ಬೆಂಗಳೂರು: ಬೆಂಗಳೂರಿನಲ್ಲಿ ಅತುಲ್ ಸುಭಾಷ್ ಎಂಬ ಸಾಫ್ಟ್ವೇರ್ ಇಂಜಿನಿಯರ್ ವೈವಾಹಿಕ ಸಮಸ್ಯೆಗಳನ್ನು ಎದುರಿಸಲಾರದೇ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ರೀತಿಯ ಆತ್ಮಹತ್ಯೆಯ ಪ್ರಕರಣಗಳು ದಿನವೂ ನಡೆಯುತ್ತಲೇ ಇರುತ್ತವೆ. ಸದ್ಯ ಈ ಪ್ರಕರಣ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಇದಕ್ಕೆ ಕಾರಣ ಆತ್ಮಹತ್ಯೆಗೂ ಮುನ್ನ ಅತುಲ್ ಸುಭಾಷ್ ಬರೆದಿರುವ 24 ಪುಟಗಳ ಸೂಸೈಡ್ ನೋಟ್ ಮತ್ತು ಸಾಯುವ ಮೊದಲು ಮಾಡಿರುವ 1 ಗಂಟೆಯ ವಿಡಿಯೋ ರೆಕಾರ್ಡ್.
ಪತ್ನಿ ಮತ್ತು ಹೆಂಡತಿಯ ಮನೆಯವರ ಕಾಟ ತಡೆಯಲಾರದೆ ಅತುಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಮೆನ್ಟೂ (#MenToo) ಹ್ಯಾಶ್ಟ್ಯಾಗ್ ಟ್ರೆಂಡಿಂಗ್ನಲ್ಲಿದೆ.
ಲ್ಯಾಪ್ಟ್ಯಾಪ್ನಲ್ಲಿ ಆತ್ಮಹತ್ಯೆಗೆ ಕಾರಣವಾದ ಅಂಶಗಳ ಬಗ್ಗೆ ಸಂಪೂರ್ಣ ವಿವರಗಳನ್ನು ತಿಳಿಸಿ ವಿಡಿಯೋ ರೆಕಾರ್ಡ್ ಮಾಡಿ ಅದನ್ನು ನ್ಯಾಯಾಧೀಶರಿಗೆ, ಪೊಲೀಸರಿಗೆ, ತಮ್ಮ ಕಂಪನಿಯ ಬಾಸ್ಗೆ ಕಳುಹಿಸಿದ್ದಾರೆ. ನಂತರ ಮೊದಲೇ ಪ್ಲಾನ್ ಮಾಡಿದಂತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅತುಲ್ ಸುಭಾಷ್ ಸಾಯುವ ಮುನ್ನ ಕಂಪ್ಯೂಟರ್, ಐಡಿಗಳನ್ನೆಲ್ಲ ಕಂಪನಿಗೆ ವಾಪಸ್ ಮಾಡಿದ್ದರು. ಬಾಕಿ ಪೇಮೆಂಟ್ಗಳನ್ನೆಲ್ಲ ಮಾಡಿದ್ದರು. ಪೊಲೀಸರಿಗೆ ಸಾಕ್ಷಿ ಹುಡುಕಲು ಕಷ್ಟವಾಗಬಾರದೆಂದು ಮೊಬೈಲ್ ಅನ್ ಲಾಕ್ ಮಾಡಿ ಇಟ್ಟಿದ್ದರು. ಕಾರು, ಬೈಕ್ನ ಕೀಗಳನ್ನು ಫ್ರಿಡ್ಜ್ ಮೇಲಿಟ್ಟಿದ್ದರು. ಸೂಸೈಡ್ ನೋಟ್ ಅನ್ನು ಕೆಲವರಿಗೆ ಇಮೇಲ್ ಮೂಲಕ ಕಳುಹಿಸಿದ್ದರು.
ಅತುಲ್ ಸಾವಿಗೆ ತಮ್ಮ ಹೆಂಡತಿ ಆಕ್ಸೆಂಚರ್ನಲ್ಲಿ ಉದ್ಯೋಗಿಯಾಗಿರುವ ನಿಖಿತಾ ಸಿಂಘಾನಿಯಾ ಹಾಗೂ ಆಕೆಯ ಮನೆಯವರೇ ಕಾರಣ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.
ಅತುಲ್ ಪತ್ನಿ ಉತ್ತರ ಪ್ರದೇಶದಲ್ಲಿ ಅತುಲ್ ವಿರುದ್ಧ ಹಲವಾರು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಅವರು ವೀಡಿಯೊದಲ್ಲಿ ಸುದೀರ್ಘವಾಗಿ ಚರ್ಚಿಸಿದ್ದಾರೆ. ತಾವು ರೆಕಾರ್ಡ್ ಮಾಡಿದ ವಿಡಿಯೋದಲ್ಲಿ ಮತ್ತು ಸೂಸೈಡ್ ನೋಟ್ನಲ್ಲಿ ಅವರು “ಪ್ರಸ್ತುತ ಭಾರತದಲ್ಲಿ ಪುರುಷರ ಮೇಲೆ ಕಾನೂನುಬದ್ಧ ನರಮೇಧ ನಡೆಯುತ್ತಿದೆ” ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಿಟೂ ರೀತಿಯಲ್ಲೇ ಮೆನ್ಟೂ ಎಂಬ ಹ್ಯಾಶ್ಟ್ಯಾಗ್ ಅಭಿಯಾನ ಶುರುವಾಗಿದೆ.
ಅತುಲ್ ಸಾವಿಗೆ ಕಾರಣರಾದ ನಿಖಿತಾ ಅವರನ್ನು ಕೂಡಲೇ ಬಂಧಿಸಬೇಕೆಂದು ನೆಟ್ಟಿಗರು ಒತ್ತಾಯಿಸಿದ್ದಾರೆ. ಮಹಿಳೆ ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಸಂಬಂಧಿಸಿದ ಪುರುಷರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತದೆ, ಬಂಧಿಸಲಾಗುತ್ತದೆ. ಅದೇ ರೀತಿ ಮಹಿಳೆಯನ್ನೂ ವಿಚಾರಗಣೆಗೆ ಒಳಪಡಿಸಬೇಕು ಎಂದು ನೆಟ್ಟಿಗರು ಒತ್ತಾಯಿಸಿದ್ದಾರೆ. ಕಾನೂನಿನಲ್ಲಿ ಪುರುಷರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಕೂಡ ಕೆಲವರು ಅಸಮಾಧಾನ ಹೊರಹಾಕಿದ್ದಾರೆ.
ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…