ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣಗಳು:ಜಾಗೃತರಾಗಿರಲು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಕರೆ

 

ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ತನ್ನ ಅಸ್ತ್ರವನ್ನು ಹೆಚ್ಚಿಸುತ್ತಲೇ ಇದೆ ಸಾರ್ವಜನಿಕರು ಸೈಬರ್ ವಂಚನೆಗೆ ಒಳಗಾಗದೆ ಜಾಗೃತರಾಗಿರಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದರು.

ಮಾಹಿತಿ ತಂತ್ರಜ್ಞಾನ ಇಲಾಖೆಯ ಜಿಲ್ಲಾ ರಾಷ್ಟ್ರೀಯ ಸೂಚನಾ ವಿಜ್ಞಾನ ಕೇಂದ್ರ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಸುರಕ್ಷಿತ ಅಂತರ್ಜಾಲ ದಿನ ಆಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿ

ಇಂದು ಇಂಟರ್ನೆಟ್‌ ನ ದಿನನಿತ್ಯದ ಬಳಕೆಯಲ್ಲಿ ಅಪರಿಚಿತರು ನಮ್ಮ ಅಪ್ಲಿಕೇಶನ್‌ಗಳನ್ನು ಹ್ಯಾಕ್ ಮಾಡಲು ಪ್ರಯತ್ನಿಸುತ್ತಾರೆ ಮತ್ತು ಬಳಕೆದಾರರ ಹೆಸರು, ಪಾಸ್‌ವರ್ಡ್, ಮೊಬೈಲ್ ಸಂಖ್ಯೆ, ಜನ್ಮ ದಿನಾಂಕ, ವಿಳಾಸ ಮುಂತಾದ ನಮ್ಮ ವೈಯಕ್ತಿಕ ಮಾಹಿತಿಯನ್ನು ಹ್ಯಾಕ್ ಮಾಡುತ್ತಾ ಬರುತ್ತಿದ್ದಾರೆ, ಹಣ ದುಪ್ಪಟ್ಟು ಮಾಡಿಕೊಳ್ಳಬೇಕೆಂಬ ಆಸೆಯಿಂದ ಅನಗತ್ಯ ಲಿಂಕ್ ಕ್ಲಿಕ್ ಮಾಡಿ ಮೋಸದ ಜಾಲಕ್ಕೆ ತುತ್ತಾಗುವುದು ನಿಲ್ಲಬೇಕು, ಸಾರ್ವಜನಿಕ ಸ್ಥಳದಲ್ಲಿ ಸಿಗುವ ಉಚಿತ ವೈ-ಫೈ ಬಳಕೆ ಮಾಡುವುದನ್ನು ತಪ್ಪಿಸಿ.

ವೈಯುಕ್ತಿಕ ಮಾಹಿತಿ ಮತ್ತು ಹಣಕ್ಕಾಗಿ ವಿನಂತಿಸುವ ಅಪರಿಚಿತ ಕರೆಗಳಿಗೆ, ಅಸುರಕ್ಷಿತ ವೆಬ್ಸೈಟ್ ಲಿಂಕ್ ಗಳಿಗೆ ಎಂದಿಗೂ ಪ್ರತಿಕ್ರಿಯಿಸಬೇಡಿ ಎಂದರು.

ಅಪರ ಜಿಲ್ಲಾಧಿಕಾರಿ ಅಮರೇಶ್ ಎಚ್ ಅವರು ಮಾತನಾಡಿ ಸೈಬರ್ ವಂಚಕರು ವಿವಿಧ ರೀತಿಯ ತಂತ್ರಗಳನ್ನು ಬಳಸಿ ಜನರ ನಿದ್ದೆಗೆಡಿಸುತ್ತಿದ್ದಾರೆ, ನಿಮ್ಮಿಂದಲೇ ಒಟಿಪಿ ಪಾಸ್ವರ್ಡ್ ಪಡೆದು ನಿಮಗೆ ವಂಚಿಸುತ್ತಿದ್ದಾರೆ ಹಾಗಾಗಿ ಒಟಿಪಿ, ಆಧಾರ್ ಸಂಖ್ಯೆ, ಪಾನ್ ಅಥವಾ ಬ್ಯಾಂಕ್ ರುಜುವಾತುಗಳನ್ನು ಅಪರಿಚಿತ ವ್ಯಕ್ತಿಗಳಿಗೆ ಅಥವಾ ಯಾರೊಂದಿಗೂ ಬಹಿರಂಗ ಪಡಿಸಬೇಡಿ. ನಿಮಗೆ ಸೈಬರ್ ವಂಚನೆಯಾದ ಸಂದರ್ಭದಲ್ಲಿ ಸೈಬರ್ ಕ್ರೈಂ ಪೊಲೀಸ್ ನಂಬರ್ 1930 ಕರೆಮಾಡಿ ದೂರು ದಾಖಲಿಸಬಹುದು ಎಂದರು.

ಈ ಸಂದರ್ಭದಲ್ಲಿ ಜಿ.ಪಂ ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ಜಿಲ್ಲಾ ಮಾಹಿತಿ ಅಧಿಕಾರಿ ಗೌರಿಶಂಕರ್, ಕೃಷಿ ಇಲಾಖೆ ಉಪನಿರ್ದೇಶಕಿ ಗಾಯಿತ್ರಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮ, ಆಹಾರ ಇಲಾಖೆಯ ಉಪನಿರ್ದೇಶಕರಾದ ಶಂಕರ್ ಮೂರ್ತಿ, ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ರಾಜೀವ್ ಸುಲೋಚನಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

7 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

12 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

1 day ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago