ಹೆಚ್ಚು ಶಬ್ಧ ಹಾಗೂ ಮಾಲಿನ್ಯ ಉಂಟು ಮಾಡುವ ಪಟಾಕಿಗಳ ನಿಷೇಧ: ಹಬ್ಬದ ದಿನದಂದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪಟಾಕಿ ಸಿಡಿಸುವುದನ್ನು ನಿಷೇಧ- ಜಿಲ್ಲಾಧಿಕಾರಿ ಆದೇಶ

ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಹಾಗೂ ಶಬ್ಧ ಮಾಲಿನ್ಯ ನಿಯಂತ್ರಣದಲ್ಲಿಡುವ ಉದ್ದೇಶದಿಂದ ಹೆಚ್ಚು ಶಬ್ದ ಮಾಡುವ ಪಟಾಕಿಗಳನ್ನು ಮಾರಾಟ ಮಾಡುವುದನ್ನು ಮತ್ತು ಉಪಯೋಗಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ತಿಳಿಸಿದ್ದಾರೆ.

ಆದ್ದರಿಂದ ಸಾರ್ವಜನಿಕರು ಹೆಚ್ಚು ಶಬ್ಧ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಉಪಯೋಗಿಸಬಾರದು.

ದೀಪಾವಳಿ ಹಬ್ಬದ ದಿನದಂದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ದಿನದ ಯಾವುದೇ ಸಮಯದಲ್ಲಿ ನಿಶ್ಯಬ್ಧ ವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳ (ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರ ಇತ್ಯಾದಿಗಳು) ಸುತ್ತಮುತ್ತಲ್ಲಿನ ಪ್ರದೇಶದಲ್ಲಿ ಯಾವುದೇ ರೀತಿಯ ಶಬ್ಧ ಉಂಟು ಮಾಡುವ ನಿಷೇಧಿತ ಪಟಾಕಿಗಳನ್ನು ಬಳಸಬಾರದು. ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸಲು ತಿಳಿಸಲಾಗಿದೆ.

ನಗರ ಮತ್ತು ಪಟ್ಟಣದ ಚಿಕ್ಕ ಚಿಕ್ಕ ಬೀದಿಗಳಲ್ಲಿ ಪಟಾಕಿಗಳನ್ನು, ಬಾಣ ಬಿರುಸುಗಳನ್ನು ಉಪಯೋಗಿಸುವದರಿಂದ ಅಲ್ಲಿನ ನಿವಾಸಿಗಳಿಗೆ ಹಾನಿಯುಂಟಾಗುವ ಅಥವಾ ಬೆಂಕಿ ಹಾಗೂ ಸ್ಪೋಟದಿಂದ ಅಪಾಯಗಳು ಆಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಪಟಾಕಿಗಳನ್ನು ವಸತಿ ಪ್ರದೇಶಗಳಲ್ಲಿ ಉಪಯೋಗಿಸುವ ಬದಲು ಮೈದಾನಗಳಲ್ಲಿ ಒಟ್ಟಾಗಿ ಸೇರಿ ಆಚರಿಸಲು ತಿಳಿಸಲಾಗಿದೆ. ದೀಪಾವಳಿ ಹಬ್ಬವನ್ನು ಪಟಾಕಿಗಳನ್ನು ಉಪಯೋಗಿಸದೆ ದೀಪದ ಹಬ್ಬವನ್ನಾಗಿ ಆಚರಿಸಲು ಕೋರಲಾಗಿದೆ. ಹಬ್ಬದ ಸಮಯದಲ್ಲಿ ಸಾರ್ವಜನಿಕರು ಸಹಕರಿಸಿ ಎಂದು ಜಿಲ್ಲಾಧಿಕಾರಿಗಳು ಡಾ.ಶಿವಶಂಕರ‌.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

21 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago