ಹೆಂಡತಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಗಂಡನೇ ಹೆಂಡತಿಯನ್ನು ಕೊಲೆ ಮಾಡಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.
ಮೃತ ಹೆಂಡತಿಯನ್ನು 32 ವರ್ಷದ ರಾಬೀಯ ಎಂದು ಗುರುತಿಸಲಾಗಿದೆ. ನಿಜಾಮುದ್ದೀನ್(38) ಎಂಬಾತ ತನ್ನ ಹೆಂಡತಿಯನ್ನು ಕೊಲೆ ಮಾಡಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ತಮ್ಮರಸನಹಳ್ಳಿಯಲ್ಲಿ ಘಟನೆ ನಡೆದಿದೆ. ತಮ್ಮರಸನಹಳ್ಳಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ದಂಪತಿ.
ನಿಜಾಮುದ್ದೀನ್ ಮತ್ತು ರಾಬೀಯ ಮದುವೆಯಾಗಿ ಜೀವನ ಸಾಗಿಸುತ್ತಿದ್ದರು. ಆದರೆ ನಿಜಾಮುದ್ದೀನ್ಗೆ ಹೆಂಡತಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಅನುಮಾನ ಮೂಡಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಮೃತರನ್ನು ಮೂಲತಃ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದ ನಿವಾಸಿಗಳು ಎಂದು ಗುರುತಿಸಿದ್ದು. ಕೊಲೆ ಆರೋಪಿ ವಿರುದ್ದ ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…