ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ನಿಷೇಧ ಕಾಯ್ದೆ (ಪೋಕ್ಸೊ), ಕೌಟುಂಬಿಕ ದೌರ್ಜನ್ಯ ನಿಷೇಧ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ, ಮಹಿಳೆಯನ್ನು ಅಸಭ್ಯವಾಗಿ ಜಾಹೀರುಗೊಳಿಸುವುದು, ಬಾಲ ನ್ಯಾಯಮಂಡಳಿ ಕಾಯ್ದೆ ಸೇರಿ ಮಹಿಳೆ, ವೃದ್ಧ ಮಹಿಳೆ ಮತ್ತು ಮಕ್ಕಳಿಗೆ ಸಂಬಂಧಿಸಿದ ಎಲ್ಲ ಪ್ರಕರಣಗಳ ತನಿಖೆಯನ್ನು ನಡೆಸಲಾಗುತ್ತದೆ.. ಒಂದು ವೇಳೆ ಹೆಣ್ಣಿಗೆ ಪುರುಷನಿಂದ ತೊಂದರೆ ಅಥವಾ ಸಮಸ್ಯೆ ಉಂಟಾದರೆ ಯಾವುದೇ ಭಯವಿಲ್ಲದೇ ಕೂಡಲೇ ದೂರು ನೀಡಬೇಕು ಎಂದು ಮಹಿಳಾ ಪೊಲೀಸ್ ಠಾಣಾ ಸಬ್ ಇನ್ಸ್ ಪೆಕ್ಟರ್ ಪಂಕಜಾ ಅವರು ತಿಳಿಸಿದರು.

ಇಂದು ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ದೊಡ್ಡತಿಮ್ಮನಹಳ್ಳಿ ಗ್ರಾಮದಲ್ಲಿ ದೊಡ್ಡಬಳ್ಳಾಪುರ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ಆಯೋಜನೆ ಮಾಡಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಕೌಟುಂಬಿಕ ಕಲಹಗಳಲ್ಲಿ ಮಹಿಳೆಯರ ಮೇಲಾಗುವ ಮಾನಸಿಕ ಕಿರುಕುಳ, ದೈಹಿಕ ಹಲ್ಲೆಯಂತಹ ಪ್ರಕರಣಗಳನ್ನು ಪತ್ತೆಹಚ್ಚಲು ಗಸ್ತು ವಾಹನ ತಾಲೂಕಿನಾದ್ಯಂತ ಗಸ್ತು ಹಾಕಲಾಗುತ್ತಿದೆ. ಹೀಗೆ ಗಸ್ತು ಹಾಕುವ ವಾಹನ ಗಮನಿಸುವ ಜನರು ಸ್ಥಳೀಯವಾಗಿ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳ ಮಾಹಿತಿ ನೀಡಬಹುದಾಗಿದೆ ಎಂದರು.

ಮಹಿಳೆಯರಲ್ಲಿ ಭಯದ ವಾತಾವರಣ ನಿವಾರಿಸಿ ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ಧೈರ್ಯದಿಂದ ಸಮಾಜದಲ್ಲಿ ತಲೆಯೆತ್ತಿ ಬದುಕು ಸಾಗಿಸಬೇಕೆಂಬ ಸದುದ್ಧೇಶದಿಂದ ಮಹಿಳಾ ಠಾಣೆಯನ್ನು ಸ್ಥಾಪಿಸಲಾಗಿದೆ ಎಂದರು..

ಕರ್ನಾಟಕ ಪೊಲೀಸ್ ಇಲಾಖೆಯ ‘ಆಸರೆ’ ಯೋಜನೆಯು ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ ಹಾಗೂ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳುವ ಒಂದು ಪ್ರಮುಖ ಸಮುದಾಯ ಪೊಲೀಸ್ ಉಪಕ್ರಮವಾಗಿದೆ. ಇದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೃದ್ಧರ ಮನೆಗಳಿಗೆ ನಿಯಮಿತ ಭೇಟಿ ನೀಡುವುದು, ದೌರ್ಜನ್ಯ ತಡೆ, ಆರೋಗ್ಯ ನೆರವು ಮತ್ತು ಆತ್ಮವಿಶ್ವಾಸ ಮೂಡಿಸಲಾಗತ್ತದೆ ಎಂದರು.

ನಂತರ ಸಿಬ್ಬಂದಿ ರಾಜೇಶ್ವರಿ ಮಾತನಾಡಿ, ತುರ್ತು ಸಹಾಯವಾಣಿಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು..

ತುರ್ತು ಸಹಾಯವಾಣಿ

181- ಅಕ್ಕಪಡೆ ಸಹಾಯವಾಣಿ

1098- ಮಕ್ಕಳ ಸಹಾಯವಾಣಿ

1930- ಸೈಬರ್ ಕ್ರೈಂ ಸಹಾಯವಾಣಿ

 1090- ಹಿರಿಯ ನಾಗರಿಕ ಸಹಾಯವಾಣಿ

112- ಪೊಲೀಸ್ (ಇಆರ್ ಎಸ್ ಎಸ್) ಸಹಾಯವಾಣಿ

1091- ಮಹಿಳಾ ಸಹಾಯವಾಣಿ

15100- ಉಚಿತ ಕಾನೂನು ಸೇವೆಗಳ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ ಎಂದು ತಿಳಿಸಿದರು..

ಈ ವೇಳೆ ಪೊಲೀಸ್ ಸಿಬ್ಬಂದಿ ಐಶ್ವರ್ಯ ಹಿರೇಮಠ್, ಮಂಜುನಾಥ್, ಕಾಲೇಜು ಪ್ರಾಂಶುಪಾಲರು, ಉಪನ್ಯಾಸಕರು, ಸೇರಿದಂತೆ ಶಿಬಿರಾರ್ಥಿಗಳು ಇದ್ದರು..

Ramesh Babu

Journalist

Recent Posts

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

19 minutes ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

5 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

7 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

10 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago