ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣಗಳು:ಜಾಗೃತರಾಗಿರಲು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಕರೆ

 

ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ತನ್ನ ಅಸ್ತ್ರವನ್ನು ಹೆಚ್ಚಿಸುತ್ತಲೇ ಇದೆ ಸಾರ್ವಜನಿಕರು ಸೈಬರ್ ವಂಚನೆಗೆ ಒಳಗಾಗದೆ ಜಾಗೃತರಾಗಿರಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದರು.

ಮಾಹಿತಿ ತಂತ್ರಜ್ಞಾನ ಇಲಾಖೆಯ ಜಿಲ್ಲಾ ರಾಷ್ಟ್ರೀಯ ಸೂಚನಾ ವಿಜ್ಞಾನ ಕೇಂದ್ರ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಸುರಕ್ಷಿತ ಅಂತರ್ಜಾಲ ದಿನ ಆಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿ

ಇಂದು ಇಂಟರ್ನೆಟ್‌ ನ ದಿನನಿತ್ಯದ ಬಳಕೆಯಲ್ಲಿ ಅಪರಿಚಿತರು ನಮ್ಮ ಅಪ್ಲಿಕೇಶನ್‌ಗಳನ್ನು ಹ್ಯಾಕ್ ಮಾಡಲು ಪ್ರಯತ್ನಿಸುತ್ತಾರೆ ಮತ್ತು ಬಳಕೆದಾರರ ಹೆಸರು, ಪಾಸ್‌ವರ್ಡ್, ಮೊಬೈಲ್ ಸಂಖ್ಯೆ, ಜನ್ಮ ದಿನಾಂಕ, ವಿಳಾಸ ಮುಂತಾದ ನಮ್ಮ ವೈಯಕ್ತಿಕ ಮಾಹಿತಿಯನ್ನು ಹ್ಯಾಕ್ ಮಾಡುತ್ತಾ ಬರುತ್ತಿದ್ದಾರೆ, ಹಣ ದುಪ್ಪಟ್ಟು ಮಾಡಿಕೊಳ್ಳಬೇಕೆಂಬ ಆಸೆಯಿಂದ ಅನಗತ್ಯ ಲಿಂಕ್ ಕ್ಲಿಕ್ ಮಾಡಿ ಮೋಸದ ಜಾಲಕ್ಕೆ ತುತ್ತಾಗುವುದು ನಿಲ್ಲಬೇಕು, ಸಾರ್ವಜನಿಕ ಸ್ಥಳದಲ್ಲಿ ಸಿಗುವ ಉಚಿತ ವೈ-ಫೈ ಬಳಕೆ ಮಾಡುವುದನ್ನು ತಪ್ಪಿಸಿ.

ವೈಯುಕ್ತಿಕ ಮಾಹಿತಿ ಮತ್ತು ಹಣಕ್ಕಾಗಿ ವಿನಂತಿಸುವ ಅಪರಿಚಿತ ಕರೆಗಳಿಗೆ, ಅಸುರಕ್ಷಿತ ವೆಬ್ಸೈಟ್ ಲಿಂಕ್ ಗಳಿಗೆ ಎಂದಿಗೂ ಪ್ರತಿಕ್ರಿಯಿಸಬೇಡಿ ಎಂದರು.

ಅಪರ ಜಿಲ್ಲಾಧಿಕಾರಿ ಅಮರೇಶ್ ಎಚ್ ಅವರು ಮಾತನಾಡಿ ಸೈಬರ್ ವಂಚಕರು ವಿವಿಧ ರೀತಿಯ ತಂತ್ರಗಳನ್ನು ಬಳಸಿ ಜನರ ನಿದ್ದೆಗೆಡಿಸುತ್ತಿದ್ದಾರೆ, ನಿಮ್ಮಿಂದಲೇ ಒಟಿಪಿ ಪಾಸ್ವರ್ಡ್ ಪಡೆದು ನಿಮಗೆ ವಂಚಿಸುತ್ತಿದ್ದಾರೆ ಹಾಗಾಗಿ ಒಟಿಪಿ, ಆಧಾರ್ ಸಂಖ್ಯೆ, ಪಾನ್ ಅಥವಾ ಬ್ಯಾಂಕ್ ರುಜುವಾತುಗಳನ್ನು ಅಪರಿಚಿತ ವ್ಯಕ್ತಿಗಳಿಗೆ ಅಥವಾ ಯಾರೊಂದಿಗೂ ಬಹಿರಂಗ ಪಡಿಸಬೇಡಿ. ನಿಮಗೆ ಸೈಬರ್ ವಂಚನೆಯಾದ ಸಂದರ್ಭದಲ್ಲಿ ಸೈಬರ್ ಕ್ರೈಂ ಪೊಲೀಸ್ ನಂಬರ್ 1930 ಕರೆಮಾಡಿ ದೂರು ದಾಖಲಿಸಬಹುದು ಎಂದರು.

ಈ ಸಂದರ್ಭದಲ್ಲಿ ಜಿ.ಪಂ ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ಜಿಲ್ಲಾ ಮಾಹಿತಿ ಅಧಿಕಾರಿ ಗೌರಿಶಂಕರ್, ಕೃಷಿ ಇಲಾಖೆ ಉಪನಿರ್ದೇಶಕಿ ಗಾಯಿತ್ರಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮ, ಆಹಾರ ಇಲಾಖೆಯ ಉಪನಿರ್ದೇಶಕರಾದ ಶಂಕರ್ ಮೂರ್ತಿ, ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ರಾಜೀವ್ ಸುಲೋಚನಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

7 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 day ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago