Categories: Home

ಹೆಂಡತಿ ಮತ್ತು ಪತ್ನಿಯ ಮನೆಯವರ ಕಾಟ ತಡೆಯಲಾರದೆ ಸಾಫ್ಟ್​ವೇರ್ ಇಂಜಿನಿಯರ್ ಆತ್ಮಹತ್ಯೆ: ಸಾವಯುವ ಮೊದಲು 24 ಪುಟಗಳ ಸೂಸೈಡ್ ನೋಟ್ ಬರೆದು, 1 ಗಂಟೆಯ ವಿಡಿಯೋ ರೆಕಾರ್ಡ್ ಮಾಡಿ ಆತ್ಮಹತ್ಯೆ: ಸದ್ಯ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ನಲ್ಲಿರುವ ಮೆನ್​ಟೂ (#MenToo) ಹ್ಯಾಶ್​ಟ್ಯಾಗ್: ಮಿಟೂ ರೀತಿಯಲ್ಲೇ ಮೆನ್​ಟೂ ಹ್ಯಾಶ್​ಟ್ಯಾಗ್​ ಅಭಿಯಾನ ಶುರು

ಬೆಂಗಳೂರು: ಬೆಂಗಳೂರಿನಲ್ಲಿ ಅತುಲ್ ಸುಭಾಷ್ ಎಂಬ ಸಾಫ್ಟ್​ವೇರ್ ಇಂಜಿನಿಯರ್ ವೈವಾಹಿಕ ಸಮಸ್ಯೆಗಳನ್ನು ಎದುರಿಸಲಾರದೇ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ರೀತಿಯ ಆತ್ಮಹತ್ಯೆಯ ಪ್ರಕರಣಗಳು ದಿನವೂ ನಡೆಯುತ್ತಲೇ‌ ಇರುತ್ತವೆ. ಸದ್ಯ ಈ ಪ್ರಕರಣ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಇದಕ್ಕೆ ಕಾರಣ ಆತ್ಮಹತ್ಯೆಗೂ ಮುನ್ನ ಅತುಲ್ ಸುಭಾಷ್ ಬರೆದಿರುವ 24 ಪುಟಗಳ ಸೂಸೈಡ್ ನೋಟ್ ಮತ್ತು ಸಾಯುವ ಮೊದಲು ಮಾಡಿರುವ 1 ಗಂಟೆಯ ವಿಡಿಯೋ ರೆಕಾರ್ಡ್​.

ಪತ್ನಿ ಮತ್ತು ಹೆಂಡತಿಯ ಮನೆಯವರ ಕಾಟ ತಡೆಯಲಾರದೆ ಅತುಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಮೆನ್​ಟೂ (#MenToo) ಹ್ಯಾಶ್​ಟ್ಯಾಗ್ ಟ್ರೆಂಡಿಂಗ್​ನಲ್ಲಿದೆ.

ಲ್ಯಾಪ್​ಟ್ಯಾಪ್​ನಲ್ಲಿ ಆತ್ಮಹತ್ಯೆಗೆ ಕಾರಣವಾದ ಅಂಶಗಳ ಬಗ್ಗೆ ಸಂಪೂರ್ಣ ವಿವರಗಳನ್ನು ತಿಳಿಸಿ ವಿಡಿಯೋ ರೆಕಾರ್ಡ್ ಮಾಡಿ ಅದನ್ನು ನ್ಯಾಯಾಧೀಶರಿಗೆ, ಪೊಲೀಸರಿಗೆ, ತಮ್ಮ ಕಂಪನಿಯ ಬಾಸ್​ಗೆ ಕಳುಹಿಸಿದ್ದಾರೆ. ನಂತರ ಮೊದಲೇ ಪ್ಲಾನ್ ಮಾಡಿದಂತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅತುಲ್ ಸುಭಾಷ್ ಸಾಯುವ ಮುನ್ನ ಕಂಪ್ಯೂಟರ್, ಐಡಿಗಳನ್ನೆಲ್ಲ ಕಂಪನಿಗೆ ವಾಪಸ್ ಮಾಡಿದ್ದರು. ಬಾಕಿ ಪೇಮೆಂಟ್​ಗಳನ್ನೆಲ್ಲ ಮಾಡಿದ್ದರು. ಪೊಲೀಸರಿಗೆ ಸಾಕ್ಷಿ ಹುಡುಕಲು ಕಷ್ಟವಾಗಬಾರದೆಂದು ಮೊಬೈಲ್​ ಅನ್ ಲಾಕ್ ಮಾಡಿ ಇಟ್ಟಿದ್ದರು. ಕಾರು, ಬೈಕ್​ನ ಕೀಗಳನ್ನು ಫ್ರಿಡ್ಜ್​ ಮೇಲಿಟ್ಟಿದ್ದರು. ಸೂಸೈಡ್ ನೋಟ್ ಅನ್ನು ಕೆಲವರಿಗೆ ಇಮೇಲ್ ಮೂಲಕ ಕಳುಹಿಸಿದ್ದರು.

