ಭಾರತದಾದ್ಯಂತ 500 ರೂಪಾಯಿಯ ನಕಲಿ ಕರೆನ್ಸಿಗಳ ಚಲಾವಣೆ ಹೆಚ್ಚಾಗುತ್ತಿದ್ದು, ಇದೀಗ ಹೊಸ ನಕಲಿ 500 ಮುಖಬೆಲೆಯ ಕರೆನ್ಸಿ ನೋಟುಗಳ ಬಗ್ಗೆ ಗೃಹ ವ್ಯವಹಾರಗಳ ಸಚಿವಾಲಯ ಹಣಕಾಸು ಮತ್ತು ನಿಯಂತ್ರಕ ಸಂಸ್ಥೆಗಳಿಗೆ ಹೆಚ್ಚಿನ ಪ್ರಾಮುಖ್ಯತೆಯ ಎಚ್ಚರಿಕೆಯನ್ನು ನೀಡಿದೆ.
ನಕಲಿ ನೋಟುಗಳ ಬಗ್ಗೆ ಕಂದಾಯ ಗುಪ್ತಚರ ನಿರ್ದೇಶನಾಲಯ, ಹಣಕಾಸು ಗುಪ್ತಚರ ಘಟಕ, ಕೇಂದ್ರ ತನಿಖಾ ದಳ, ರಾಷ್ಟ್ರೀಯ ತನಿಖಾ ಸಂಸ್ಥೆ, ಭಾರತೀಯ ಭದ್ರತಾ ಪತ್ರಗಳು ಮತ್ತು ವಿನಿಮಯ ಮಂಡಳಿ ಮತ್ತು ಇತರ ಪ್ರಮುಖ ಹಣಕಾಸು ಮತ್ತು ನಿಯಂತ್ರಕ ಸಂಸ್ಥೆಗಳಿಗೆ ಈ ಎಚ್ಚರಿಕೆ ನೀಡಲಾಗಿದೆ.
500 ರೂ. ಮುಖಬೆಲೆಯ ನಕಲಿ ನೋಟುಗಳು, ಅಸಲಿ ನೋಟುಗಳಂತೆ ಕಾಣುವುದರಿಂದ ಸಾಮಾನ್ಯ ಜನರಿಗೆ ಅದನ್ನು ಗುರುತಿಸುವುದು ಬಹಳ ಕಷ್ಟ. ಅಂಗಡಿಯಲ್ಲಿ ಹೆಚ್ಚಿನ ವ್ಯಾಪಾರದ ವೇಳೆ ಮಾಲೀಕರು ನಕಲಿ ನೋಟನ್ನು ಗಮನಿಸುವುದು ಅಸಾದ್ಯವಾಗಿದೆ.
ಇನ್ನು ಈ ನಕಲಿ ನೋಟನ್ನು ಗುರುತಿಸಲು ಇರುವುದು ಒಂದೇ ಹಂತ ಅದು, ನಕಲಿ ನೋಟಿನಲ್ಲಿ RESERVE BANK OF INDIA ಎಂಬ ಪದಗುಚ್ಛದಲ್ಲಿ E ಅಕ್ಷರವನ್ನು A ಅಕ್ಷರದಿಂದ ತಪ್ಪಾಗಿ ಬರೆದಿರಲಾಗಿದೆ.
ಅಸಲಿ 500 ರೂ. ಮುಖಬೆಲೆ ನೋಟುಗಳು ಭದ್ರತಾ ಥ್ರೆಡ್ ಅನ್ನು ಹೊಂದಿದ್ದು, ನೋಟು ಓರೆಯಾಗಿಸಿದಾಗ ಅದು ಹಸಿರು ಬಣ್ಣದಿಂದ ನೀಲಿ ಬಣ್ಣಕ್ಕೆ ಬಣ್ಣವನ್ನು ಬದಲಾಯಿಸುತ್ತದೆ. ಆದರೆ ನಕಲಿ ನೋಟುಗಳು ಈ ಬಣ್ಣ ಬದಲಾವಣೆ ಕಂಡುಬರುವುದಿಲ್ಲ
ಮಹಾತ್ಮ ಗಾಂಧಿಯವರ ಭಾವಚಿತ್ರ ಮತ್ತು ಮುಖಬೆಲೆಯ 500 ಅನ್ನು ತೋರಿಸುವ ಎಲೆಕ್ಟ್ರೋಟೈಪ್ ವಾಟರ್ಮಾರ್ಕ್ ಅನ್ನು ನೋಡಲು ನೋಟನ್ನು ಬೆಳಕಿಗೆ ಎದುರಾಗಿ ಹಿಡಿದುಕೊಳ್ಳಿ. ನಕಲಿ ನೋಟುಗಳು ಮಸುಕಾದ ಅಥವಾ ತಪ್ಪಾಗಿ ಜೋಡಿಸಲಾದ ವಾಟರ್ಮಾರ್ಕ್ಗಳನ್ನು ಹೊಂದಿರುತ್ತದೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…