ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ವಾಚ್ ವಿವಾದವನ್ನು ಪ್ರಸ್ತಾಪಿಸಿ ತೀವ್ರ ವಾಗ್ದಾಳಿ ನಡೆಸಿದರು.
ಹೆಚ್ಡಿಕೆ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಧರಿಸಿದ್ದ 62 ವಾಚ್ಗಳ ಫೋಟೋಗಳನ್ನು ನಾನು ಬಿಡುಗಡೆ ಮಾಡಿದ್ದೇನೆ. ಗೋಲ್ಡ್ ಕಲರ್ ವಾಚ್ಗಳು ಸೇರಿದಂತೆ ಹಲವು ದುಬಾರಿ ವಾಚ್ಗಳನ್ನು ಧರಿಸಿದ್ದಾರೆ. ಈಗ ಹೆಚ್ಎಂಟಿ ವಾಚ್ ಕಟ್ಟಿಕೊಂಡು ಬಂದರೆ ಜನರು ನಂಬಬೇಕಾ? ಎಂದು ಪ್ರಶ್ನಿಸಿದರು.
ತಮ್ಮ ಟ್ರಸ್ಟ್ಗೆ ಹಣ ಬಂದ ಬಗ್ಗೆ ಪ್ರಶ್ನೆ ಕೇಳಿದಾಗ ದಾಖಲೆಗಳನ್ನು ನೀಡಿದ್ದೇನೆ ಎಂದು ಹೇಳಿದ ಅವರು, ನಾನು ಡಾಕ್ಯುಮೆಂಟ್ಗಳನ್ನು ನಿಮ್ಮ ಮುಂದೆ ಇಟ್ಟಿದ್ದೇನೆ. ಅದೇ ರೀತಿ ನಿಮ್ಮ 32 ಎಕರೆ ಆಸ್ತಿ ಹೇಗೆ ಬಂತು ಎಂಬ ದಾಖಲೆಗಳನ್ನು ನನ್ನ ಮುಖದ ಮೇಲೆ ಬಿಸಾಕಿ, ಎಂದು ಕುಮಾರಸ್ವಾಮಿಗೆ ಸವಾಲು ಹಾಕಿದರು.
ಮುಂದುವರಿದು ವ್ಯಂಗ್ಯವಾಡಿದ ಅವರು, ನಮ್ಮ ತೋಟದಲ್ಲಿ ಬೆಳೆದ ಬದನೆಕಾಯಿಯನ್ನು ಕೆಜಿಗೆ 500ಕ್ಕೆ ಮಾರಿದೆ, ಟೊಮ್ಯಾಟೊವನ್ನು ಕೆಜಿಗೆ 2,000ಕ್ಕೆ ಮಾರಿದೆ. ಅದರಿಂದ ಬಂದ ಹಣದಲ್ಲಿ ವಾಚ್ ಖರೀದಿಸಿದ್ದೇನೆ ಎಂದು ದಾಖಲೆ ತೋರಿಸಿ. ನಂತರ ನಿಮ್ಮನ್ನು ಪ್ರಶ್ನಿಸುವುದೇ ಇಲ್ಲ, ಎಂದು ಟಾಂಗ್ ನೀಡಿದರು.
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಪ್ರದೀಪ್ ಈಶ್ವರ್ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…