Categories: Home

ಹೆಂಡತಿ ಮತ್ತು ಪತ್ನಿಯ ಮನೆಯವರ ಕಾಟ ತಡೆಯಲಾರದೆ ಸಾಫ್ಟ್​ವೇರ್ ಇಂಜಿನಿಯರ್ ಆತ್ಮಹತ್ಯೆ: ಸಾವಯುವ ಮೊದಲು 24 ಪುಟಗಳ ಸೂಸೈಡ್ ನೋಟ್ ಬರೆದು, 1 ಗಂಟೆಯ ವಿಡಿಯೋ ರೆಕಾರ್ಡ್ ಮಾಡಿ ಆತ್ಮಹತ್ಯೆ: ಸದ್ಯ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ನಲ್ಲಿರುವ ಮೆನ್​ಟೂ (#MenToo) ಹ್ಯಾಶ್​ಟ್ಯಾಗ್: ಮಿಟೂ ರೀತಿಯಲ್ಲೇ ಮೆನ್​ಟೂ ಹ್ಯಾಶ್​ಟ್ಯಾಗ್​ ಅಭಿಯಾನ ಶುರು

ಬೆಂಗಳೂರು: ಬೆಂಗಳೂರಿನಲ್ಲಿ ಅತುಲ್ ಸುಭಾಷ್ ಎಂಬ ಸಾಫ್ಟ್​ವೇರ್ ಇಂಜಿನಿಯರ್ ವೈವಾಹಿಕ ಸಮಸ್ಯೆಗಳನ್ನು ಎದುರಿಸಲಾರದೇ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ರೀತಿಯ ಆತ್ಮಹತ್ಯೆಯ ಪ್ರಕರಣಗಳು ದಿನವೂ ನಡೆಯುತ್ತಲೇ‌ ಇರುತ್ತವೆ. ಸದ್ಯ ಈ ಪ್ರಕರಣ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಇದಕ್ಕೆ ಕಾರಣ ಆತ್ಮಹತ್ಯೆಗೂ ಮುನ್ನ ಅತುಲ್ ಸುಭಾಷ್ ಬರೆದಿರುವ 24 ಪುಟಗಳ ಸೂಸೈಡ್ ನೋಟ್ ಮತ್ತು ಸಾಯುವ ಮೊದಲು ಮಾಡಿರುವ 1 ಗಂಟೆಯ ವಿಡಿಯೋ ರೆಕಾರ್ಡ್​.

ಪತ್ನಿ ಮತ್ತು ಹೆಂಡತಿಯ ಮನೆಯವರ ಕಾಟ ತಡೆಯಲಾರದೆ ಅತುಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಮೆನ್​ಟೂ (#MenToo) ಹ್ಯಾಶ್​ಟ್ಯಾಗ್ ಟ್ರೆಂಡಿಂಗ್​ನಲ್ಲಿದೆ.

ಲ್ಯಾಪ್​ಟ್ಯಾಪ್​ನಲ್ಲಿ ಆತ್ಮಹತ್ಯೆಗೆ ಕಾರಣವಾದ ಅಂಶಗಳ ಬಗ್ಗೆ ಸಂಪೂರ್ಣ ವಿವರಗಳನ್ನು ತಿಳಿಸಿ ವಿಡಿಯೋ ರೆಕಾರ್ಡ್ ಮಾಡಿ ಅದನ್ನು ನ್ಯಾಯಾಧೀಶರಿಗೆ, ಪೊಲೀಸರಿಗೆ, ತಮ್ಮ ಕಂಪನಿಯ ಬಾಸ್​ಗೆ ಕಳುಹಿಸಿದ್ದಾರೆ. ನಂತರ ಮೊದಲೇ ಪ್ಲಾನ್ ಮಾಡಿದಂತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅತುಲ್ ಸುಭಾಷ್ ಸಾಯುವ ಮುನ್ನ ಕಂಪ್ಯೂಟರ್, ಐಡಿಗಳನ್ನೆಲ್ಲ ಕಂಪನಿಗೆ ವಾಪಸ್ ಮಾಡಿದ್ದರು. ಬಾಕಿ ಪೇಮೆಂಟ್​ಗಳನ್ನೆಲ್ಲ ಮಾಡಿದ್ದರು. ಪೊಲೀಸರಿಗೆ ಸಾಕ್ಷಿ ಹುಡುಕಲು ಕಷ್ಟವಾಗಬಾರದೆಂದು ಮೊಬೈಲ್​ ಅನ್ ಲಾಕ್ ಮಾಡಿ ಇಟ್ಟಿದ್ದರು. ಕಾರು, ಬೈಕ್​ನ ಕೀಗಳನ್ನು ಫ್ರಿಡ್ಜ್​ ಮೇಲಿಟ್ಟಿದ್ದರು. ಸೂಸೈಡ್ ನೋಟ್ ಅನ್ನು ಕೆಲವರಿಗೆ ಇಮೇಲ್ ಮೂಲಕ ಕಳುಹಿಸಿದ್ದರು.

