ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ನಿಷೇಧ ಕಾಯ್ದೆ (ಪೋಕ್ಸೊ), ಕೌಟುಂಬಿಕ ದೌರ್ಜನ್ಯ ನಿಷೇಧ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ, ಮಹಿಳೆಯನ್ನು ಅಸಭ್ಯವಾಗಿ ಜಾಹೀರುಗೊಳಿಸುವುದು, ಬಾಲ ನ್ಯಾಯಮಂಡಳಿ ಕಾಯ್ದೆ ಸೇರಿ ಮಹಿಳೆ, ವೃದ್ಧ ಮಹಿಳೆ ಮತ್ತು ಮಕ್ಕಳಿಗೆ ಸಂಬಂಧಿಸಿದ ಎಲ್ಲ ಪ್ರಕರಣಗಳ ತನಿಖೆಯನ್ನು ನಡೆಸಲಾಗುತ್ತದೆ.. ಒಂದು ವೇಳೆ ಹೆಣ್ಣಿಗೆ ಪುರುಷನಿಂದ ತೊಂದರೆ ಅಥವಾ ಸಮಸ್ಯೆ ಉಂಟಾದರೆ ಯಾವುದೇ ಭಯವಿಲ್ಲದೇ ಕೂಡಲೇ ದೂರು ನೀಡಬೇಕು ಎಂದು ಮಹಿಳಾ ಪೊಲೀಸ್ ಠಾಣಾ ಸಬ್ ಇನ್ಸ್ ಪೆಕ್ಟರ್ ಪಂಕಜಾ ಅವರು ತಿಳಿಸಿದರು.

ಇಂದು ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ದೊಡ್ಡತಿಮ್ಮನಹಳ್ಳಿ ಗ್ರಾಮದಲ್ಲಿ ದೊಡ್ಡಬಳ್ಳಾಪುರ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ಆಯೋಜನೆ ಮಾಡಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಕೌಟುಂಬಿಕ ಕಲಹಗಳಲ್ಲಿ ಮಹಿಳೆಯರ ಮೇಲಾಗುವ ಮಾನಸಿಕ ಕಿರುಕುಳ, ದೈಹಿಕ ಹಲ್ಲೆಯಂತಹ ಪ್ರಕರಣಗಳನ್ನು ಪತ್ತೆಹಚ್ಚಲು ಗಸ್ತು ವಾಹನ ತಾಲೂಕಿನಾದ್ಯಂತ ಗಸ್ತು ಹಾಕಲಾಗುತ್ತಿದೆ. ಹೀಗೆ ಗಸ್ತು ಹಾಕುವ ವಾಹನ ಗಮನಿಸುವ ಜನರು ಸ್ಥಳೀಯವಾಗಿ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳ ಮಾಹಿತಿ ನೀಡಬಹುದಾಗಿದೆ ಎಂದರು.

ಮಹಿಳೆಯರಲ್ಲಿ ಭಯದ ವಾತಾವರಣ ನಿವಾರಿಸಿ ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ಧೈರ್ಯದಿಂದ ಸಮಾಜದಲ್ಲಿ ತಲೆಯೆತ್ತಿ ಬದುಕು ಸಾಗಿಸಬೇಕೆಂಬ ಸದುದ್ಧೇಶದಿಂದ ಮಹಿಳಾ ಠಾಣೆಯನ್ನು ಸ್ಥಾಪಿಸಲಾಗಿದೆ ಎಂದರು..

ಕರ್ನಾಟಕ ಪೊಲೀಸ್ ಇಲಾಖೆಯ ‘ಆಸರೆ’ ಯೋಜನೆಯು ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ ಹಾಗೂ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳುವ ಒಂದು ಪ್ರಮುಖ ಸಮುದಾಯ ಪೊಲೀಸ್ ಉಪಕ್ರಮವಾಗಿದೆ. ಇದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೃದ್ಧರ ಮನೆಗಳಿಗೆ ನಿಯಮಿತ ಭೇಟಿ ನೀಡುವುದು, ದೌರ್ಜನ್ಯ ತಡೆ, ಆರೋಗ್ಯ ನೆರವು ಮತ್ತು ಆತ್ಮವಿಶ್ವಾಸ ಮೂಡಿಸಲಾಗತ್ತದೆ ಎಂದರು.

ನಂತರ ಸಿಬ್ಬಂದಿ ರಾಜೇಶ್ವರಿ ಮಾತನಾಡಿ, ತುರ್ತು ಸಹಾಯವಾಣಿಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು..

ತುರ್ತು ಸಹಾಯವಾಣಿ

181- ಅಕ್ಕಪಡೆ ಸಹಾಯವಾಣಿ

1098- ಮಕ್ಕಳ ಸಹಾಯವಾಣಿ

1930- ಸೈಬರ್ ಕ್ರೈಂ ಸಹಾಯವಾಣಿ

 1090- ಹಿರಿಯ ನಾಗರಿಕ ಸಹಾಯವಾಣಿ

112- ಪೊಲೀಸ್ (ಇಆರ್ ಎಸ್ ಎಸ್) ಸಹಾಯವಾಣಿ

1091- ಮಹಿಳಾ ಸಹಾಯವಾಣಿ

15100- ಉಚಿತ ಕಾನೂನು ಸೇವೆಗಳ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ ಎಂದು ತಿಳಿಸಿದರು..

ಈ ವೇಳೆ ಪೊಲೀಸ್ ಸಿಬ್ಬಂದಿ ಐಶ್ವರ್ಯ ಹಿರೇಮಠ್, ಮಂಜುನಾಥ್, ಕಾಲೇಜು ಪ್ರಾಂಶುಪಾಲರು, ಉಪನ್ಯಾಸಕರು, ಸೇರಿದಂತೆ ಶಿಬಿರಾರ್ಥಿಗಳು ಇದ್ದರು..

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

12 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

16 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

1 day ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

1 day ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

2 days ago