ (44) ಕೊ*ಲೆಯಾದವಳು. ಈಕೆಯ ಪತಿ, ಪ್ರಭು ರತ್ನಾಕರ (46) ಕೊ*ಲೆ ಆರೋಪಿ. ಆರೋಪಿ ಪ್ರಭು ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದ. ವಿವಿಧೆಡೆ ಕೈ ಸಾಲ ಮಾಡಿಕೊಂಡು, ವಿಪರೀತ ಸಾಲ ಮಾಡಿದ್ದ. ಸಾಲಗಾರರಿಗೆ ತನ್ನ ಪತ್ನಿಯ ಹೆಸರಿನಲ್ಲಿ ಚೆಕ್ ನೀಡಿದ್ದ. ಈ ಸಂಬಂಧ ಸರೋಜಿನಿ ವಿರುದ್ಧ ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಚೆಕ್ ಬೌನ್ಸ್ ಪ್ರಕರಣ ಕೂಡ ದಾಖಲಾಗಿತ್ತು. ಹೀಗಾಗಿ, ಹಣ ಕಟ್ಟುವಂತೆ ಸರೋಜಿನಿ ಆತನನ್ನು ಒತ್ತಾಯಿಸಿದ್ದಳು. ಈ ವಿಚಾರವಾಗಿ ಪತಿ-ಪತ್ನಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು.

ಹೆಂಡತಿ ಸಾವಿನ ಬಗ್ಗೆ ಕಥೆ ಕಟ್ಟಿದ್ದ ಪಾಪಿ ಪತಿ

ಇದೇ ವಿಚಾರವಾಗಿ ಜನವರಿ 24ರ ರಾತ್ರಿ ಇಬ್ಬರ ನಡುವೆ ಜಗಳವಾಗಿತ್ತು. ಈ ವೇಳೆ, ಕೋಪದ ಭರದಲ್ಲಿ ಪ್ರಭು ರತ್ನಾಕರ, ಖಾರ ಕುಟ್ಟುವ ಹಾರೆಯಿಂದ ಪತ್ನಿಯ ತಲೆಗೆ ಹೊಡೆದಿದ್ದ. ಆಕೆ ರಕ್ತಸ್ರಾವದಿಂದ ಕೊನೆಯುಸಿರೆಳೆದಿದ್ದಳು. ಬಳಿಕ, ಮನೆಯ ಆವರಣದಲ್ಲೇ ಗುಂಡಿ ತೋಡಿ, ಶವವನ್ನು ಹೂತು ಹಾಕಿದ್ದ.

ಫೆ.2ರಂದು ದೇವರಹಿಪ್ಪರಗಿ ಪೊಲೀಸ್‌ ಠಾಣೆಗೆ ತೆರಳಿ, ಮನೆಗೆ ಸಾಮಾನು ತರಲು ಕಿರಾಣಿ ಅಂಗಡಿಗೆ ಹೋಗಿ ಬರುವೆ ಎಂದು ಹೊರಹೋದ ಪತ್ನಿ ತಿರುಗಿ ಬಂದಿಲ್ಲ. ಆಕೆಗಾಗಿ ಎಲ್ಲಾ ಕಡೆ ಹುಡುಕಾಡಿದ್ದೇನೆ. ಆದರೆ ಆಕೆಯ ಪತ್ತೆಯಾಗಿಲ್ಲ. ನೆಂಟರಿಷ್ಟರ ಮನೆಗಳಿಗೂ ಕರೆ ಮಾಡಿ ಆಕೆಯ ಬಗ್ಗೆ ವಿಚಾರಿಸಿದರೂ ಪತ್ನಿಯ ಸುಳಿವು ಸಿಕ್ಕಿಲ್ಲ ಎಂದು ದೂರು ನೀಡಿದ್ದ. ಪತ್ನಿಯ ತವರು ಮನೆಯವರು, ನೆಂಟರ ಜೊತೆ ಸೇರಿಕೊಂಡು ಆಕೆಯನ್ನು ಹುಡುಕುವ ನಾಟಕವಾಡಿದ್ದ.

ಪೊಲೀಸ್ ತನಿಖೆ ವೇಳೆ ಸತ್ಯ ಒಪ್ಪಿಕೊಂಡ ಗಂಡ

ಪ್ರಕರಣದ ವಿಚಾರಣೆ ನಡೆಸಿದ ಪೊಲೀಸರಿಗೆ ಈತನ ಮೇಲೆಯೇ ಸಂಶಯ ಬಂದಿತ್ತು. ತೀವ್ರ ವಿಚಾರಣೆ ಬಳಿಕ ಆತ ಸತ್ಯ ಒಪ್ಪಿಕೊಂಡಿದ್ದು, ತಾನೇ ಕೊ*ಲೆ ಮಾಡಿದ್ದಾಗಿ ತಿಳಿಸಿದ್ದಾನೆ. ಕೊ*ಲೆ ಆರೋಪದ ಮೇಲೆ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಹೂತಿದ್ದ ಶವ ಹೊರ ತೆಗೆದು, ಮರಣೋತ್ತರ ಪರೀಕ್ಷೆ ಬಳಿಕ ತವರು ಮನೆಯವರಿಗೆ ಶವ ಹಸ್ತಾಂತರಿಸಿದ್ದಾರೆ.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 hour ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

2 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

11 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago