Categories: ರಾಜ್ಯ

ಹೆಚ್ ಡಿಕೆ ಅವರು ಅಧಿಕಾರವಿಲ್ಲದೆ ಹತಾಶರಾಗಿದ್ದಾರೆ: ಅವರ ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ- ಸಿಎಂ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಅಧಿಕಾರವಿಲ್ಲದೆ ಹತಾಶರಾಗಿದ್ದಾರೆ. ಅವರ ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ. ಅವರು ತಮ್ಮ ರಾಜಕೀಯ ಜೀವನದಲ್ಲಿ ಈ ವರೆಗೆ ಮಾಡಿರುವ ಯಾವುದೇ ಒಂದು ಆರೋಪವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಿದ್ದಾರ? ಕತ್ತಲಲ್ಲಿ ನಿಂತು ಕಲ್ಲೆಸೆದು ಓಡಿಹೋಗುತ್ತಾರೆ. ಅವರನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಾದ ಅಗತ್ಯ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಆಡಳಿತ ವ್ಯವಸ್ಥೆಯಲ್ಲಿ ಅಧಿಕಾರಿಗಳ ವರ್ಗಾವಣೆ ಸಹಜ ಪ್ರಕ್ರಿಯೆ. ಹೊಸ ಸರ್ಕಾರ ಬಂದಾಗ ಆಡಳಿತದ ಹಿತದೃಷ್ಟಿಯಿಂದ ವರ್ಗಾವಣೆ ಮಾಡಲೇಬೇಕಾಗುತ್ತದೆ. ಕಳೆದ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ವರ್ಗಾವಣೆಯಾಗಿರಲಿಲ್ಲ. ಈಗ ಆ ಸಾಮಾನ್ಯ ವರ್ಗಾವಣೆಗಳೂ ನಡೆಯುತ್ತಿದೆ. ಇದು ನಮ್ಮಿಂದ ಶುರುವಾದುದಲ್ಲ, ಹಿಂದಿನ ಸರ್ಕಾರದಲ್ಲಿಯೂ ನಡೆದಿದೆ, ಮುಂದೆಯೂ ನಡೆಯುತ್ತದೆ. ಹೆಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ವರ್ಗಾವಣೆ ನಡೆದಿರಲಿಲ್ಲವೇ? ಅವರೂ ಹಣ ಪಡೆದೇ ವರ್ಗಾವಣೆ ನಡೆಸಿದ್ದೇ?

ನಾನು ಮುಖ್ಯಮಂತ್ರಿ ಆಗಿದ್ದೇನೆ ಎಂದ ಮಾತ್ರಕ್ಕೆ ನನ್ನ ಪುತ್ರ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎನ್ನುವುದು ಕುಮಾರಸ್ವಾಮಿ ಅವರ ಕಲ್ಪನಾ ವಿಲಾಸ. ಇದೇ ವಾದವನ್ನು ಅವರಿಗೆ ಮತ್ತು ಅವರ ಕುಟುಂಬಕ್ಕೆ ಅನ್ವಯಿಸಬಹುದಾ? ಕುಮಾರಸ್ವಾಮಿಯವರ ಅಣ್ಣ ಸಚಿವರಾಗಿದ್ದರು, ಈಗ ಶಾಸಕ, ಇವರ ಪತ್ನಿ ಶಾಸಕಿಯಾಗಿದ್ದರು, ತಂದೆ ಪ್ರಧಾನಿಗಳಾಗಿದ್ದರು, ಅಣ್ಣನ ಮಗ ಸಂಸದ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅವರ ಕುಟುಂಬದ ಸದಸ್ಯರೆಲ್ಲೂ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದ್ರಾ? ಎಂದು ಪ್ರಶ್ನೆ ಮಾಡಿದ್ದಾರೆ.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

4 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

16 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

16 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

17 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

20 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago