ಹೆಚ್ಚಿನ ಹಣ ಪಡೆದು ಗಾರೆ ಮೇಸ್ತ್ರಿ ವಂಚನೆ : ಮನೆ ಮಾಲೀಕ ಪುಷ್ಪಕ್ ರಾಜ್ ಗಂಭೀರ ಆರೋಪ

ನನ್ನ ಮನೆ ಆಗಿರಬೇಕು ಹೀಗಿರಬೇಕು ಎಂದು ಏನೇನೋ ಕನಸು ಕಟ್ಟಿಕೊಂಡು ಮನೆ ನಿರ್ಮಿಸಲು ಹೋಗಿ ಇಕ್ಕಟ್ಟಿಗೆ ಸಿಲುಕಿರುವ ಘಟನೆ ದೊಡ್ಡಬಳ್ಳಾಪುರದ ಶಾಂತಿನಗರದಲ್ಲಿ ನಡೆದಿದೆ.

ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಯುವಕ ಪುಷ್ಪಕ್ ರಾಜ್ ತಮ್ಮ ನೋವನ್ನು ತೋಡಿಕೊಂಡಿದ್ದಾರೆ. ನಾನು ದೊಡ್ಡಬಳ್ಳಾಪುರದಲ್ಲಿ ಓದಿದೆ, ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಮಾಡಿ ಜರ್ಮನಿಯಲ್ಲಿ ಮಾಸ್ಟರ್ ಡಿಗ್ರಿ ಮಾಡಿ 2018ರಿಂದ ಇಲ್ಲಿವರೆಗೂ ಜರ್ಮನಿಯಲ್ಲೇ ಇದ್ದೀನಿ. ಹಾಗಾಗ ದೊಡ್ಡಬಳ್ಳಾಪುರಕ್ಕೆ ಬಂದು ಹೋಗುತ್ತೇನೆ. ನನ್ನ ತಂದೆ ದೊಡ್ಡಬಳ್ಳಾಪುರದ ಶಾಂತಿನಗರದಲ್ಲಿ ವಾಸವಾಗಿದ್ದರು. 2022ರಲ್ಲಿ ನನ್ನ ತಂದೆ ಮರಣ ಹೊಂದಿದರು. ಅನಂತರ ಆ ಮನೆಯನ್ನು ಕೆಡವಿ ಹೊಸ ಮನೆಯನ್ನು ಕಟ್ಟಿಸಬೇಕೆಂದು ಆಸೆಪಟ್ಟು ಈ ಹಿಂದೆ ನಮ್ಮ ಮನೆಯನ್ನು ಕಟ್ಟಿದ್ದ ಗಾರೆ ಮೇಸ್ತ್ರಿ ಭದ್ರಾವತಿ ಮಂಜುನಾಥ್ ಆರ್ ಅವರಿಗೇ ನಂಬಿಕೆ ಇಟ್ಟು ಮನೆ ಕಟ್ಟಲು ಒಪ್ಪಿಸಿದೆ. ಆದರೆ, ಅವರು ನಂಬಿಕೆ ದ್ರೋಹ ಮಾಡಿದ್ದಾರೆ ಎಂದು ಆಕ್ರೊಶ ಹೊರಹಾಕಿದ್ದಾರೆ.

ಇದು ನನ್ನ ನೋವಿನ ಮಾತು. ಇಂಥ ಗಾರೆ ಮೇಸ್ತ್ರಿಗಳಿಗೆ ಯಾರೂ ಮನೆ ಕಟ್ಟಿಕೊಡಲು ಒಪ್ಪಿಸಬೇಡಿ. ನನ್ನ ಡ್ರಿಮ್ ಹೌಸ್ ಹಾಳಾಯ್ತು. ನಾವು ಕೊಟ್ಟ ಹಣದ ಮೌಲ್ಯಕ್ಕೆ ತಕ್ಕಂತೆ ಅವರು ನಮಗೆ ಮನೆ ಕಟ್ಟಿಕೊಡಲಿಲ್ಲ. ಅಷ್ಟು ಆಸೆಪಟ್ಟು ತಂದೆ ಹೋದಮೇಲೆ ಕಟ್ಟಿಸಿದ ಮನೆ ಆ ಮನಗೆ ನನ್ನ ತಂದೆಯ ಹೆಸರನ್ನೇ ಇಟ್ಟಿದ್ದೇವೆ. ವಿದೇಶದಲ್ಲಿ ದುಡಿದು ಮನೆಗೆ ಬಂಡವಾಳ ಹಾಕಿದ್ದೇನೆ. ಎಲ್ಲವೂ ವ್ಯರ್ಥ ಆಯ್ತು. ದೊಡ್ಡಬಳ್ಳಾಪುರದಲ್ಲಿ ಇಂಥ ಮೇಸ್ತ್ರಿಗಳಿಗೆ ಯಾವ ಬಿಲ್ಡಿಂಗ್ ಗಳನ್ನು ಕೊಡಬೇಡಿ. ಯಾವುದೇ ಕಾರಣಕ್ಕೂ ಕ್ಯಾಶ್ ವ್ಯವಹಾರ ಮಾಡಬೇಡಿ ಎಂದು ಹೇಳಿದರು.

