ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣಗಳು:ಜಾಗೃತರಾಗಿರಲು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಕರೆ

 

ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ತನ್ನ ಅಸ್ತ್ರವನ್ನು ಹೆಚ್ಚಿಸುತ್ತಲೇ ಇದೆ ಸಾರ್ವಜನಿಕರು ಸೈಬರ್ ವಂಚನೆಗೆ ಒಳಗಾಗದೆ ಜಾಗೃತರಾಗಿರಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದರು.

ಮಾಹಿತಿ ತಂತ್ರಜ್ಞಾನ ಇಲಾಖೆಯ ಜಿಲ್ಲಾ ರಾಷ್ಟ್ರೀಯ ಸೂಚನಾ ವಿಜ್ಞಾನ ಕೇಂದ್ರ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಸುರಕ್ಷಿತ ಅಂತರ್ಜಾಲ ದಿನ ಆಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿ

ಇಂದು ಇಂಟರ್ನೆಟ್‌ ನ ದಿನನಿತ್ಯದ ಬಳಕೆಯಲ್ಲಿ ಅಪರಿಚಿತರು ನಮ್ಮ ಅಪ್ಲಿಕೇಶನ್‌ಗಳನ್ನು ಹ್ಯಾಕ್ ಮಾಡಲು ಪ್ರಯತ್ನಿಸುತ್ತಾರೆ ಮತ್ತು ಬಳಕೆದಾರರ ಹೆಸರು, ಪಾಸ್‌ವರ್ಡ್, ಮೊಬೈಲ್ ಸಂಖ್ಯೆ, ಜನ್ಮ ದಿನಾಂಕ, ವಿಳಾಸ ಮುಂತಾದ ನಮ್ಮ ವೈಯಕ್ತಿಕ ಮಾಹಿತಿಯನ್ನು ಹ್ಯಾಕ್ ಮಾಡುತ್ತಾ ಬರುತ್ತಿದ್ದಾರೆ, ಹಣ ದುಪ್ಪಟ್ಟು ಮಾಡಿಕೊಳ್ಳಬೇಕೆಂಬ ಆಸೆಯಿಂದ ಅನಗತ್ಯ ಲಿಂಕ್ ಕ್ಲಿಕ್ ಮಾಡಿ ಮೋಸದ ಜಾಲಕ್ಕೆ ತುತ್ತಾಗುವುದು ನಿಲ್ಲಬೇಕು, ಸಾರ್ವಜನಿಕ ಸ್ಥಳದಲ್ಲಿ ಸಿಗುವ ಉಚಿತ ವೈ-ಫೈ ಬಳಕೆ ಮಾಡುವುದನ್ನು ತಪ್ಪಿಸಿ.

ವೈಯುಕ್ತಿಕ ಮಾಹಿತಿ ಮತ್ತು ಹಣಕ್ಕಾಗಿ ವಿನಂತಿಸುವ ಅಪರಿಚಿತ ಕರೆಗಳಿಗೆ, ಅಸುರಕ್ಷಿತ ವೆಬ್ಸೈಟ್ ಲಿಂಕ್ ಗಳಿಗೆ ಎಂದಿಗೂ ಪ್ರತಿಕ್ರಿಯಿಸಬೇಡಿ ಎಂದರು.

ಅಪರ ಜಿಲ್ಲಾಧಿಕಾರಿ ಅಮರೇಶ್ ಎಚ್ ಅವರು ಮಾತನಾಡಿ ಸೈಬರ್ ವಂಚಕರು ವಿವಿಧ ರೀತಿಯ ತಂತ್ರಗಳನ್ನು ಬಳಸಿ ಜನರ ನಿದ್ದೆಗೆಡಿಸುತ್ತಿದ್ದಾರೆ, ನಿಮ್ಮಿಂದಲೇ ಒಟಿಪಿ ಪಾಸ್ವರ್ಡ್ ಪಡೆದು ನಿಮಗೆ ವಂಚಿಸುತ್ತಿದ್ದಾರೆ ಹಾಗಾಗಿ ಒಟಿಪಿ, ಆಧಾರ್ ಸಂಖ್ಯೆ, ಪಾನ್ ಅಥವಾ ಬ್ಯಾಂಕ್ ರುಜುವಾತುಗಳನ್ನು ಅಪರಿಚಿತ ವ್ಯಕ್ತಿಗಳಿಗೆ ಅಥವಾ ಯಾರೊಂದಿಗೂ ಬಹಿರಂಗ ಪಡಿಸಬೇಡಿ. ನಿಮಗೆ ಸೈಬರ್ ವಂಚನೆಯಾದ ಸಂದರ್ಭದಲ್ಲಿ ಸೈಬರ್ ಕ್ರೈಂ ಪೊಲೀಸ್ ನಂಬರ್ 1930 ಕರೆಮಾಡಿ ದೂರು ದಾಖಲಿಸಬಹುದು ಎಂದರು.

ಈ ಸಂದರ್ಭದಲ್ಲಿ ಜಿ.ಪಂ ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ಜಿಲ್ಲಾ ಮಾಹಿತಿ ಅಧಿಕಾರಿ ಗೌರಿಶಂಕರ್, ಕೃಷಿ ಇಲಾಖೆ ಉಪನಿರ್ದೇಶಕಿ ಗಾಯಿತ್ರಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮ, ಆಹಾರ ಇಲಾಖೆಯ ಉಪನಿರ್ದೇಶಕರಾದ ಶಂಕರ್ ಮೂರ್ತಿ, ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ರಾಜೀವ್ ಸುಲೋಚನಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

13 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 day ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

3 days ago