ಹೆಂಡತಿ ಅಗಲಿಕೆಯ ನೋವಿನಿಂದ ಮನನೊಂದು ಗಂಡ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಪಟ್ಟಣದ ತೀಮಾಕನಹಳ್ಳಿಯ ಸ್ಮಶಾನದಲ್ಲಿ ನಡೆದಿದೆ.
ಬಾಗೇಪಲ್ಲಿ ಪಟ್ಟಣದ ಗುರುಮೂರ್ತಿ ನೇಣಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಶರಣಾಗುವ ಮುನ್ನ ಹೆಂಡತಿಯ ಸಮಾಧಿಗೆ ಪೂಜೆ ಮಾಡಿ ಸ್ಮಶಾನದಲ್ಲಿ ನೇಣಿಗೆ ಶರಣಾಗಿದ್ದಾನೆ.
ಮೃತ ಗುರುಮೂರ್ತಿ ಮೌನಿಕಾರನ್ನು ಮದುವೆಯಾಗಿದ್ದು, ದಂಪತಿ ಸುಖ ಜೀವನ ನಡೆಸುತ್ತಿದ್ದರು, ಈ ನಡುವೆ ಹೆಂಡತಿ ಅಕಾಲಿಕ ಮೃತ್ಯುಗೆ ತುತ್ತಾಗಿದ್ದಾಳೆ, ಪತ್ನಿ ಅಗಲಿಕೆಯ ನೋವಿನಿಂದ ನರಳುತ್ತಿದ್ದ ಆತ ಹೆಂಡತಿಯ ಸಮಾಧಿಗೆ ಪೂಜೆ ಮಾಡಿ, ಅಲ್ಲಿಯೇ ಇದ್ದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಬಾಗೇಪಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ವರ್ಷ ಡಿ. 20ರಂದು ಪತ್ನಿ ಮೌನಿಕಾ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಗುರುಮೂರ್ತಿ ಕೂಡಾ ಹೆಂಡತಿ ಸಾವಿನ ನೋವಲ್ಲೇ ಮಾನಸಿಕ ಕಿನ್ನತೆಯಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…
ಹೊಸಕೋಟೆ: ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…
ಕೃಷಿಕರ ನಿರೀಕ್ಷೆ,.... ಅನ್ನದ ಋಣ ಮರೆತ ರಾಜಕಾರಣಿಗಳು,..... ಅನ್ನದಾತರ ಅಂತರಂಗ...... ಮುಂಗಾರು ಮಳೆಯ ಹೊಸ್ತಿಲಲ್ಲಿ.... ರೈತರ ದಾರುಣ ಆತ್ಮಹತ್ಯೆಗಳು...... ಜನ…