ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ನಿಷೇಧ ಕಾಯ್ದೆ (ಪೋಕ್ಸೊ), ಕೌಟುಂಬಿಕ ದೌರ್ಜನ್ಯ ನಿಷೇಧ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ, ಮಹಿಳೆಯನ್ನು ಅಸಭ್ಯವಾಗಿ ಜಾಹೀರುಗೊಳಿಸುವುದು, ಬಾಲ ನ್ಯಾಯಮಂಡಳಿ ಕಾಯ್ದೆ ಸೇರಿ ಮಹಿಳೆ, ವೃದ್ಧ ಮಹಿಳೆ ಮತ್ತು ಮಕ್ಕಳಿಗೆ ಸಂಬಂಧಿಸಿದ ಎಲ್ಲ ಪ್ರಕರಣಗಳ ತನಿಖೆಯನ್ನು ನಡೆಸಲಾಗುತ್ತದೆ.. ಒಂದು ವೇಳೆ ಹೆಣ್ಣಿಗೆ ಪುರುಷನಿಂದ ತೊಂದರೆ ಅಥವಾ ಸಮಸ್ಯೆ ಉಂಟಾದರೆ ಯಾವುದೇ ಭಯವಿಲ್ಲದೇ ಕೂಡಲೇ ದೂರು ನೀಡಬೇಕು ಎಂದು ಮಹಿಳಾ ಪೊಲೀಸ್ ಠಾಣಾ ಸಬ್ ಇನ್ಸ್ ಪೆಕ್ಟರ್ ಪಂಕಜಾ ಅವರು ತಿಳಿಸಿದರು.

ಇಂದು ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ದೊಡ್ಡತಿಮ್ಮನಹಳ್ಳಿ ಗ್ರಾಮದಲ್ಲಿ ದೊಡ್ಡಬಳ್ಳಾಪುರ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ಆಯೋಜನೆ ಮಾಡಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಕೌಟುಂಬಿಕ ಕಲಹಗಳಲ್ಲಿ ಮಹಿಳೆಯರ ಮೇಲಾಗುವ ಮಾನಸಿಕ ಕಿರುಕುಳ, ದೈಹಿಕ ಹಲ್ಲೆಯಂತಹ ಪ್ರಕರಣಗಳನ್ನು ಪತ್ತೆಹಚ್ಚಲು ಗಸ್ತು ವಾಹನ ತಾಲೂಕಿನಾದ್ಯಂತ ಗಸ್ತು ಹಾಕಲಾಗುತ್ತಿದೆ. ಹೀಗೆ ಗಸ್ತು ಹಾಕುವ ವಾಹನ ಗಮನಿಸುವ ಜನರು ಸ್ಥಳೀಯವಾಗಿ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳ ಮಾಹಿತಿ ನೀಡಬಹುದಾಗಿದೆ ಎಂದರು.

ಮಹಿಳೆಯರಲ್ಲಿ ಭಯದ ವಾತಾವರಣ ನಿವಾರಿಸಿ ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ಧೈರ್ಯದಿಂದ ಸಮಾಜದಲ್ಲಿ ತಲೆಯೆತ್ತಿ ಬದುಕು ಸಾಗಿಸಬೇಕೆಂಬ ಸದುದ್ಧೇಶದಿಂದ ಮಹಿಳಾ ಠಾಣೆಯನ್ನು ಸ್ಥಾಪಿಸಲಾಗಿದೆ ಎಂದರು..

ಕರ್ನಾಟಕ ಪೊಲೀಸ್ ಇಲಾಖೆಯ ‘ಆಸರೆ’ ಯೋಜನೆಯು ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ ಹಾಗೂ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳುವ ಒಂದು ಪ್ರಮುಖ ಸಮುದಾಯ ಪೊಲೀಸ್ ಉಪಕ್ರಮವಾಗಿದೆ. ಇದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೃದ್ಧರ ಮನೆಗಳಿಗೆ ನಿಯಮಿತ ಭೇಟಿ ನೀಡುವುದು, ದೌರ್ಜನ್ಯ ತಡೆ, ಆರೋಗ್ಯ ನೆರವು ಮತ್ತು ಆತ್ಮವಿಶ್ವಾಸ ಮೂಡಿಸಲಾಗತ್ತದೆ ಎಂದರು.

ನಂತರ ಸಿಬ್ಬಂದಿ ರಾಜೇಶ್ವರಿ ಮಾತನಾಡಿ, ತುರ್ತು ಸಹಾಯವಾಣಿಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು..

ತುರ್ತು ಸಹಾಯವಾಣಿ

181- ಅಕ್ಕಪಡೆ ಸಹಾಯವಾಣಿ

1098- ಮಕ್ಕಳ ಸಹಾಯವಾಣಿ

1930- ಸೈಬರ್ ಕ್ರೈಂ ಸಹಾಯವಾಣಿ

 1090- ಹಿರಿಯ ನಾಗರಿಕ ಸಹಾಯವಾಣಿ

112- ಪೊಲೀಸ್ (ಇಆರ್ ಎಸ್ ಎಸ್) ಸಹಾಯವಾಣಿ

1091- ಮಹಿಳಾ ಸಹಾಯವಾಣಿ

15100- ಉಚಿತ ಕಾನೂನು ಸೇವೆಗಳ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ ಎಂದು ತಿಳಿಸಿದರು..

ಈ ವೇಳೆ ಪೊಲೀಸ್ ಸಿಬ್ಬಂದಿ ಐಶ್ವರ್ಯ ಹಿರೇಮಠ್, ಮಂಜುನಾಥ್, ಕಾಲೇಜು ಪ್ರಾಂಶುಪಾಲರು, ಉಪನ್ಯಾಸಕರು, ಸೇರಿದಂತೆ ಶಿಬಿರಾರ್ಥಿಗಳು ಇದ್ದರು..

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

12 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

13 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago