ತಾಲೂಕಿನಲ್ಲಿ ಇತ್ತೀಚಿಗೆ ಸರಗಳ್ಳತನ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿರುವುದರಿಂದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ಕಂಟನಕುಂಟೆ, ಗುಂಜೂರು ಟೋಲ್, ಮೆಳೇಕೋಟೆ ಕ್ರಾಸ್, ಕೋಡಿಗೆಹಳ್ಳಿ ಮುಂತಾದ ಕಡೆಗಳಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿ ವಾಹನ ತಪಾಸಣೆ ನಡೆಸಲಾಗುತ್ತಿದೆ.
ಸಾರ್ವಜನಿಕರೇ ಎಚ್ಚರ… ನಿರ್ಜನ ಪ್ರದೇಶಗಳು, ರಸ್ತೆಗಳು, ಉದ್ಯಾನವನಗಳಲ್ಲಿ ಒಂಟಿಯಾಗಿ ಸಂಚರಿಸುವಾಗ ಅಥವಾ ಇದ್ದಾಗ ಎಚ್ಚರದಿಂದಿರಿ.
ಚಿನ್ನಾಭರಣಗಳನ್ನು ಸಾರ್ವಜನಿಕರಿಗೆ ಪ್ರದರ್ಶನಗೊಳ್ಳುವಂತೆ ಧರಿಸಬೇಡಿ, ದರೋಡೆಕೋರರು ನಿಮ್ಮ ಆಭರಣಗಳಿಗೆ ಆಸೆಪಟ್ಟು ನಿಮ್ಮ ಮೇಲೆ ಮಾರಣಾಂತಿಕವಾಗಿ ದಾಳಿ ಮಾಡಬಹುದು ಮತ್ತು ನಿಮ್ಮ ಚಿನ್ನಾಭರಣಗಳನ್ನು ಕದ್ದು ಓಡಿಹೋಗಬಹುದು. ಅಂತಹ ಸಮಯದಲ್ಲಿ ನಮ್ಮ ಸಹಾಯವಾಣಿ ಸಂಖ್ಯೆ 112 ಗೆ ಕರೆ ಮಾಡಿ.
ಬೆಂಗಳೂರು ಜಿಲ್ಲಾ ಪೊಲೀಸರು ಸದಾ ಸಾರ್ವಜನಿಕರ ಸೇವೆಯಲ್ಲಿರುತ್ತಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಪ್ರಕಟಣೆ ಹೊರಡಿಸಿದೆ.
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…
ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…