ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಅಧಿಕಾರವಿಲ್ಲದೆ ಹತಾಶರಾಗಿದ್ದಾರೆ. ಅವರ ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ. ಅವರು ತಮ್ಮ ರಾಜಕೀಯ ಜೀವನದಲ್ಲಿ ಈ ವರೆಗೆ ಮಾಡಿರುವ ಯಾವುದೇ ಒಂದು ಆರೋಪವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಿದ್ದಾರ? ಕತ್ತಲಲ್ಲಿ ನಿಂತು ಕಲ್ಲೆಸೆದು ಓಡಿಹೋಗುತ್ತಾರೆ. ಅವರನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಾದ ಅಗತ್ಯ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಆಡಳಿತ ವ್ಯವಸ್ಥೆಯಲ್ಲಿ ಅಧಿಕಾರಿಗಳ ವರ್ಗಾವಣೆ ಸಹಜ ಪ್ರಕ್ರಿಯೆ. ಹೊಸ ಸರ್ಕಾರ ಬಂದಾಗ ಆಡಳಿತದ ಹಿತದೃಷ್ಟಿಯಿಂದ ವರ್ಗಾವಣೆ ಮಾಡಲೇಬೇಕಾಗುತ್ತದೆ. ಕಳೆದ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ವರ್ಗಾವಣೆಯಾಗಿರಲಿಲ್ಲ. ಈಗ ಆ ಸಾಮಾನ್ಯ ವರ್ಗಾವಣೆಗಳೂ ನಡೆಯುತ್ತಿದೆ. ಇದು ನಮ್ಮಿಂದ ಶುರುವಾದುದಲ್ಲ, ಹಿಂದಿನ ಸರ್ಕಾರದಲ್ಲಿಯೂ ನಡೆದಿದೆ, ಮುಂದೆಯೂ ನಡೆಯುತ್ತದೆ. ಹೆಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ವರ್ಗಾವಣೆ ನಡೆದಿರಲಿಲ್ಲವೇ? ಅವರೂ ಹಣ ಪಡೆದೇ ವರ್ಗಾವಣೆ ನಡೆಸಿದ್ದೇ?
ನಾನು ಮುಖ್ಯಮಂತ್ರಿ ಆಗಿದ್ದೇನೆ ಎಂದ ಮಾತ್ರಕ್ಕೆ ನನ್ನ ಪುತ್ರ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎನ್ನುವುದು ಕುಮಾರಸ್ವಾಮಿ ಅವರ ಕಲ್ಪನಾ ವಿಲಾಸ. ಇದೇ ವಾದವನ್ನು ಅವರಿಗೆ ಮತ್ತು ಅವರ ಕುಟುಂಬಕ್ಕೆ ಅನ್ವಯಿಸಬಹುದಾ? ಕುಮಾರಸ್ವಾಮಿಯವರ ಅಣ್ಣ ಸಚಿವರಾಗಿದ್ದರು, ಈಗ ಶಾಸಕ, ಇವರ ಪತ್ನಿ ಶಾಸಕಿಯಾಗಿದ್ದರು, ತಂದೆ ಪ್ರಧಾನಿಗಳಾಗಿದ್ದರು, ಅಣ್ಣನ ಮಗ ಸಂಸದ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅವರ ಕುಟುಂಬದ ಸದಸ್ಯರೆಲ್ಲೂ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದ್ರಾ? ಎಂದು ಪ್ರಶ್ನೆ ಮಾಡಿದ್ದಾರೆ.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…