ಹೆಚ್ಚು ಶಬ್ಧ ಹಾಗೂ ಮಾಲಿನ್ಯ ಉಂಟು ಮಾಡುವ ಪಟಾಕಿಗಳ ನಿಷೇಧ: ಹಬ್ಬದ ದಿನದಂದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪಟಾಕಿ ಸಿಡಿಸುವುದನ್ನು ನಿಷೇಧ- ಜಿಲ್ಲಾಧಿಕಾರಿ ಆದೇಶ

ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಹಾಗೂ ಶಬ್ಧ ಮಾಲಿನ್ಯ ನಿಯಂತ್ರಣದಲ್ಲಿಡುವ ಉದ್ದೇಶದಿಂದ ಹೆಚ್ಚು ಶಬ್ದ ಮಾಡುವ ಪಟಾಕಿಗಳನ್ನು ಮಾರಾಟ ಮಾಡುವುದನ್ನು ಮತ್ತು ಉಪಯೋಗಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ತಿಳಿಸಿದ್ದಾರೆ.

ಆದ್ದರಿಂದ ಸಾರ್ವಜನಿಕರು ಹೆಚ್ಚು ಶಬ್ಧ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಉಪಯೋಗಿಸಬಾರದು.

ದೀಪಾವಳಿ ಹಬ್ಬದ ದಿನದಂದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ದಿನದ ಯಾವುದೇ ಸಮಯದಲ್ಲಿ ನಿಶ್ಯಬ್ಧ ವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳ (ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರ ಇತ್ಯಾದಿಗಳು) ಸುತ್ತಮುತ್ತಲ್ಲಿನ ಪ್ರದೇಶದಲ್ಲಿ ಯಾವುದೇ ರೀತಿಯ ಶಬ್ಧ ಉಂಟು ಮಾಡುವ ನಿಷೇಧಿತ ಪಟಾಕಿಗಳನ್ನು ಬಳಸಬಾರದು. ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸಲು ತಿಳಿಸಲಾಗಿದೆ.

ನಗರ ಮತ್ತು ಪಟ್ಟಣದ ಚಿಕ್ಕ ಚಿಕ್ಕ ಬೀದಿಗಳಲ್ಲಿ ಪಟಾಕಿಗಳನ್ನು, ಬಾಣ ಬಿರುಸುಗಳನ್ನು ಉಪಯೋಗಿಸುವದರಿಂದ ಅಲ್ಲಿನ ನಿವಾಸಿಗಳಿಗೆ ಹಾನಿಯುಂಟಾಗುವ ಅಥವಾ ಬೆಂಕಿ ಹಾಗೂ ಸ್ಪೋಟದಿಂದ ಅಪಾಯಗಳು ಆಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಪಟಾಕಿಗಳನ್ನು ವಸತಿ ಪ್ರದೇಶಗಳಲ್ಲಿ ಉಪಯೋಗಿಸುವ ಬದಲು ಮೈದಾನಗಳಲ್ಲಿ ಒಟ್ಟಾಗಿ ಸೇರಿ ಆಚರಿಸಲು ತಿಳಿಸಲಾಗಿದೆ. ದೀಪಾವಳಿ ಹಬ್ಬವನ್ನು ಪಟಾಕಿಗಳನ್ನು ಉಪಯೋಗಿಸದೆ ದೀಪದ ಹಬ್ಬವನ್ನಾಗಿ ಆಚರಿಸಲು ಕೋರಲಾಗಿದೆ. ಹಬ್ಬದ ಸಮಯದಲ್ಲಿ ಸಾರ್ವಜನಿಕರು ಸಹಕರಿಸಿ ಎಂದು ಜಿಲ್ಲಾಧಿಕಾರಿಗಳು ಡಾ.ಶಿವಶಂಕರ‌.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

6 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

6 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

7 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

13 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

15 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

18 hours ago