Oplus_131072

ಅತುಲ್ ಸಾವಿಗೆ ತಮ್ಮ ಹೆಂಡತಿ ಆಕ್ಸೆಂಚರ್​​ನಲ್ಲಿ ಉದ್ಯೋಗಿಯಾಗಿರುವ ನಿಖಿತಾ ಸಿಂಘಾನಿಯಾ ಹಾಗೂ ಆಕೆಯ ಮನೆಯವರೇ ಕಾರಣ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

ಅತುಲ್ ಪತ್ನಿ ಉತ್ತರ ಪ್ರದೇಶದಲ್ಲಿ ಅತುಲ್ ವಿರುದ್ಧ ಹಲವಾರು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಅವರು ವೀಡಿಯೊದಲ್ಲಿ ಸುದೀರ್ಘವಾಗಿ ಚರ್ಚಿಸಿದ್ದಾರೆ. ತಾವು ರೆಕಾರ್ಡ್​ ಮಾಡಿದ ವಿಡಿಯೋದಲ್ಲಿ ಮತ್ತು ಸೂಸೈಡ್ ನೋಟ್​ನಲ್ಲಿ ಅವರು “ಪ್ರಸ್ತುತ ಭಾರತದಲ್ಲಿ ಪುರುಷರ ಮೇಲೆ ಕಾನೂನುಬದ್ಧ ನರಮೇಧ ನಡೆಯುತ್ತಿದೆ” ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಿಟೂ ರೀತಿಯಲ್ಲೇ ಮೆನ್​ಟೂ ಎಂಬ ಹ್ಯಾಶ್​ಟ್ಯಾಗ್​ ಅಭಿಯಾನ ಶುರುವಾಗಿದೆ.

ಅತುಲ್ ಸಾವಿಗೆ ಕಾರಣರಾದ ನಿಖಿತಾ ಅವರನ್ನು ಕೂಡಲೇ ಬಂಧಿಸಬೇಕೆಂದು ನೆಟ್ಟಿಗರು ಒತ್ತಾಯಿಸಿದ್ದಾರೆ. ಮಹಿಳೆ ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಸಂಬಂಧಿಸಿದ ಪುರುಷರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತದೆ, ಬಂಧಿಸಲಾಗುತ್ತದೆ. ಅದೇ ರೀತಿ ಮಹಿಳೆಯನ್ನೂ ವಿಚಾರಗಣೆಗೆ ಒಳಪಡಿಸಬೇಕು ಎಂದು ನೆಟ್ಟಿಗರು ಒತ್ತಾಯಿಸಿದ್ದಾರೆ. ಕಾನೂನಿನಲ್ಲಿ ಪುರುಷರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಕೂಡ ಕೆಲವರು ಅಸಮಾಧಾನ ಹೊರಹಾಕಿದ್ದಾರೆ.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

9 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

10 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

16 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

1 day ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

1 day ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

1 day ago