ಬೆಂಗಳೂರು: ಬೆಂಗಳೂರಿನಲ್ಲಿ ಅತುಲ್ ಸುಭಾಷ್ ಎಂಬ ಸಾಫ್ಟ್ವೇರ್ ಇಂಜಿನಿಯರ್ ವೈವಾಹಿಕ ಸಮಸ್ಯೆಗಳನ್ನು ಎದುರಿಸಲಾರದೇ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ರೀತಿಯ ಆತ್ಮಹತ್ಯೆಯ ಪ್ರಕರಣಗಳು ದಿನವೂ ನಡೆಯುತ್ತಲೇ ಇರುತ್ತವೆ. ಸದ್ಯ ಈ ಪ್ರಕರಣ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಇದಕ್ಕೆ ಕಾರಣ ಆತ್ಮಹತ್ಯೆಗೂ ಮುನ್ನ ಅತುಲ್ ಸುಭಾಷ್ ಬರೆದಿರುವ 24 ಪುಟಗಳ ಸೂಸೈಡ್ ನೋಟ್ ಮತ್ತು ಸಾಯುವ ಮೊದಲು ಮಾಡಿರುವ 1 ಗಂಟೆಯ ವಿಡಿಯೋ ರೆಕಾರ್ಡ್.
ಪತ್ನಿ ಮತ್ತು ಹೆಂಡತಿಯ ಮನೆಯವರ ಕಾಟ ತಡೆಯಲಾರದೆ ಅತುಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಮೆನ್ಟೂ (#MenToo) ಹ್ಯಾಶ್ಟ್ಯಾಗ್ ಟ್ರೆಂಡಿಂಗ್ನಲ್ಲಿದೆ.
ಲ್ಯಾಪ್ಟ್ಯಾಪ್ನಲ್ಲಿ ಆತ್ಮಹತ್ಯೆಗೆ ಕಾರಣವಾದ ಅಂಶಗಳ ಬಗ್ಗೆ ಸಂಪೂರ್ಣ ವಿವರಗಳನ್ನು ತಿಳಿಸಿ ವಿಡಿಯೋ ರೆಕಾರ್ಡ್ ಮಾಡಿ ಅದನ್ನು ನ್ಯಾಯಾಧೀಶರಿಗೆ, ಪೊಲೀಸರಿಗೆ, ತಮ್ಮ ಕಂಪನಿಯ ಬಾಸ್ಗೆ ಕಳುಹಿಸಿದ್ದಾರೆ. ನಂತರ ಮೊದಲೇ ಪ್ಲಾನ್ ಮಾಡಿದಂತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅತುಲ್ ಸುಭಾಷ್ ಸಾಯುವ ಮುನ್ನ ಕಂಪ್ಯೂಟರ್, ಐಡಿಗಳನ್ನೆಲ್ಲ ಕಂಪನಿಗೆ ವಾಪಸ್ ಮಾಡಿದ್ದರು. ಬಾಕಿ ಪೇಮೆಂಟ್ಗಳನ್ನೆಲ್ಲ ಮಾಡಿದ್ದರು. ಪೊಲೀಸರಿಗೆ ಸಾಕ್ಷಿ ಹುಡುಕಲು ಕಷ್ಟವಾಗಬಾರದೆಂದು ಮೊಬೈಲ್ ಅನ್ ಲಾಕ್ ಮಾಡಿ ಇಟ್ಟಿದ್ದರು. ಕಾರು, ಬೈಕ್ನ ಕೀಗಳನ್ನು ಫ್ರಿಡ್ಜ್ ಮೇಲಿಟ್ಟಿದ್ದರು. ಸೂಸೈಡ್ ನೋಟ್ ಅನ್ನು ಕೆಲವರಿಗೆ ಇಮೇಲ್ ಮೂಲಕ ಕಳುಹಿಸಿದ್ದರು.
ಅತುಲ್ ಸಾವಿಗೆ ತಮ್ಮ ಹೆಂಡತಿ ಆಕ್ಸೆಂಚರ್ನಲ್ಲಿ ಉದ್ಯೋಗಿಯಾಗಿರುವ ನಿಖಿತಾ ಸಿಂಘಾನಿಯಾ ಹಾಗೂ ಆಕೆಯ ಮನೆಯವರೇ ಕಾರಣ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.
ಅತುಲ್ ಪತ್ನಿ ಉತ್ತರ ಪ್ರದೇಶದಲ್ಲಿ ಅತುಲ್ ವಿರುದ್ಧ ಹಲವಾರು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಅವರು ವೀಡಿಯೊದಲ್ಲಿ ಸುದೀರ್ಘವಾಗಿ ಚರ್ಚಿಸಿದ್ದಾರೆ. ತಾವು ರೆಕಾರ್ಡ್ ಮಾಡಿದ ವಿಡಿಯೋದಲ್ಲಿ ಮತ್ತು ಸೂಸೈಡ್ ನೋಟ್ನಲ್ಲಿ ಅವರು “ಪ್ರಸ್ತುತ ಭಾರತದಲ್ಲಿ ಪುರುಷರ ಮೇಲೆ ಕಾನೂನುಬದ್ಧ ನರಮೇಧ ನಡೆಯುತ್ತಿದೆ” ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಿಟೂ ರೀತಿಯಲ್ಲೇ ಮೆನ್ಟೂ ಎಂಬ ಹ್ಯಾಶ್ಟ್ಯಾಗ್ ಅಭಿಯಾನ ಶುರುವಾಗಿದೆ.
ಅತುಲ್ ಸಾವಿಗೆ ಕಾರಣರಾದ ನಿಖಿತಾ ಅವರನ್ನು ಕೂಡಲೇ ಬಂಧಿಸಬೇಕೆಂದು ನೆಟ್ಟಿಗರು ಒತ್ತಾಯಿಸಿದ್ದಾರೆ. ಮಹಿಳೆ ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಸಂಬಂಧಿಸಿದ ಪುರುಷರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತದೆ, ಬಂಧಿಸಲಾಗುತ್ತದೆ. ಅದೇ ರೀತಿ ಮಹಿಳೆಯನ್ನೂ ವಿಚಾರಗಣೆಗೆ ಒಳಪಡಿಸಬೇಕು ಎಂದು ನೆಟ್ಟಿಗರು ಒತ್ತಾಯಿಸಿದ್ದಾರೆ. ಕಾನೂನಿನಲ್ಲಿ ಪುರುಷರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಕೂಡ ಕೆಲವರು ಅಸಮಾಧಾನ ಹೊರಹಾಕಿದ್ದಾರೆ.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…