Oplus_131072

ಅತುಲ್ ಸಾವಿಗೆ ತಮ್ಮ ಹೆಂಡತಿ ಆಕ್ಸೆಂಚರ್​​ನಲ್ಲಿ ಉದ್ಯೋಗಿಯಾಗಿರುವ ನಿಖಿತಾ ಸಿಂಘಾನಿಯಾ ಹಾಗೂ ಆಕೆಯ ಮನೆಯವರೇ ಕಾರಣ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

ಅತುಲ್ ಪತ್ನಿ ಉತ್ತರ ಪ್ರದೇಶದಲ್ಲಿ ಅತುಲ್ ವಿರುದ್ಧ ಹಲವಾರು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಅವರು ವೀಡಿಯೊದಲ್ಲಿ ಸುದೀರ್ಘವಾಗಿ ಚರ್ಚಿಸಿದ್ದಾರೆ. ತಾವು ರೆಕಾರ್ಡ್​ ಮಾಡಿದ ವಿಡಿಯೋದಲ್ಲಿ ಮತ್ತು ಸೂಸೈಡ್ ನೋಟ್​ನಲ್ಲಿ ಅವರು “ಪ್ರಸ್ತುತ ಭಾರತದಲ್ಲಿ ಪುರುಷರ ಮೇಲೆ ಕಾನೂನುಬದ್ಧ ನರಮೇಧ ನಡೆಯುತ್ತಿದೆ” ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಿಟೂ ರೀತಿಯಲ್ಲೇ ಮೆನ್​ಟೂ ಎಂಬ ಹ್ಯಾಶ್​ಟ್ಯಾಗ್​ ಅಭಿಯಾನ ಶುರುವಾಗಿದೆ.

ಅತುಲ್ ಸಾವಿಗೆ ಕಾರಣರಾದ ನಿಖಿತಾ ಅವರನ್ನು ಕೂಡಲೇ ಬಂಧಿಸಬೇಕೆಂದು ನೆಟ್ಟಿಗರು ಒತ್ತಾಯಿಸಿದ್ದಾರೆ. ಮಹಿಳೆ ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಸಂಬಂಧಿಸಿದ ಪುರುಷರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತದೆ, ಬಂಧಿಸಲಾಗುತ್ತದೆ. ಅದೇ ರೀತಿ ಮಹಿಳೆಯನ್ನೂ ವಿಚಾರಗಣೆಗೆ ಒಳಪಡಿಸಬೇಕು ಎಂದು ನೆಟ್ಟಿಗರು ಒತ್ತಾಯಿಸಿದ್ದಾರೆ. ಕಾನೂನಿನಲ್ಲಿ ಪುರುಷರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಕೂಡ ಕೆಲವರು ಅಸಮಾಧಾನ ಹೊರಹಾಕಿದ್ದಾರೆ.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

9 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

9 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

11 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

12 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

14 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

20 hours ago