ಭದ್ರಾವತಿ ಮಂಜುನಾಥ್. ಆರ್ ಅಂತ ಗಾರೆ ಮೇಸ್ತ್ರಿಗೆ ಒಪ್ಪಂದ ಕೊಟ್ಟು ಮೋಸ ಹೋದೆವು. ಸಾಕಷ್ಟು ನೊಂದು ನಾವು ಕೋರ್ಟ್ ಮೆಟ್ಟಿಲೇರಿದೆವು. ಅಲ್ಲಿ ನಮಗೆ ನ್ಯಾಯ ಸಿಕ್ಕಿದೆ. ಕೇಸ್ ನಮ್ಮಂತೆ ಆಗಿದೆ. ಬಿಲ್ಡಿಂಗ್ ಕಾಮಗಾರಿ  ಕಳಪೆ ಎಂದು ಕೋರ್ಟ್ ಗೆ ಮನವರಿಕೆ ಆಗಿದೆ. 10ರಿಂದ 12 ಲಕ್ಷ ಪರಿಹಾರ ಕೊಡುವಂತೆ ಗಾರೆ ಮೇಸ್ತ್ರಿ ಭದ್ರಾವತಿ ಮಂಜುನಾಥ್ ಗೆ ಕೋರ್ಟ್ ಆದೇಶ ನೀಡಿದೆ ಎಂದು ತಿಳಿಸಿದರು.

ಇಷ್ಟಾದರೂ ಗಾರೆ ಮೇಸ್ತ್ರಿ ಮಂಜುನಾಥ್ ನಮಗೆ ಹಣನೂ ಕೊಟ್ಟಿಲ್ಲ ಜೊತೆಗೆ ಮನೆ 2 ಕೀ ಕೂಡ ಅವರೇ ಇಟ್ಟುಕೊಂಡಿದ್ದಾರೆ. ಮನೆ ನಿರ್ಮಾಣಕ್ಕೆ 40 ಲಕ್ಷ ಹಣ ನೀಡಿದ್ದೇವೆ. ಬ್ಯಾಂಕ್ ಖಾತೆ ಮೂಲಕ ಹಣ ವರ್ಗಾವಣೆ ಮಾಡಿದ್ದೇವೆ. ಹಾಗಾಗಿ ನಮಗೆ ಕೋರ್ಟ್ ನಲ್ಲಿ ನ್ಯಾಯ ಸಿಕ್ಕಿದೆ. ಇಲ್ಲದಿದ್ದರೆ ನಮಗೆ ನ್ಯಾಯ ಸಿಗುತ್ತಿರಲಿಲ್ಲ. ಮನೆ ಪೂರ್ಣಗೊಂಡು ಒಂದು ವರ್ಷ ಕಳೆದರೂ ನಮಗೆ ಇನ್ನೂ ಮನೆ ಸಿಕ್ಕಿಲ್ಲ. ಅಷ್ಟೊಂದು ದುಡ್ಡು ಕೊಟ್ಟು ನೆಮ್ಮದಿಯೂ ಇಲ್ಲ, 40 ಲಕ್ಷ ಹಾಕಿ ಕಟ್ಟಿರುವ ಬಿಲ್ಡಿಂಗ್ ಗೆ 40 ಲಕ್ಷ ವ್ಯಾಲ್ಯೂ ಇಲ್ಲ. ಅಷ್ಟು ದುಡ್ಡು ಪಡೆದು ಮನೆ ಕ್ವಾಲಿಟಿ ಬರಲಿಲ್ಲ. ಜೀವನದಲ್ಲಿ ಒಂದೇ ಸರಿ ಮನೆ ಕಟ್ಟಲು ಆಗೋದು. ನಾವು ಮೋಸ ಹೋದೇವು. ಇತ್ತ ಹಣವೂ ಹೋಯ್ತು ಅತ್ತ ಮನೆಯ ಸಾಮರ್ಥ್ಯವೂ ಹೋಯ್ತು. ಮನೆ ಬಿರುಕು ಬಿಟ್ಟಿದೆ, ಯಾವಾಗ ಬೇಕಾದರೂ ಬಿದ್ದುಹೋಗಬಹುದು. ಹಾಗಾಗಿ ಮನನೊಂದು ನನಗೆ ಆದ ರೀತಿ ಬೇರೆ ಯಾರಿಗೂ ಆಗಬಾರದು ಎಂದು ಈ ಮೂಲಕ ತಿಳಿಸಲು ಇಚ್ಛೆಪಡುತ್ತೇನೆ ಎಂದು ಮಾಧ್ಯಮದವರ ಮುಂದೆ ಅಳಲು ತೋಡಿಕೊಂಡರು.

Ramesh Babu

Journalist

Recent Posts

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

4 hours ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

7 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

7 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

10 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

12 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

24 hours ago