ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಹಾಗೂ ಶಬ್ಧ ಮಾಲಿನ್ಯ ನಿಯಂತ್ರಣದಲ್ಲಿಡುವ ಉದ್ದೇಶದಿಂದ ಹೆಚ್ಚು ಶಬ್ದ ಮಾಡುವ ಪಟಾಕಿಗಳನ್ನು ಮಾರಾಟ ಮಾಡುವುದನ್ನು ಮತ್ತು ಉಪಯೋಗಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ತಿಳಿಸಿದ್ದಾರೆ.
ಆದ್ದರಿಂದ ಸಾರ್ವಜನಿಕರು ಹೆಚ್ಚು ಶಬ್ಧ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಉಪಯೋಗಿಸಬಾರದು.
ದೀಪಾವಳಿ ಹಬ್ಬದ ದಿನದಂದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ದಿನದ ಯಾವುದೇ ಸಮಯದಲ್ಲಿ ನಿಶ್ಯಬ್ಧ ವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳ (ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರ ಇತ್ಯಾದಿಗಳು) ಸುತ್ತಮುತ್ತಲ್ಲಿನ ಪ್ರದೇಶದಲ್ಲಿ ಯಾವುದೇ ರೀತಿಯ ಶಬ್ಧ ಉಂಟು ಮಾಡುವ ನಿಷೇಧಿತ ಪಟಾಕಿಗಳನ್ನು ಬಳಸಬಾರದು. ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸಲು ತಿಳಿಸಲಾಗಿದೆ.
ನಗರ ಮತ್ತು ಪಟ್ಟಣದ ಚಿಕ್ಕ ಚಿಕ್ಕ ಬೀದಿಗಳಲ್ಲಿ ಪಟಾಕಿಗಳನ್ನು, ಬಾಣ ಬಿರುಸುಗಳನ್ನು ಉಪಯೋಗಿಸುವದರಿಂದ ಅಲ್ಲಿನ ನಿವಾಸಿಗಳಿಗೆ ಹಾನಿಯುಂಟಾಗುವ ಅಥವಾ ಬೆಂಕಿ ಹಾಗೂ ಸ್ಪೋಟದಿಂದ ಅಪಾಯಗಳು ಆಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಪಟಾಕಿಗಳನ್ನು ವಸತಿ ಪ್ರದೇಶಗಳಲ್ಲಿ ಉಪಯೋಗಿಸುವ ಬದಲು ಮೈದಾನಗಳಲ್ಲಿ ಒಟ್ಟಾಗಿ ಸೇರಿ ಆಚರಿಸಲು ತಿಳಿಸಲಾಗಿದೆ. ದೀಪಾವಳಿ ಹಬ್ಬವನ್ನು ಪಟಾಕಿಗಳನ್ನು ಉಪಯೋಗಿಸದೆ ದೀಪದ ಹಬ್ಬವನ್ನಾಗಿ ಆಚರಿಸಲು ಕೋರಲಾಗಿದೆ. ಹಬ್ಬದ ಸಮಯದಲ್ಲಿ ಸಾರ್ವಜನಿಕರು ಸಹಕರಿಸಿ ಎಂದು ಜಿಲ್ಲಾಧಿಕಾರಿಗಳು ಡಾ.ಶಿವಶಂಕರ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…