ಹೆಚ್ಚುತ್ತಿರುವ 500 ರೂ. ನಕಲಿ ಕರೆನ್ಸಿ ಚಲಾವಣೆ: 500 ರೂ. ನಕಲಿ ನೋಟು ಪರೀಕ್ಷಿಸೋದು ಹೇಗೆ..?

ಭಾರತದಾದ್ಯಂತ 500 ರೂಪಾಯಿಯ ನಕಲಿ ಕರೆನ್ಸಿಗಳ ಚಲಾವಣೆ ಹೆಚ್ಚಾಗುತ್ತಿದ್ದು, ಇದೀಗ ಹೊಸ ನಕಲಿ 500 ಮುಖಬೆಲೆಯ ಕರೆನ್ಸಿ ನೋಟುಗಳ ಬಗ್ಗೆ ಗೃಹ ವ್ಯವಹಾರಗಳ ಸಚಿವಾಲಯ ಹಣಕಾಸು ಮತ್ತು ನಿಯಂತ್ರಕ ಸಂಸ್ಥೆಗಳಿಗೆ ಹೆಚ್ಚಿನ ಪ್ರಾಮುಖ್ಯತೆಯ ಎಚ್ಚರಿಕೆಯನ್ನು ನೀಡಿದೆ.

ನಕಲಿ ನೋಟುಗಳ ಬಗ್ಗೆ ಕಂದಾಯ ಗುಪ್ತಚರ ನಿರ್ದೇಶನಾಲಯ, ಹಣಕಾಸು ಗುಪ್ತಚರ ಘಟಕ, ಕೇಂದ್ರ ತನಿಖಾ ದಳ, ರಾಷ್ಟ್ರೀಯ ತನಿಖಾ ಸಂಸ್ಥೆ, ಭಾರತೀಯ ಭದ್ರತಾ ಪತ್ರಗಳು ಮತ್ತು ವಿನಿಮಯ ಮಂಡಳಿ ಮತ್ತು ಇತರ ಪ್ರಮುಖ ಹಣಕಾಸು ಮತ್ತು ನಿಯಂತ್ರಕ ಸಂಸ್ಥೆಗಳಿಗೆ ಈ ಎಚ್ಚರಿಕೆ ನೀಡಲಾಗಿದೆ.

500 ರೂ. ಮುಖಬೆಲೆಯ ನಕಲಿ ನೋಟುಗಳು, ಅಸಲಿ ನೋಟುಗಳಂತೆ ಕಾಣುವುದರಿಂದ ಸಾಮಾನ್ಯ ಜನರಿಗೆ ಅದನ್ನು ಗುರುತಿಸುವುದು ಬಹಳ ಕಷ್ಟ. ಅಂಗಡಿಯಲ್ಲಿ ಹೆಚ್ಚಿನ ವ್ಯಾಪಾರದ ವೇಳೆ ಮಾಲೀಕರು ನಕಲಿ ನೋಟನ್ನು ಗಮನಿಸುವುದು ಅಸಾದ್ಯವಾಗಿದೆ.

ಇನ್ನು ಈ ನಕಲಿ ನೋಟನ್ನು ಗುರುತಿಸಲು ಇರುವುದು ಒಂದೇ ಹಂತ ಅದು, ನಕಲಿ ನೋಟಿನಲ್ಲಿ RESERVE BANK OF INDIA ಎಂಬ ಪದಗುಚ್ಛದಲ್ಲಿ E ಅಕ್ಷರವನ್ನು A ಅಕ್ಷರದಿಂದ ತಪ್ಪಾಗಿ ಬರೆದಿರಲಾಗಿದೆ.

ಅಸಲಿ 500 ರೂ. ಮುಖಬೆಲೆ ನೋಟುಗಳು ಭದ್ರತಾ ಥ್ರೆಡ್ ಅನ್ನು ಹೊಂದಿದ್ದು, ನೋಟು ಓರೆಯಾಗಿಸಿದಾಗ ಅದು ಹಸಿರು ಬಣ್ಣದಿಂದ ನೀಲಿ ಬಣ್ಣಕ್ಕೆ ಬಣ್ಣವನ್ನು ಬದಲಾಯಿಸುತ್ತದೆ. ಆದರೆ ನಕಲಿ ನೋಟುಗಳು ಈ ಬಣ್ಣ ಬದಲಾವಣೆ ಕಂಡುಬರುವುದಿಲ್ಲ

