ಹೆಚ್ಚಾದ ಸರಗಳ್ಳತನ ಪ್ರಕರಣಗಳು: ತಾಲೂಕಿನ ನಾಕಾಬಂದಿಗಳಲ್ಲಿ ಚುರುಕುಗೊಂಡ ತಪಾಸಣೆ

ತಾಲೂಕಿನಲ್ಲಿ ಇತ್ತೀಚಿಗೆ ಸರಗಳ್ಳತನ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿರುವುದರಿಂದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ಕಂಟನಕುಂಟೆ, ಗುಂಜೂರು ಟೋಲ್, ಮೆಳೇಕೋಟೆ ಕ್ರಾಸ್, ಕೋಡಿಗೆಹಳ್ಳಿ ಮುಂತಾದ ಕಡೆಗಳಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿ ವಾಹನ ತಪಾಸಣೆ ನಡೆಸಲಾಗುತ್ತಿದೆ.

ಸರಗಳ್ಳತನ, ದರೋಡೆ, ಕಳ್ಳತನಗಳ ಇತರೆ ಅಪರಾಧ ಕೃತ್ಯಗಳನ್ನು ತಡೆಯಲು ನಗರ ಹಾಗೂ ಗ್ರಾಮಾಂತರ ಪೊಲೀಸರು ಸರಣಿ ಕ್ರಮಗಳನ್ನು ಕೈಗೊಂಡಿದ್ದಾರೆ.

ಹೆಚ್ಚುತ್ತಿರುವ ಅಪರಾಧ ಘಟನೆಗಳನ್ನು ತಡೆಯಲು, ಪೊಲೀಸರು ಬೈಕ್ ಹಾಗೂ ಇತರೆ ವಾಹನಗಳ ಯಾದೃಚ್ಛಿಕ ತಪಾಸಣೆಯನ್ನು ಪ್ರಾರಂಭಿಸಿದ್ದಾರೆ.

ಈ ವೇಳೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಅವರು ಕೂಡ ವಾಹನಗಳ ತಪಾಸಣೆ ನಡೆಸಿದ್ದಾರೆ.

ಸಾರ್ವಜನಿಕರೇ ಎಚ್ಚರ… ನಿರ್ಜನ ಪ್ರದೇಶಗಳು, ರಸ್ತೆಗಳು, ಉದ್ಯಾನವನಗಳಲ್ಲಿ ಒಂಟಿಯಾಗಿ ಸಂಚರಿಸುವಾಗ ಅಥವಾ ಇದ್ದಾಗ ಎಚ್ಚರದಿಂದಿರಿ.

ಚಿನ್ನಾಭರಣಗಳನ್ನು ಸಾರ್ವಜನಿಕರಿಗೆ ಪ್ರದರ್ಶನಗೊಳ್ಳುವಂತೆ ಧರಿಸಬೇಡಿ, ದರೋಡೆಕೋರರು ನಿಮ್ಮ ಆಭರಣಗಳಿಗೆ ಆಸೆಪಟ್ಟು ನಿಮ್ಮ ಮೇಲೆ ಮಾರಣಾಂತಿಕವಾಗಿ ದಾಳಿ ಮಾಡಬಹುದು ಮತ್ತು ನಿಮ್ಮ ಚಿನ್ನಾಭರಣಗಳನ್ನು ಕದ್ದು ಓಡಿಹೋಗಬಹುದು. ಅಂತಹ ಸಮಯದಲ್ಲಿ ನಮ್ಮ ಸಹಾಯವಾಣಿ ಸಂಖ್ಯೆ 112 ಗೆ ಕರೆ ಮಾಡಿ.

ಬೆಂಗಳೂರು ಜಿಲ್ಲಾ ಪೊಲೀಸರು ಸದಾ ಸಾರ್ವಜನಿಕರ ಸೇವೆಯಲ್ಲಿರುತ್ತಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಪ್ರಕಟಣೆ ಹೊರಡಿಸಿದೆ.

Ramesh Babu

Journalist

Recent Posts

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

1 hour ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

5 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

5 hours ago

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

9 hours ago

ಬಸ್ ಏರಿದ್ರೆ ಗಮ್ಯಸ್ಥಾನ ಸೇರುತ್ತೇವೆ ಅನ್ನೋ ಗ್ಯಾರಂಟಿ ಇಲ್ಲ!: ಗುಂಡಮ್ಮಗೆರೆ–ಹೊಸಹಳ್ಳಿ ಮಾರ್ಗದಲ್ಲಿ ಪದೇ ಪದೇ ಕೆಟ್ಟು ನಿಲ್ಲುವ ಸಾರಿಗೆ ಬಸ್‌ಗಳು

ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್‌ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…

9 hours ago

ಕೃಷ್ಣ ಜನ್ಮಾಷ್ಟಮಿಯ ನೆಪದಲ್ಲಿ ಒಂದಷ್ಟು ಚಿಂತನೆ……

ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…

11 hours ago