ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣಗಳು:ಜಾಗೃತರಾಗಿರಲು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಕರೆ

 

ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ತನ್ನ ಅಸ್ತ್ರವನ್ನು ಹೆಚ್ಚಿಸುತ್ತಲೇ ಇದೆ ಸಾರ್ವಜನಿಕರು ಸೈಬರ್ ವಂಚನೆಗೆ ಒಳಗಾಗದೆ ಜಾಗೃತರಾಗಿರಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದರು.

ಮಾಹಿತಿ ತಂತ್ರಜ್ಞಾನ ಇಲಾಖೆಯ ಜಿಲ್ಲಾ ರಾಷ್ಟ್ರೀಯ ಸೂಚನಾ ವಿಜ್ಞಾನ ಕೇಂದ್ರ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಸುರಕ್ಷಿತ ಅಂತರ್ಜಾಲ ದಿನ ಆಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿ

ಇಂದು ಇಂಟರ್ನೆಟ್‌ ನ ದಿನನಿತ್ಯದ ಬಳಕೆಯಲ್ಲಿ ಅಪರಿಚಿತರು ನಮ್ಮ ಅಪ್ಲಿಕೇಶನ್‌ಗಳನ್ನು ಹ್ಯಾಕ್ ಮಾಡಲು ಪ್ರಯತ್ನಿಸುತ್ತಾರೆ ಮತ್ತು ಬಳಕೆದಾರರ ಹೆಸರು, ಪಾಸ್‌ವರ್ಡ್, ಮೊಬೈಲ್ ಸಂಖ್ಯೆ, ಜನ್ಮ ದಿನಾಂಕ, ವಿಳಾಸ ಮುಂತಾದ ನಮ್ಮ ವೈಯಕ್ತಿಕ ಮಾಹಿತಿಯನ್ನು ಹ್ಯಾಕ್ ಮಾಡುತ್ತಾ ಬರುತ್ತಿದ್ದಾರೆ, ಹಣ ದುಪ್ಪಟ್ಟು ಮಾಡಿಕೊಳ್ಳಬೇಕೆಂಬ ಆಸೆಯಿಂದ ಅನಗತ್ಯ ಲಿಂಕ್ ಕ್ಲಿಕ್ ಮಾಡಿ ಮೋಸದ ಜಾಲಕ್ಕೆ ತುತ್ತಾಗುವುದು ನಿಲ್ಲಬೇಕು, ಸಾರ್ವಜನಿಕ ಸ್ಥಳದಲ್ಲಿ ಸಿಗುವ ಉಚಿತ ವೈ-ಫೈ ಬಳಕೆ ಮಾಡುವುದನ್ನು ತಪ್ಪಿಸಿ.

ವೈಯುಕ್ತಿಕ ಮಾಹಿತಿ ಮತ್ತು ಹಣಕ್ಕಾಗಿ ವಿನಂತಿಸುವ ಅಪರಿಚಿತ ಕರೆಗಳಿಗೆ, ಅಸುರಕ್ಷಿತ ವೆಬ್ಸೈಟ್ ಲಿಂಕ್ ಗಳಿಗೆ ಎಂದಿಗೂ ಪ್ರತಿಕ್ರಿಯಿಸಬೇಡಿ ಎಂದರು.

ಅಪರ ಜಿಲ್ಲಾಧಿಕಾರಿ ಅಮರೇಶ್ ಎಚ್ ಅವರು ಮಾತನಾಡಿ ಸೈಬರ್ ವಂಚಕರು ವಿವಿಧ ರೀತಿಯ ತಂತ್ರಗಳನ್ನು ಬಳಸಿ ಜನರ ನಿದ್ದೆಗೆಡಿಸುತ್ತಿದ್ದಾರೆ, ನಿಮ್ಮಿಂದಲೇ ಒಟಿಪಿ ಪಾಸ್ವರ್ಡ್ ಪಡೆದು ನಿಮಗೆ ವಂಚಿಸುತ್ತಿದ್ದಾರೆ ಹಾಗಾಗಿ ಒಟಿಪಿ, ಆಧಾರ್ ಸಂಖ್ಯೆ, ಪಾನ್ ಅಥವಾ ಬ್ಯಾಂಕ್ ರುಜುವಾತುಗಳನ್ನು ಅಪರಿಚಿತ ವ್ಯಕ್ತಿಗಳಿಗೆ ಅಥವಾ ಯಾರೊಂದಿಗೂ ಬಹಿರಂಗ ಪಡಿಸಬೇಡಿ. ನಿಮಗೆ ಸೈಬರ್ ವಂಚನೆಯಾದ ಸಂದರ್ಭದಲ್ಲಿ ಸೈಬರ್ ಕ್ರೈಂ ಪೊಲೀಸ್ ನಂಬರ್ 1930 ಕರೆಮಾಡಿ ದೂರು ದಾಖಲಿಸಬಹುದು ಎಂದರು.

ಈ ಸಂದರ್ಭದಲ್ಲಿ ಜಿ.ಪಂ ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ಜಿಲ್ಲಾ ಮಾಹಿತಿ ಅಧಿಕಾರಿ ಗೌರಿಶಂಕರ್, ಕೃಷಿ ಇಲಾಖೆ ಉಪನಿರ್ದೇಶಕಿ ಗಾಯಿತ್ರಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮ, ಆಹಾರ ಇಲಾಖೆಯ ಉಪನಿರ್ದೇಶಕರಾದ ಶಂಕರ್ ಮೂರ್ತಿ, ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ರಾಜೀವ್ ಸುಲೋಚನಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

9 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

10 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

11 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

13 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

20 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

20 hours ago