ಮಹಾತ್ಮ ಗಾಂಧಿಯವರ ಭಾವಚಿತ್ರ ಮತ್ತು ಮುಖಬೆಲೆಯ 500 ಅನ್ನು ತೋರಿಸುವ ಎಲೆಕ್ಟ್ರೋಟೈಪ್ ವಾಟರ್‌ಮಾರ್ಕ್ ಅನ್ನು ನೋಡಲು ನೋಟನ್ನು ಬೆಳಕಿಗೆ ಎದುರಾಗಿ ಹಿಡಿದುಕೊಳ್ಳಿ. ನಕಲಿ ನೋಟುಗಳು ಮಸುಕಾದ ಅಥವಾ ತಪ್ಪಾಗಿ ಜೋಡಿಸಲಾದ ವಾಟರ್‌ಮಾರ್ಕ್‌ಗಳನ್ನು ಹೊಂದಿರುತ್ತದೆ.

Ramesh Babu

Journalist

Recent Posts

ಶಂಕಿತ ಎಬೋಲಾ ಪ್ರಕರಣ: ಪ್ರಯೋಗಾಲಯ ತಪಾಸಣಾ ವರದಿ ಔಟ್: ವರದಿಯಲ್ಲಿ ಏನಿದೆ…?

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಪ್ರಯೋಗಾಲಯ ತಪಾಸಣಾ ವರದಿ ಈಗ ಬಂದಿದ್ದು, ಸಂಪೂರ್ಣವಾಗಿ 'ನೆಗೆಟಿವ್' ಆಗಿದೆ. ಆ ವ್ಯಕ್ತಿಗೆ…

1 hour ago

ಮಕ್ಕಳ ಆಧಾರ್ ಬಯೋಮೆಟ್ರಿಕ್ ಅಪ್ಡೇಟ್ ಮಾಡಲು ಸೆ.30 ರವರೆಗೆ ಅವಕಾಶ

ಮಕ್ಕಳ ಆಧಾರ್ ಸಂಖ್ಯೆಗೆ ಕಡ್ಡಾಯವಾಗಿ ಬಯೋಮೆಟ್ರಿಕ್ ಅಪ್ಡೇಟ್ ಮಾಡಲು ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30 ರವರೆಗೆ ಅವಕಾಶ…

2 hours ago

ರಾಜ್ಯ ರಾಜಕೀಯದಲ್ಲಿ ಮತ್ತೆ ತೀವ್ರಗೊಂಡ ನಾಯಕತ್ವ ಬದಲಾವಣೆಯ ಚರ್ಚೆ: ‘ಮುಂದಿನ ಸಿಎಂ ಡಿ.ಕೆ. ಶಿವಕುಮಾರ್’ ಎಂಬ ಪೋಸ್ಟರ್‌, ಬ್ಯಾನರ್‌ ಮತ್ತು ಸಾಮಾಜಿಕ ಜಾಲತಾಣ ಪೋಸ್ಟ್‌ಗಳು ವೈರಲ್

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ…

3 hours ago

ಬಗರ್ ಹುಕ್ಕುಂ ಸಮಿತಿ ಸಭೆ ವಿಳಂಬ: ಹಕ್ಕುಪತ್ರಕ್ಕಾಗಿ ರೈತರ ಅಲೆದಾಟ: ಅರ್ಜಿ ಸಲ್ಲಿಸಿ ವರ್ಷಗಳಾದರೂ ಸಾಗುವಳಿ ಚೀಟಿ ಇಲ್ಲ: ಆತಂಕದಲ್ಲಿ ರೈತ

ಗ್ರಾಮೀಣ ಭಾಗದಲ್ಲಿ ಜೀವನ ನಡೆಸಲು ಸರ್ಕಾರಿ ಜಮೀನುಗಳಲ್ಲಿ ಉಳುಮೆ ಮಾಡಿಕೊಂಡು ಜೀವನೋಪಾಯ ರೂಪಿಸಿಕೊಂಡಿರುವ ರೈತಾಪಿ ವರ್ಗದ ಜನರಿಗಾಗಿ ಸರ್ಕಾರ ಸಾಗುವಳಿ…

10 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

1 day ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

1 day ago