ಭಾರತದಾದ್ಯಂತ 500 ರೂಪಾಯಿಯ ನಕಲಿ ಕರೆನ್ಸಿಗಳ ಚಲಾವಣೆ ಹೆಚ್ಚಾಗುತ್ತಿದ್ದು, ಇದೀಗ ಹೊಸ ನಕಲಿ 500 ಮುಖಬೆಲೆಯ ಕರೆನ್ಸಿ ನೋಟುಗಳ ಬಗ್ಗೆ ಗೃಹ ವ್ಯವಹಾರಗಳ ಸಚಿವಾಲಯ ಹಣಕಾಸು ಮತ್ತು ನಿಯಂತ್ರಕ ಸಂಸ್ಥೆಗಳಿಗೆ ಹೆಚ್ಚಿನ ಪ್ರಾಮುಖ್ಯತೆಯ ಎಚ್ಚರಿಕೆಯನ್ನು ನೀಡಿದೆ.
ನಕಲಿ ನೋಟುಗಳ ಬಗ್ಗೆ ಕಂದಾಯ ಗುಪ್ತಚರ ನಿರ್ದೇಶನಾಲಯ, ಹಣಕಾಸು ಗುಪ್ತಚರ ಘಟಕ, ಕೇಂದ್ರ ತನಿಖಾ ದಳ, ರಾಷ್ಟ್ರೀಯ ತನಿಖಾ ಸಂಸ್ಥೆ, ಭಾರತೀಯ ಭದ್ರತಾ ಪತ್ರಗಳು ಮತ್ತು ವಿನಿಮಯ ಮಂಡಳಿ ಮತ್ತು ಇತರ ಪ್ರಮುಖ ಹಣಕಾಸು ಮತ್ತು ನಿಯಂತ್ರಕ ಸಂಸ್ಥೆಗಳಿಗೆ ಈ ಎಚ್ಚರಿಕೆ ನೀಡಲಾಗಿದೆ.
500 ರೂ. ಮುಖಬೆಲೆಯ ನಕಲಿ ನೋಟುಗಳು, ಅಸಲಿ ನೋಟುಗಳಂತೆ ಕಾಣುವುದರಿಂದ ಸಾಮಾನ್ಯ ಜನರಿಗೆ ಅದನ್ನು ಗುರುತಿಸುವುದು ಬಹಳ ಕಷ್ಟ. ಅಂಗಡಿಯಲ್ಲಿ ಹೆಚ್ಚಿನ ವ್ಯಾಪಾರದ ವೇಳೆ ಮಾಲೀಕರು ನಕಲಿ ನೋಟನ್ನು ಗಮನಿಸುವುದು ಅಸಾದ್ಯವಾಗಿದೆ.
ಇನ್ನು ಈ ನಕಲಿ ನೋಟನ್ನು ಗುರುತಿಸಲು ಇರುವುದು ಒಂದೇ ಹಂತ ಅದು, ನಕಲಿ ನೋಟಿನಲ್ಲಿ RESERVE BANK OF INDIA ಎಂಬ ಪದಗುಚ್ಛದಲ್ಲಿ E ಅಕ್ಷರವನ್ನು A ಅಕ್ಷರದಿಂದ ತಪ್ಪಾಗಿ ಬರೆದಿರಲಾಗಿದೆ.
ಅಸಲಿ 500 ರೂ. ಮುಖಬೆಲೆ ನೋಟುಗಳು ಭದ್ರತಾ ಥ್ರೆಡ್ ಅನ್ನು ಹೊಂದಿದ್ದು, ನೋಟು ಓರೆಯಾಗಿಸಿದಾಗ ಅದು ಹಸಿರು ಬಣ್ಣದಿಂದ ನೀಲಿ ಬಣ್ಣಕ್ಕೆ ಬಣ್ಣವನ್ನು ಬದಲಾಯಿಸುತ್ತದೆ. ಆದರೆ ನಕಲಿ ನೋಟುಗಳು ಈ ಬಣ್ಣ ಬದಲಾವಣೆ ಕಂಡುಬರುವುದಿಲ್ಲ
ಮಹಾತ್ಮ ಗಾಂಧಿಯವರ ಭಾವಚಿತ್ರ ಮತ್ತು ಮುಖಬೆಲೆಯ 500 ಅನ್ನು ತೋರಿಸುವ ಎಲೆಕ್ಟ್ರೋಟೈಪ್ ವಾಟರ್ಮಾರ್ಕ್ ಅನ್ನು ನೋಡಲು ನೋಟನ್ನು ಬೆಳಕಿಗೆ ಎದುರಾಗಿ ಹಿಡಿದುಕೊಳ್ಳಿ. ನಕಲಿ ನೋಟುಗಳು ಮಸುಕಾದ ಅಥವಾ ತಪ್ಪಾಗಿ ಜೋಡಿಸಲಾದ ವಾಟರ್ಮಾರ್ಕ್ಗಳನ್ನು ಹೊಂದಿರುತ್ತದೆ.
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…