ಹೆಚ್ಚುತ್ತಿರುವ ಬ್ಯಾಂಕ್, ಎಟಿಎಂ ರಾಬರಿ: ಗಾಬರಿಗೊಂಡ ನಾಗರಿಕರು: ಎಚ್ಚೆತ್ತ ಪೊಲೀಸ್ ಇಲಾಖೆ

ಇತ್ತೀಚಿನ ದಿನಗಳಲ್ಲಿ ಎಟಿಎಂ ಕಳ್ಳತನ, ಬ್ಯಾಂಕ್ ಫ್ರಾಡ್, ಸೈಬರ್ ಸೆಕ್ಯೂರಿಟಿ ಮತ್ತು ಬ್ಯಾಂಕ್ ಕಳ್ಳತನ ಸೇರಿದಂತೆ  ಇನ್ನಿತರ ಹಣದ ವಿಚಾರಕ್ಕೆ ಹೆಚ್ಚು ಹೆಚ್ಚು ಅಪರಾಧ ಚಟುವಟಿಕೆಗಳು ನಡೆಯುತ್ತಿವೆ. ಈ ಹಿನ್ನೆಲೆ ನಗರದ ನಾಗರಿಕರು ಈ ಕುರಿತು ಹೇಗೆ ಎಚ್ಚರದಿಂದ ಇರಬೇಕು ಎಂಬುದರ ಬಗ್ಗೆ ದೊಡ್ಡಬಳ್ಳಾಪುರ ಪೊಲೀಸ್ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಅವರ ನೇತೃತ್ವದಲ್ಲಿ ಅರಿವು ಮೂಡಿಸಲಾಯಿತು.

ಇಂದು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೈಲ್ವೆ ನಿಲ್ದಾಣದ, ಸೌಂದರ್ಯ ಮಹಲ್ ವೃತ್ತದಲ್ಲಿ ಬ್ಯಾಂಕ್ ಮತ್ತು ಎಟಿಎಂಗಳಿಗೆ ಬರುವ ಹಿರಿಯ ನಾಗರೀಕರಿಗೆ ಮತ್ತು ಜನಸಾಮಾನ್ಯರಿಗೆ ಹೆಚ್ಚುತ್ತಿರುವ  ಅಪರಾಧಗಳನ್ನು ಕಡಿವಾಣ ಹಾಕಲು ಜಾಗ್ರತೆಯಿಂದ ಅನುಸರಿಸಬೇಕಾದ ಕ್ರಮಗಳನ್ನು ತಿಳಿಸಲಾಯಿತು.

ಅದೇರೀತಿ‌ ಇತ್ತೀಚೆಗೆ ಬೀದರ್‌ ನಲ್ಲಿ ಎಟಿಎಂ ತುಂಬುವ ವಾಹನವನ್ನು ಲೂಟಿ ಹಾಗೂ ಮಂಗಳೂರಿನಲ್ಲಿ ಬ್ಯಾಂಕಿನಲ್ಲಿದ್ದ ಹಣವನ್ನೇ ಡಕಾಯಿತಿ ಮಾಡಲಾಗಿತ್ತು. ಈ ಹಿನ್ನೆಲೆ ಬ್ಯಾಂಕ್ ನ ದರೋಡೆ ಪ್ರಕರಣಗಳು ಮರುಕಳಿಸದಂತೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ನಗರದಲ್ಲಿರುವ ಎಲ್ಲಾ ಬ್ಯಾಂಕುಗಳ ಮ್ಯಾನೇಜರ್ ಗಳು ಮತ್ತು ಎಟಿಎಂ ಗಳಿಗೆ ಹಣ ತುಂಬುವ ಸಿಎಂಎಸ್ ನವರೊಂದಿಗೆ ಚರ್ಚೆ ಮಾಡಲಾಯಿತು.

Ramesh Babu

Journalist

Recent Posts

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

35 minutes ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

6 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

18 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

18 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

19 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

22 hours ago