ಭಾರತದಾದ್ಯಂತ 500 ರೂಪಾಯಿಯ ನಕಲಿ ಕರೆನ್ಸಿಗಳ ಚಲಾವಣೆ ಹೆಚ್ಚಾಗುತ್ತಿದ್ದು, ಇದೀಗ ಹೊಸ ನಕಲಿ 500 ಮುಖಬೆಲೆಯ ಕರೆನ್ಸಿ ನೋಟುಗಳ ಬಗ್ಗೆ ಗೃಹ ವ್ಯವಹಾರಗಳ ಸಚಿವಾಲಯ ಹಣಕಾಸು ಮತ್ತು ನಿಯಂತ್ರಕ ಸಂಸ್ಥೆಗಳಿಗೆ ಹೆಚ್ಚಿನ ಪ್ರಾಮುಖ್ಯತೆಯ ಎಚ್ಚರಿಕೆಯನ್ನು ನೀಡಿದೆ.
ನಕಲಿ ನೋಟುಗಳ ಬಗ್ಗೆ ಕಂದಾಯ ಗುಪ್ತಚರ ನಿರ್ದೇಶನಾಲಯ, ಹಣಕಾಸು ಗುಪ್ತಚರ ಘಟಕ, ಕೇಂದ್ರ ತನಿಖಾ ದಳ, ರಾಷ್ಟ್ರೀಯ ತನಿಖಾ ಸಂಸ್ಥೆ, ಭಾರತೀಯ ಭದ್ರತಾ ಪತ್ರಗಳು ಮತ್ತು ವಿನಿಮಯ ಮಂಡಳಿ ಮತ್ತು ಇತರ ಪ್ರಮುಖ ಹಣಕಾಸು ಮತ್ತು ನಿಯಂತ್ರಕ ಸಂಸ್ಥೆಗಳಿಗೆ ಈ ಎಚ್ಚರಿಕೆ ನೀಡಲಾಗಿದೆ.
500 ರೂ. ಮುಖಬೆಲೆಯ ನಕಲಿ ನೋಟುಗಳು, ಅಸಲಿ ನೋಟುಗಳಂತೆ ಕಾಣುವುದರಿಂದ ಸಾಮಾನ್ಯ ಜನರಿಗೆ ಅದನ್ನು ಗುರುತಿಸುವುದು ಬಹಳ ಕಷ್ಟ. ಅಂಗಡಿಯಲ್ಲಿ ಹೆಚ್ಚಿನ ವ್ಯಾಪಾರದ ವೇಳೆ ಮಾಲೀಕರು ನಕಲಿ ನೋಟನ್ನು ಗಮನಿಸುವುದು ಅಸಾದ್ಯವಾಗಿದೆ.
ಇನ್ನು ಈ ನಕಲಿ ನೋಟನ್ನು ಗುರುತಿಸಲು ಇರುವುದು ಒಂದೇ ಹಂತ ಅದು, ನಕಲಿ ನೋಟಿನಲ್ಲಿ RESERVE BANK OF INDIA ಎಂಬ ಪದಗುಚ್ಛದಲ್ಲಿ E ಅಕ್ಷರವನ್ನು A ಅಕ್ಷರದಿಂದ ತಪ್ಪಾಗಿ ಬರೆದಿರಲಾಗಿದೆ.
ಅಸಲಿ 500 ರೂ. ಮುಖಬೆಲೆ ನೋಟುಗಳು ಭದ್ರತಾ ಥ್ರೆಡ್ ಅನ್ನು ಹೊಂದಿದ್ದು, ನೋಟು ಓರೆಯಾಗಿಸಿದಾಗ ಅದು ಹಸಿರು ಬಣ್ಣದಿಂದ ನೀಲಿ ಬಣ್ಣಕ್ಕೆ ಬಣ್ಣವನ್ನು ಬದಲಾಯಿಸುತ್ತದೆ. ಆದರೆ ನಕಲಿ ನೋಟುಗಳು ಈ ಬಣ್ಣ ಬದಲಾವಣೆ ಕಂಡುಬರುವುದಿಲ್ಲ
ಮಹಾತ್ಮ ಗಾಂಧಿಯವರ ಭಾವಚಿತ್ರ ಮತ್ತು ಮುಖಬೆಲೆಯ 500 ಅನ್ನು ತೋರಿಸುವ ಎಲೆಕ್ಟ್ರೋಟೈಪ್ ವಾಟರ್ಮಾರ್ಕ್ ಅನ್ನು ನೋಡಲು ನೋಟನ್ನು ಬೆಳಕಿಗೆ ಎದುರಾಗಿ ಹಿಡಿದುಕೊಳ್ಳಿ. ನಕಲಿ ನೋಟುಗಳು ಮಸುಕಾದ ಅಥವಾ ತಪ್ಪಾಗಿ ಜೋಡಿಸಲಾದ ವಾಟರ್ಮಾರ್ಕ್ಗಳನ್ನು ಹೊಂದಿರುತ್ತದೆ.
ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…
ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…