ಹೆಚ್ಚುತ್ತಿರುವ 500 ರೂ. ನಕಲಿ ಕರೆನ್ಸಿ ಚಲಾವಣೆ: 500 ರೂ. ನಕಲಿ ನೋಟು ಪರೀಕ್ಷಿಸೋದು ಹೇಗೆ..?

ಭಾರತದಾದ್ಯಂತ 500 ರೂಪಾಯಿಯ ನಕಲಿ ಕರೆನ್ಸಿಗಳ ಚಲಾವಣೆ ಹೆಚ್ಚಾಗುತ್ತಿದ್ದು, ಇದೀಗ ಹೊಸ ನಕಲಿ 500 ಮುಖಬೆಲೆಯ ಕರೆನ್ಸಿ ನೋಟುಗಳ ಬಗ್ಗೆ ಗೃಹ ವ್ಯವಹಾರಗಳ ಸಚಿವಾಲಯ ಹಣಕಾಸು ಮತ್ತು ನಿಯಂತ್ರಕ ಸಂಸ್ಥೆಗಳಿಗೆ ಹೆಚ್ಚಿನ ಪ್ರಾಮುಖ್ಯತೆಯ ಎಚ್ಚರಿಕೆಯನ್ನು ನೀಡಿದೆ.

ನಕಲಿ ನೋಟುಗಳ ಬಗ್ಗೆ ಕಂದಾಯ ಗುಪ್ತಚರ ನಿರ್ದೇಶನಾಲಯ, ಹಣಕಾಸು ಗುಪ್ತಚರ ಘಟಕ, ಕೇಂದ್ರ ತನಿಖಾ ದಳ, ರಾಷ್ಟ್ರೀಯ ತನಿಖಾ ಸಂಸ್ಥೆ, ಭಾರತೀಯ ಭದ್ರತಾ ಪತ್ರಗಳು ಮತ್ತು ವಿನಿಮಯ ಮಂಡಳಿ ಮತ್ತು ಇತರ ಪ್ರಮುಖ ಹಣಕಾಸು ಮತ್ತು ನಿಯಂತ್ರಕ ಸಂಸ್ಥೆಗಳಿಗೆ ಈ ಎಚ್ಚರಿಕೆ ನೀಡಲಾಗಿದೆ.

500 ರೂ. ಮುಖಬೆಲೆಯ ನಕಲಿ ನೋಟುಗಳು, ಅಸಲಿ ನೋಟುಗಳಂತೆ ಕಾಣುವುದರಿಂದ ಸಾಮಾನ್ಯ ಜನರಿಗೆ ಅದನ್ನು ಗುರುತಿಸುವುದು ಬಹಳ ಕಷ್ಟ. ಅಂಗಡಿಯಲ್ಲಿ ಹೆಚ್ಚಿನ ವ್ಯಾಪಾರದ ವೇಳೆ ಮಾಲೀಕರು ನಕಲಿ ನೋಟನ್ನು ಗಮನಿಸುವುದು ಅಸಾದ್ಯವಾಗಿದೆ.

ಇನ್ನು ಈ ನಕಲಿ ನೋಟನ್ನು ಗುರುತಿಸಲು ಇರುವುದು ಒಂದೇ ಹಂತ ಅದು, ನಕಲಿ ನೋಟಿನಲ್ಲಿ RESERVE BANK OF INDIA ಎಂಬ ಪದಗುಚ್ಛದಲ್ಲಿ E ಅಕ್ಷರವನ್ನು A ಅಕ್ಷರದಿಂದ ತಪ್ಪಾಗಿ ಬರೆದಿರಲಾಗಿದೆ.

ಅಸಲಿ 500 ರೂ. ಮುಖಬೆಲೆ ನೋಟುಗಳು ಭದ್ರತಾ ಥ್ರೆಡ್ ಅನ್ನು ಹೊಂದಿದ್ದು, ನೋಟು ಓರೆಯಾಗಿಸಿದಾಗ ಅದು ಹಸಿರು ಬಣ್ಣದಿಂದ ನೀಲಿ ಬಣ್ಣಕ್ಕೆ ಬಣ್ಣವನ್ನು ಬದಲಾಯಿಸುತ್ತದೆ. ಆದರೆ ನಕಲಿ ನೋಟುಗಳು ಈ ಬಣ್ಣ ಬದಲಾವಣೆ ಕಂಡುಬರುವುದಿಲ್ಲ

ಮಹಾತ್ಮ ಗಾಂಧಿಯವರ ಭಾವಚಿತ್ರ ಮತ್ತು ಮುಖಬೆಲೆಯ 500 ಅನ್ನು ತೋರಿಸುವ ಎಲೆಕ್ಟ್ರೋಟೈಪ್ ವಾಟರ್‌ಮಾರ್ಕ್ ಅನ್ನು ನೋಡಲು ನೋಟನ್ನು ಬೆಳಕಿಗೆ ಎದುರಾಗಿ ಹಿಡಿದುಕೊಳ್ಳಿ. ನಕಲಿ ನೋಟುಗಳು ಮಸುಕಾದ ಅಥವಾ ತಪ್ಪಾಗಿ ಜೋಡಿಸಲಾದ ವಾಟರ್‌ಮಾರ್ಕ್‌ಗಳನ್ನು ಹೊಂದಿರುತ್ತದೆ.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

13 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

21 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

24 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

24 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago