ಬೆಂಗಳೂರು: ಬೆಂಗಳೂರಿನಲ್ಲಿ ಅತುಲ್ ಸುಭಾಷ್ ಎಂಬ ಸಾಫ್ಟ್ವೇರ್ ಇಂಜಿನಿಯರ್ ವೈವಾಹಿಕ ಸಮಸ್ಯೆಗಳನ್ನು ಎದುರಿಸಲಾರದೇ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ರೀತಿಯ ಆತ್ಮಹತ್ಯೆಯ ಪ್ರಕರಣಗಳು ದಿನವೂ ನಡೆಯುತ್ತಲೇ ಇರುತ್ತವೆ. ಸದ್ಯ ಈ ಪ್ರಕರಣ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಇದಕ್ಕೆ ಕಾರಣ ಆತ್ಮಹತ್ಯೆಗೂ ಮುನ್ನ ಅತುಲ್ ಸುಭಾಷ್ ಬರೆದಿರುವ 24 ಪುಟಗಳ ಸೂಸೈಡ್ ನೋಟ್ ಮತ್ತು ಸಾಯುವ ಮೊದಲು ಮಾಡಿರುವ 1 ಗಂಟೆಯ ವಿಡಿಯೋ ರೆಕಾರ್ಡ್.
ಪತ್ನಿ ಮತ್ತು ಹೆಂಡತಿಯ ಮನೆಯವರ ಕಾಟ ತಡೆಯಲಾರದೆ ಅತುಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಮೆನ್ಟೂ (#MenToo) ಹ್ಯಾಶ್ಟ್ಯಾಗ್ ಟ್ರೆಂಡಿಂಗ್ನಲ್ಲಿದೆ.
ಲ್ಯಾಪ್ಟ್ಯಾಪ್ನಲ್ಲಿ ಆತ್ಮಹತ್ಯೆಗೆ ಕಾರಣವಾದ ಅಂಶಗಳ ಬಗ್ಗೆ ಸಂಪೂರ್ಣ ವಿವರಗಳನ್ನು ತಿಳಿಸಿ ವಿಡಿಯೋ ರೆಕಾರ್ಡ್ ಮಾಡಿ ಅದನ್ನು ನ್ಯಾಯಾಧೀಶರಿಗೆ, ಪೊಲೀಸರಿಗೆ, ತಮ್ಮ ಕಂಪನಿಯ ಬಾಸ್ಗೆ ಕಳುಹಿಸಿದ್ದಾರೆ. ನಂತರ ಮೊದಲೇ ಪ್ಲಾನ್ ಮಾಡಿದಂತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅತುಲ್ ಸುಭಾಷ್ ಸಾಯುವ ಮುನ್ನ ಕಂಪ್ಯೂಟರ್, ಐಡಿಗಳನ್ನೆಲ್ಲ ಕಂಪನಿಗೆ ವಾಪಸ್ ಮಾಡಿದ್ದರು. ಬಾಕಿ ಪೇಮೆಂಟ್ಗಳನ್ನೆಲ್ಲ ಮಾಡಿದ್ದರು. ಪೊಲೀಸರಿಗೆ ಸಾಕ್ಷಿ ಹುಡುಕಲು ಕಷ್ಟವಾಗಬಾರದೆಂದು ಮೊಬೈಲ್ ಅನ್ ಲಾಕ್ ಮಾಡಿ ಇಟ್ಟಿದ್ದರು. ಕಾರು, ಬೈಕ್ನ ಕೀಗಳನ್ನು ಫ್ರಿಡ್ಜ್ ಮೇಲಿಟ್ಟಿದ್ದರು. ಸೂಸೈಡ್ ನೋಟ್ ಅನ್ನು ಕೆಲವರಿಗೆ ಇಮೇಲ್ ಮೂಲಕ ಕಳುಹಿಸಿದ್ದರು.
ಅತುಲ್ ಸಾವಿಗೆ ತಮ್ಮ ಹೆಂಡತಿ ಆಕ್ಸೆಂಚರ್ನಲ್ಲಿ ಉದ್ಯೋಗಿಯಾಗಿರುವ ನಿಖಿತಾ ಸಿಂಘಾನಿಯಾ ಹಾಗೂ ಆಕೆಯ ಮನೆಯವರೇ ಕಾರಣ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.
ಅತುಲ್ ಪತ್ನಿ ಉತ್ತರ ಪ್ರದೇಶದಲ್ಲಿ ಅತುಲ್ ವಿರುದ್ಧ ಹಲವಾರು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಅವರು ವೀಡಿಯೊದಲ್ಲಿ ಸುದೀರ್ಘವಾಗಿ ಚರ್ಚಿಸಿದ್ದಾರೆ. ತಾವು ರೆಕಾರ್ಡ್ ಮಾಡಿದ ವಿಡಿಯೋದಲ್ಲಿ ಮತ್ತು ಸೂಸೈಡ್ ನೋಟ್ನಲ್ಲಿ ಅವರು “ಪ್ರಸ್ತುತ ಭಾರತದಲ್ಲಿ ಪುರುಷರ ಮೇಲೆ ಕಾನೂನುಬದ್ಧ ನರಮೇಧ ನಡೆಯುತ್ತಿದೆ” ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಿಟೂ ರೀತಿಯಲ್ಲೇ ಮೆನ್ಟೂ ಎಂಬ ಹ್ಯಾಶ್ಟ್ಯಾಗ್ ಅಭಿಯಾನ ಶುರುವಾಗಿದೆ.
ಅತುಲ್ ಸಾವಿಗೆ ಕಾರಣರಾದ ನಿಖಿತಾ ಅವರನ್ನು ಕೂಡಲೇ ಬಂಧಿಸಬೇಕೆಂದು ನೆಟ್ಟಿಗರು ಒತ್ತಾಯಿಸಿದ್ದಾರೆ. ಮಹಿಳೆ ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಸಂಬಂಧಿಸಿದ ಪುರುಷರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತದೆ, ಬಂಧಿಸಲಾಗುತ್ತದೆ. ಅದೇ ರೀತಿ ಮಹಿಳೆಯನ್ನೂ ವಿಚಾರಗಣೆಗೆ ಒಳಪಡಿಸಬೇಕು ಎಂದು ನೆಟ್ಟಿಗರು ಒತ್ತಾಯಿಸಿದ್ದಾರೆ. ಕಾನೂನಿನಲ್ಲಿ ಪುರುಷರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಕೂಡ ಕೆಲವರು ಅಸಮಾಧಾನ ಹೊರಹಾಕಿದ್ದಾರೆ.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…