ತಾಲೂಕಿನಲ್ಲಿ ಇತ್ತೀಚಿಗೆ ಸರಗಳ್ಳತನ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿರುವುದರಿಂದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ಕಂಟನಕುಂಟೆ, ಗುಂಜೂರು ಟೋಲ್, ಮೆಳೇಕೋಟೆ ಕ್ರಾಸ್, ಕೋಡಿಗೆಹಳ್ಳಿ ಮುಂತಾದ ಕಡೆಗಳಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿ ವಾಹನ ತಪಾಸಣೆ ನಡೆಸಲಾಗುತ್ತಿದೆ.
ಸಾರ್ವಜನಿಕರೇ ಎಚ್ಚರ… ನಿರ್ಜನ ಪ್ರದೇಶಗಳು, ರಸ್ತೆಗಳು, ಉದ್ಯಾನವನಗಳಲ್ಲಿ ಒಂಟಿಯಾಗಿ ಸಂಚರಿಸುವಾಗ ಅಥವಾ ಇದ್ದಾಗ ಎಚ್ಚರದಿಂದಿರಿ.
ಚಿನ್ನಾಭರಣಗಳನ್ನು ಸಾರ್ವಜನಿಕರಿಗೆ ಪ್ರದರ್ಶನಗೊಳ್ಳುವಂತೆ ಧರಿಸಬೇಡಿ, ದರೋಡೆಕೋರರು ನಿಮ್ಮ ಆಭರಣಗಳಿಗೆ ಆಸೆಪಟ್ಟು ನಿಮ್ಮ ಮೇಲೆ ಮಾರಣಾಂತಿಕವಾಗಿ ದಾಳಿ ಮಾಡಬಹುದು ಮತ್ತು ನಿಮ್ಮ ಚಿನ್ನಾಭರಣಗಳನ್ನು ಕದ್ದು ಓಡಿಹೋಗಬಹುದು. ಅಂತಹ ಸಮಯದಲ್ಲಿ ನಮ್ಮ ಸಹಾಯವಾಣಿ ಸಂಖ್ಯೆ 112 ಗೆ ಕರೆ ಮಾಡಿ.
ಬೆಂಗಳೂರು ಜಿಲ್ಲಾ ಪೊಲೀಸರು ಸದಾ ಸಾರ್ವಜನಿಕರ ಸೇವೆಯಲ್ಲಿರುತ್ತಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಪ್ರಕಟಣೆ ಹೊರಡಿಸಿದೆ.
ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…
ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…
ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…
ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…
ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…
ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…