ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಹಾಗೂ ಶಬ್ಧ ಮಾಲಿನ್ಯ ನಿಯಂತ್ರಣದಲ್ಲಿಡುವ ಉದ್ದೇಶದಿಂದ ಹೆಚ್ಚು ಶಬ್ದ ಮಾಡುವ ಪಟಾಕಿಗಳನ್ನು ಮಾರಾಟ ಮಾಡುವುದನ್ನು ಮತ್ತು ಉಪಯೋಗಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ತಿಳಿಸಿದ್ದಾರೆ.
ಆದ್ದರಿಂದ ಸಾರ್ವಜನಿಕರು ಹೆಚ್ಚು ಶಬ್ಧ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಉಪಯೋಗಿಸಬಾರದು.
ದೀಪಾವಳಿ ಹಬ್ಬದ ದಿನದಂದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ದಿನದ ಯಾವುದೇ ಸಮಯದಲ್ಲಿ ನಿಶ್ಯಬ್ಧ ವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳ (ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರ ಇತ್ಯಾದಿಗಳು) ಸುತ್ತಮುತ್ತಲ್ಲಿನ ಪ್ರದೇಶದಲ್ಲಿ ಯಾವುದೇ ರೀತಿಯ ಶಬ್ಧ ಉಂಟು ಮಾಡುವ ನಿಷೇಧಿತ ಪಟಾಕಿಗಳನ್ನು ಬಳಸಬಾರದು. ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸಲು ತಿಳಿಸಲಾಗಿದೆ.
ನಗರ ಮತ್ತು ಪಟ್ಟಣದ ಚಿಕ್ಕ ಚಿಕ್ಕ ಬೀದಿಗಳಲ್ಲಿ ಪಟಾಕಿಗಳನ್ನು, ಬಾಣ ಬಿರುಸುಗಳನ್ನು ಉಪಯೋಗಿಸುವದರಿಂದ ಅಲ್ಲಿನ ನಿವಾಸಿಗಳಿಗೆ ಹಾನಿಯುಂಟಾಗುವ ಅಥವಾ ಬೆಂಕಿ ಹಾಗೂ ಸ್ಪೋಟದಿಂದ ಅಪಾಯಗಳು ಆಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಪಟಾಕಿಗಳನ್ನು ವಸತಿ ಪ್ರದೇಶಗಳಲ್ಲಿ ಉಪಯೋಗಿಸುವ ಬದಲು ಮೈದಾನಗಳಲ್ಲಿ ಒಟ್ಟಾಗಿ ಸೇರಿ ಆಚರಿಸಲು ತಿಳಿಸಲಾಗಿದೆ. ದೀಪಾವಳಿ ಹಬ್ಬವನ್ನು ಪಟಾಕಿಗಳನ್ನು ಉಪಯೋಗಿಸದೆ ದೀಪದ ಹಬ್ಬವನ್ನಾಗಿ ಆಚರಿಸಲು ಕೋರಲಾಗಿದೆ. ಹಬ್ಬದ ಸಮಯದಲ್ಲಿ ಸಾರ್ವಜನಿಕರು ಸಹಕರಿಸಿ ಎಂದು ಜಿಲ್ಲಾಧಿಕಾರಿಗಳು ಡಾ.ಶಿವಶಂಕರ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…