ಹೆಚ್ಚುತ್ತಿರುವ 500 ರೂ. ನಕಲಿ ಕರೆನ್ಸಿ ಚಲಾವಣೆ: 500 ರೂ. ನಕಲಿ ನೋಟು ಪರೀಕ್ಷಿಸೋದು ಹೇಗೆ..?

ಭಾರತದಾದ್ಯಂತ 500 ರೂಪಾಯಿಯ ನಕಲಿ ಕರೆನ್ಸಿಗಳ ಚಲಾವಣೆ ಹೆಚ್ಚಾಗುತ್ತಿದ್ದು, ಇದೀಗ ಹೊಸ ನಕಲಿ 500 ಮುಖಬೆಲೆಯ ಕರೆನ್ಸಿ ನೋಟುಗಳ ಬಗ್ಗೆ ಗೃಹ ವ್ಯವಹಾರಗಳ ಸಚಿವಾಲಯ ಹಣಕಾಸು ಮತ್ತು ನಿಯಂತ್ರಕ ಸಂಸ್ಥೆಗಳಿಗೆ ಹೆಚ್ಚಿನ ಪ್ರಾಮುಖ್ಯತೆಯ ಎಚ್ಚರಿಕೆಯನ್ನು ನೀಡಿದೆ.

ನಕಲಿ ನೋಟುಗಳ ಬಗ್ಗೆ ಕಂದಾಯ ಗುಪ್ತಚರ ನಿರ್ದೇಶನಾಲಯ, ಹಣಕಾಸು ಗುಪ್ತಚರ ಘಟಕ, ಕೇಂದ್ರ ತನಿಖಾ ದಳ, ರಾಷ್ಟ್ರೀಯ ತನಿಖಾ ಸಂಸ್ಥೆ, ಭಾರತೀಯ ಭದ್ರತಾ ಪತ್ರಗಳು ಮತ್ತು ವಿನಿಮಯ ಮಂಡಳಿ ಮತ್ತು ಇತರ ಪ್ರಮುಖ ಹಣಕಾಸು ಮತ್ತು ನಿಯಂತ್ರಕ ಸಂಸ್ಥೆಗಳಿಗೆ ಈ ಎಚ್ಚರಿಕೆ ನೀಡಲಾಗಿದೆ.

500 ರೂ. ಮುಖಬೆಲೆಯ ನಕಲಿ ನೋಟುಗಳು, ಅಸಲಿ ನೋಟುಗಳಂತೆ ಕಾಣುವುದರಿಂದ ಸಾಮಾನ್ಯ ಜನರಿಗೆ ಅದನ್ನು ಗುರುತಿಸುವುದು ಬಹಳ ಕಷ್ಟ. ಅಂಗಡಿಯಲ್ಲಿ ಹೆಚ್ಚಿನ ವ್ಯಾಪಾರದ ವೇಳೆ ಮಾಲೀಕರು ನಕಲಿ ನೋಟನ್ನು ಗಮನಿಸುವುದು ಅಸಾದ್ಯವಾಗಿದೆ.

ಇನ್ನು ಈ ನಕಲಿ ನೋಟನ್ನು ಗುರುತಿಸಲು ಇರುವುದು ಒಂದೇ ಹಂತ ಅದು, ನಕಲಿ ನೋಟಿನಲ್ಲಿ RESERVE BANK OF INDIA ಎಂಬ ಪದಗುಚ್ಛದಲ್ಲಿ E ಅಕ್ಷರವನ್ನು A ಅಕ್ಷರದಿಂದ ತಪ್ಪಾಗಿ ಬರೆದಿರಲಾಗಿದೆ.

ಅಸಲಿ 500 ರೂ. ಮುಖಬೆಲೆ ನೋಟುಗಳು ಭದ್ರತಾ ಥ್ರೆಡ್ ಅನ್ನು ಹೊಂದಿದ್ದು, ನೋಟು ಓರೆಯಾಗಿಸಿದಾಗ ಅದು ಹಸಿರು ಬಣ್ಣದಿಂದ ನೀಲಿ ಬಣ್ಣಕ್ಕೆ ಬಣ್ಣವನ್ನು ಬದಲಾಯಿಸುತ್ತದೆ. ಆದರೆ ನಕಲಿ ನೋಟುಗಳು ಈ ಬಣ್ಣ ಬದಲಾವಣೆ ಕಂಡುಬರುವುದಿಲ್ಲ

ಮಹಾತ್ಮ ಗಾಂಧಿಯವರ ಭಾವಚಿತ್ರ ಮತ್ತು ಮುಖಬೆಲೆಯ 500 ಅನ್ನು ತೋರಿಸುವ ಎಲೆಕ್ಟ್ರೋಟೈಪ್ ವಾಟರ್‌ಮಾರ್ಕ್ ಅನ್ನು ನೋಡಲು ನೋಟನ್ನು ಬೆಳಕಿಗೆ ಎದುರಾಗಿ ಹಿಡಿದುಕೊಳ್ಳಿ. ನಕಲಿ ನೋಟುಗಳು ಮಸುಕಾದ ಅಥವಾ ತಪ್ಪಾಗಿ ಜೋಡಿಸಲಾದ ವಾಟರ್‌ಮಾರ್ಕ್‌ಗಳನ್ನು ಹೊಂದಿರುತ್ತದೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

6 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

9 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

17 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

18 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago