ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣಗಳು:ಜಾಗೃತರಾಗಿರಲು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಕರೆ

 

ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ತನ್ನ ಅಸ್ತ್ರವನ್ನು ಹೆಚ್ಚಿಸುತ್ತಲೇ ಇದೆ ಸಾರ್ವಜನಿಕರು ಸೈಬರ್ ವಂಚನೆಗೆ ಒಳಗಾಗದೆ ಜಾಗೃತರಾಗಿರಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದರು.

ಮಾಹಿತಿ ತಂತ್ರಜ್ಞಾನ ಇಲಾಖೆಯ ಜಿಲ್ಲಾ ರಾಷ್ಟ್ರೀಯ ಸೂಚನಾ ವಿಜ್ಞಾನ ಕೇಂದ್ರ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಸುರಕ್ಷಿತ ಅಂತರ್ಜಾಲ ದಿನ ಆಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿ

ಇಂದು ಇಂಟರ್ನೆಟ್‌ ನ ದಿನನಿತ್ಯದ ಬಳಕೆಯಲ್ಲಿ ಅಪರಿಚಿತರು ನಮ್ಮ ಅಪ್ಲಿಕೇಶನ್‌ಗಳನ್ನು ಹ್ಯಾಕ್ ಮಾಡಲು ಪ್ರಯತ್ನಿಸುತ್ತಾರೆ ಮತ್ತು ಬಳಕೆದಾರರ ಹೆಸರು, ಪಾಸ್‌ವರ್ಡ್, ಮೊಬೈಲ್ ಸಂಖ್ಯೆ, ಜನ್ಮ ದಿನಾಂಕ, ವಿಳಾಸ ಮುಂತಾದ ನಮ್ಮ ವೈಯಕ್ತಿಕ ಮಾಹಿತಿಯನ್ನು ಹ್ಯಾಕ್ ಮಾಡುತ್ತಾ ಬರುತ್ತಿದ್ದಾರೆ, ಹಣ ದುಪ್ಪಟ್ಟು ಮಾಡಿಕೊಳ್ಳಬೇಕೆಂಬ ಆಸೆಯಿಂದ ಅನಗತ್ಯ ಲಿಂಕ್ ಕ್ಲಿಕ್ ಮಾಡಿ ಮೋಸದ ಜಾಲಕ್ಕೆ ತುತ್ತಾಗುವುದು ನಿಲ್ಲಬೇಕು, ಸಾರ್ವಜನಿಕ ಸ್ಥಳದಲ್ಲಿ ಸಿಗುವ ಉಚಿತ ವೈ-ಫೈ ಬಳಕೆ ಮಾಡುವುದನ್ನು ತಪ್ಪಿಸಿ.

ವೈಯುಕ್ತಿಕ ಮಾಹಿತಿ ಮತ್ತು ಹಣಕ್ಕಾಗಿ ವಿನಂತಿಸುವ ಅಪರಿಚಿತ ಕರೆಗಳಿಗೆ, ಅಸುರಕ್ಷಿತ ವೆಬ್ಸೈಟ್ ಲಿಂಕ್ ಗಳಿಗೆ ಎಂದಿಗೂ ಪ್ರತಿಕ್ರಿಯಿಸಬೇಡಿ ಎಂದರು.

ಅಪರ ಜಿಲ್ಲಾಧಿಕಾರಿ ಅಮರೇಶ್ ಎಚ್ ಅವರು ಮಾತನಾಡಿ ಸೈಬರ್ ವಂಚಕರು ವಿವಿಧ ರೀತಿಯ ತಂತ್ರಗಳನ್ನು ಬಳಸಿ ಜನರ ನಿದ್ದೆಗೆಡಿಸುತ್ತಿದ್ದಾರೆ, ನಿಮ್ಮಿಂದಲೇ ಒಟಿಪಿ ಪಾಸ್ವರ್ಡ್ ಪಡೆದು ನಿಮಗೆ ವಂಚಿಸುತ್ತಿದ್ದಾರೆ ಹಾಗಾಗಿ ಒಟಿಪಿ, ಆಧಾರ್ ಸಂಖ್ಯೆ, ಪಾನ್ ಅಥವಾ ಬ್ಯಾಂಕ್ ರುಜುವಾತುಗಳನ್ನು ಅಪರಿಚಿತ ವ್ಯಕ್ತಿಗಳಿಗೆ ಅಥವಾ ಯಾರೊಂದಿಗೂ ಬಹಿರಂಗ ಪಡಿಸಬೇಡಿ. ನಿಮಗೆ ಸೈಬರ್ ವಂಚನೆಯಾದ ಸಂದರ್ಭದಲ್ಲಿ ಸೈಬರ್ ಕ್ರೈಂ ಪೊಲೀಸ್ ನಂಬರ್ 1930 ಕರೆಮಾಡಿ ದೂರು ದಾಖಲಿಸಬಹುದು ಎಂದರು.

ಈ ಸಂದರ್ಭದಲ್ಲಿ ಜಿ.ಪಂ ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ಜಿಲ್ಲಾ ಮಾಹಿತಿ ಅಧಿಕಾರಿ ಗೌರಿಶಂಕರ್, ಕೃಷಿ ಇಲಾಖೆ ಉಪನಿರ್ದೇಶಕಿ ಗಾಯಿತ್ರಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮ, ಆಹಾರ ಇಲಾಖೆಯ ಉಪನಿರ್ದೇಶಕರಾದ ಶಂಕರ್ ಮೂರ್ತಿ, ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ರಾಜೀವ್ ಸುಲೋಚನಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

5 minutes ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

19 minutes ago

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

11 hours ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

13 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

14 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

15 hours ago