ಹೆಣ್ಣುಮಕ್ಕಳಿಗೆ ಶಿಕ್ಷಣ ಅತ್ಯಗತ್ಯ-ಸಿಡಿಪಿಒ ಅನಿತಾ ಲಕ್ಷ್ಮಿ

ಸಮಾಜದಲ್ಲಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಅಸಮಾನತೆಗಳು ಹಾಗೂ ಹೆಣ್ಣು ಮಕ್ಕಳ ರಕ್ಷಣೆ ಮತ್ತು ಅವಕಾಶಗಳನ್ನು ನೀಡುವುದರ ಜೊತೆಗೆ ಹೆಣ್ಣು ಮಕ್ಕಳು ಸಮಾಜದಲ್ಲಿ ಅನುಭವಿಸುವ ತೊಂದರೆಗಳು, ಸ್ತ್ರೀಯರ ಶಿಕ್ಷಣದ ಮಹತ್ವ, ಮಹಿಳೆಯರ ಆರೋಗ್ಯ ಮತ್ತು ಪೋಷಣೆಯ ಪ್ರಾಮುಖ್ಯತೆಯನ್ನು ಉತ್ತೇಜಿಸುವುದು ಈ ದಿನದ ಆಚರಣೆಯ ಮೂಲ ಉದ್ದೇಶ ಎಂದು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಅನಿತಾ ಲಕ್ಷ್ಮಿ ಹೇಳಿದರು.

ನಗರದ ಶ್ರೀ ದೇವರಾಜ ಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ, ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದೊಡ್ಡಬಳ್ಳಾಪುರ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ
ಉಜ್ವಲವಾದ ನಾಳೆಗಾಗಿ ಹೆಣ್ಣುಮಕ್ಕಳ ಸಬಲೀಕರಣ ಎಂಬ ಕಾರ್ಯಕ್ರಮ ನಡೆಯಿತು.

ಈ ವೇಳೆ ಮಾತನಾಡಿದ ಅವರು ಲಿಂಗ ಅನುಪಾತ, ಹೆಣ್ಣು ಮಕ್ಕಳ ಆರೋಗ್ಯಕರ ಮತ್ತು ಸುರಕ್ಷಿತ ವಾತಾವರಣವನ್ನು ನಿರ್ಮಿಸುವುದು, ಹೆಣ್ಣು ಮಗುವನ್ನು ಉಳಿಸುವುದು, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದರ ಕುರಿತು ಜಾಗೃತಿ ಅಭಿಯಾನಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ ಚಿಕ್ಕಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ದೇಶದ ಮೊದಲ ಮಹಿಳಾ ಪ್ರಧಾನ ಮಂತ್ರಿಯಾದ ಇಂದಿರಾ ಗಾಂಧಿಯವರು ಅಧಿಕಾರ ವಹಿಸಿಕೊಂಡ ದಿನವನ್ನು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಎಂದು ಆಚರಿಸಲಾಗುತ್ತಿದೆ ಎಂದರು.

1966 ಜನವರಿ 24 ರಿಂದ ಆಚರಿಸಿಕೊಂಡು ಬರಲಾಗುತ್ತಿದೆ, ಹೆಣ್ಣು ತಾಯಿಯಾಗಿ, ಮಗಳಾಗಿ, ಮಡದಿಯಾಗಿ, ಅಕ್ಕ-ತಂಗಿಯಾಗಿ, ಸ್ನೇಹಿತೆಯಾಗಿ ಎಲ್ಲರ ಮನೆ ಮನಗಳನ್ನು ಬೆಳಗುತ್ತಾಳೆ.

ಹೆಣ್ಣೆಂದರೆ ಮನೆಯ ನಗುವಿನ ಕೀಲಿ ಕೈ, ಮನೆಯ ಸ್ವಚ್ಛತೆಯ ರಾಯಭಾರಿ, ಕುಟುಂಬದ ಆರ್ಥಿಕ ಸಲಹೆಗಾರ್ತಿ, ಪ್ರಕೃತಿಗೂ ಹೋಲುವ, ಸಂಸ್ಕೃತಿಯ ಪ್ರತೀಕ, ಸಂಬಂಧಗಳನ್ನು ಬೆಳೆಸುವ ಸೃಷ್ಟಿಕರ್ತೆ, ಹೆಣ್ಣು ಮನೆಗೆ ಮಾತ್ರ ಮಹಾಲಕ್ಷ್ಮಿ ಅಲ್ಲ, ಈ ಸೃಷ್ಟಿಗೆ ಮೂಲ ಹೆಣ್ಣು. ಹೆಣ್ಣೆಂದರೆ ಪ್ರಕೃತಿ, ಹೆಣ್ಣೆಂದರೆ ಸಂಸ್ಕೃತಿ, ಪ್ರಕೃತಿಯನ್ನು ಉಳಿಸೋಣ, ಸಂಸ್ಕೃತಿಯನ್ನು ಬೆಳೆಸೋಣ, ಹೆಣ್ಣಿನ ಭ್ರೂಣಹತ್ಯೆ ಆಗುವುದು ನಿಲ್ಲಬೇಕು, ಜಗತ್ತಿನಲ್ಲಿ ರಜೆ ಇಲ್ಲದೆ ದುಡಿಮೆ ಮಾಡುವ ಒಂದು ಜೀವ ಇದೆ ಎಂದರೆ ಅದು ಹೆಣ್ಣು ಮಾತ್ರ ಎಂದರು.

ಕಾರ್ಯಕ್ರಮದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅರುಣ್ ಕುಮಾರ್, ಹಿರಿಯ ಮೇಲ್ವಿಚಾರಕಿ ತೇಜಸ್ವಿನಿ, ಸಂಯೋಜಕರಾದ ಲೋಕೇಶ್, ಉಪಪ್ರಾಂಶುಪಾಲರಾದ ಕೆ. ದಕ್ಷಿಣಾಮೂರ್ತಿ ಸೇರಿದಂತೆ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

8 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

8 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

9 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

9 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

11 hours ago

ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಆರೋಪ: ಚಾಲಕ, ಮಣ್ಣು ಸಮೇತ ಟಿಪ್ಪರ್ ಲಾರಿಗಳ ವಶ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…

15 hours ago