ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ನಿಷೇಧ ಕಾಯ್ದೆ (ಪೋಕ್ಸೊ), ಕೌಟುಂಬಿಕ ದೌರ್ಜನ್ಯ ನಿಷೇಧ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ, ಮಹಿಳೆಯನ್ನು ಅಸಭ್ಯವಾಗಿ ಜಾಹೀರುಗೊಳಿಸುವುದು, ಬಾಲ ನ್ಯಾಯಮಂಡಳಿ ಕಾಯ್ದೆ ಸೇರಿ ಮಹಿಳೆ, ವೃದ್ಧ ಮಹಿಳೆ ಮತ್ತು ಮಕ್ಕಳಿಗೆ ಸಂಬಂಧಿಸಿದ ಎಲ್ಲ ಪ್ರಕರಣಗಳ ತನಿಖೆಯನ್ನು ನಡೆಸಲಾಗುತ್ತದೆ.. ಒಂದು ವೇಳೆ ಹೆಣ್ಣಿಗೆ ಪುರುಷನಿಂದ ತೊಂದರೆ ಅಥವಾ ಸಮಸ್ಯೆ ಉಂಟಾದರೆ ಯಾವುದೇ ಭಯವಿಲ್ಲದೇ ಕೂಡಲೇ ದೂರು ನೀಡಬೇಕು ಎಂದು ಮಹಿಳಾ ಪೊಲೀಸ್ ಠಾಣಾ ಸಬ್ ಇನ್ಸ್ ಪೆಕ್ಟರ್ ಪಂಕಜಾ ಅವರು ತಿಳಿಸಿದರು.

ಇಂದು ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ದೊಡ್ಡತಿಮ್ಮನಹಳ್ಳಿ ಗ್ರಾಮದಲ್ಲಿ ದೊಡ್ಡಬಳ್ಳಾಪುರ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ಆಯೋಜನೆ ಮಾಡಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಕೌಟುಂಬಿಕ ಕಲಹಗಳಲ್ಲಿ ಮಹಿಳೆಯರ ಮೇಲಾಗುವ ಮಾನಸಿಕ ಕಿರುಕುಳ, ದೈಹಿಕ ಹಲ್ಲೆಯಂತಹ ಪ್ರಕರಣಗಳನ್ನು ಪತ್ತೆಹಚ್ಚಲು ಗಸ್ತು ವಾಹನ ತಾಲೂಕಿನಾದ್ಯಂತ ಗಸ್ತು ಹಾಕಲಾಗುತ್ತಿದೆ. ಹೀಗೆ ಗಸ್ತು ಹಾಕುವ ವಾಹನ ಗಮನಿಸುವ ಜನರು ಸ್ಥಳೀಯವಾಗಿ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳ ಮಾಹಿತಿ ನೀಡಬಹುದಾಗಿದೆ ಎಂದರು.

ಮಹಿಳೆಯರಲ್ಲಿ ಭಯದ ವಾತಾವರಣ ನಿವಾರಿಸಿ ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ಧೈರ್ಯದಿಂದ ಸಮಾಜದಲ್ಲಿ ತಲೆಯೆತ್ತಿ ಬದುಕು ಸಾಗಿಸಬೇಕೆಂಬ ಸದುದ್ಧೇಶದಿಂದ ಮಹಿಳಾ ಠಾಣೆಯನ್ನು ಸ್ಥಾಪಿಸಲಾಗಿದೆ ಎಂದರು..

ಕರ್ನಾಟಕ ಪೊಲೀಸ್ ಇಲಾಖೆಯ ‘ಆಸರೆ’ ಯೋಜನೆಯು ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ ಹಾಗೂ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳುವ ಒಂದು ಪ್ರಮುಖ ಸಮುದಾಯ ಪೊಲೀಸ್ ಉಪಕ್ರಮವಾಗಿದೆ. ಇದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೃದ್ಧರ ಮನೆಗಳಿಗೆ ನಿಯಮಿತ ಭೇಟಿ ನೀಡುವುದು, ದೌರ್ಜನ್ಯ ತಡೆ, ಆರೋಗ್ಯ ನೆರವು ಮತ್ತು ಆತ್ಮವಿಶ್ವಾಸ ಮೂಡಿಸಲಾಗತ್ತದೆ ಎಂದರು.

ನಂತರ ಸಿಬ್ಬಂದಿ ರಾಜೇಶ್ವರಿ ಮಾತನಾಡಿ, ತುರ್ತು ಸಹಾಯವಾಣಿಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು..

ತುರ್ತು ಸಹಾಯವಾಣಿ

181- ಅಕ್ಕಪಡೆ ಸಹಾಯವಾಣಿ

1098- ಮಕ್ಕಳ ಸಹಾಯವಾಣಿ

1930- ಸೈಬರ್ ಕ್ರೈಂ ಸಹಾಯವಾಣಿ

 1090- ಹಿರಿಯ ನಾಗರಿಕ ಸಹಾಯವಾಣಿ

112- ಪೊಲೀಸ್ (ಇಆರ್ ಎಸ್ ಎಸ್) ಸಹಾಯವಾಣಿ

1091- ಮಹಿಳಾ ಸಹಾಯವಾಣಿ

15100- ಉಚಿತ ಕಾನೂನು ಸೇವೆಗಳ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ ಎಂದು ತಿಳಿಸಿದರು..

ಈ ವೇಳೆ ಪೊಲೀಸ್ ಸಿಬ್ಬಂದಿ ಐಶ್ವರ್ಯ ಹಿರೇಮಠ್, ಮಂಜುನಾಥ್, ಕಾಲೇಜು ಪ್ರಾಂಶುಪಾಲರು, ಉಪನ್ಯಾಸಕರು, ಸೇರಿದಂತೆ ಶಿಬಿರಾರ್ಥಿಗಳು ಇದ್ದರು..

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

2 minutes ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

12 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

12 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

13 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

16 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago