ಹೆಣ್ಣುಮಕ್ಕಳಿಗೆ ಶಿಕ್ಷಣ ಅತ್ಯಗತ್ಯ-ಸಿಡಿಪಿಒ ಅನಿತಾ ಲಕ್ಷ್ಮಿ

ಸಮಾಜದಲ್ಲಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಅಸಮಾನತೆಗಳು ಹಾಗೂ ಹೆಣ್ಣು ಮಕ್ಕಳ ರಕ್ಷಣೆ ಮತ್ತು ಅವಕಾಶಗಳನ್ನು ನೀಡುವುದರ ಜೊತೆಗೆ ಹೆಣ್ಣು ಮಕ್ಕಳು ಸಮಾಜದಲ್ಲಿ ಅನುಭವಿಸುವ ತೊಂದರೆಗಳು, ಸ್ತ್ರೀಯರ ಶಿಕ್ಷಣದ ಮಹತ್ವ, ಮಹಿಳೆಯರ ಆರೋಗ್ಯ ಮತ್ತು ಪೋಷಣೆಯ ಪ್ರಾಮುಖ್ಯತೆಯನ್ನು ಉತ್ತೇಜಿಸುವುದು ಈ ದಿನದ ಆಚರಣೆಯ ಮೂಲ ಉದ್ದೇಶ ಎಂದು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಅನಿತಾ ಲಕ್ಷ್ಮಿ ಹೇಳಿದರು.

ನಗರದ ಶ್ರೀ ದೇವರಾಜ ಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ, ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದೊಡ್ಡಬಳ್ಳಾಪುರ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ
ಉಜ್ವಲವಾದ ನಾಳೆಗಾಗಿ ಹೆಣ್ಣುಮಕ್ಕಳ ಸಬಲೀಕರಣ ಎಂಬ ಕಾರ್ಯಕ್ರಮ ನಡೆಯಿತು.

ಈ ವೇಳೆ ಮಾತನಾಡಿದ ಅವರು ಲಿಂಗ ಅನುಪಾತ, ಹೆಣ್ಣು ಮಕ್ಕಳ ಆರೋಗ್ಯಕರ ಮತ್ತು ಸುರಕ್ಷಿತ ವಾತಾವರಣವನ್ನು ನಿರ್ಮಿಸುವುದು, ಹೆಣ್ಣು ಮಗುವನ್ನು ಉಳಿಸುವುದು, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದರ ಕುರಿತು ಜಾಗೃತಿ ಅಭಿಯಾನಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ ಚಿಕ್ಕಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ದೇಶದ ಮೊದಲ ಮಹಿಳಾ ಪ್ರಧಾನ ಮಂತ್ರಿಯಾದ ಇಂದಿರಾ ಗಾಂಧಿಯವರು ಅಧಿಕಾರ ವಹಿಸಿಕೊಂಡ ದಿನವನ್ನು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಎಂದು ಆಚರಿಸಲಾಗುತ್ತಿದೆ ಎಂದರು.

1966 ಜನವರಿ 24 ರಿಂದ ಆಚರಿಸಿಕೊಂಡು ಬರಲಾಗುತ್ತಿದೆ, ಹೆಣ್ಣು ತಾಯಿಯಾಗಿ, ಮಗಳಾಗಿ, ಮಡದಿಯಾಗಿ, ಅಕ್ಕ-ತಂಗಿಯಾಗಿ, ಸ್ನೇಹಿತೆಯಾಗಿ ಎಲ್ಲರ ಮನೆ ಮನಗಳನ್ನು ಬೆಳಗುತ್ತಾಳೆ.

ಹೆಣ್ಣೆಂದರೆ ಮನೆಯ ನಗುವಿನ ಕೀಲಿ ಕೈ, ಮನೆಯ ಸ್ವಚ್ಛತೆಯ ರಾಯಭಾರಿ, ಕುಟುಂಬದ ಆರ್ಥಿಕ ಸಲಹೆಗಾರ್ತಿ, ಪ್ರಕೃತಿಗೂ ಹೋಲುವ, ಸಂಸ್ಕೃತಿಯ ಪ್ರತೀಕ, ಸಂಬಂಧಗಳನ್ನು ಬೆಳೆಸುವ ಸೃಷ್ಟಿಕರ್ತೆ, ಹೆಣ್ಣು ಮನೆಗೆ ಮಾತ್ರ ಮಹಾಲಕ್ಷ್ಮಿ ಅಲ್ಲ, ಈ ಸೃಷ್ಟಿಗೆ ಮೂಲ ಹೆಣ್ಣು. ಹೆಣ್ಣೆಂದರೆ ಪ್ರಕೃತಿ, ಹೆಣ್ಣೆಂದರೆ ಸಂಸ್ಕೃತಿ, ಪ್ರಕೃತಿಯನ್ನು ಉಳಿಸೋಣ, ಸಂಸ್ಕೃತಿಯನ್ನು ಬೆಳೆಸೋಣ, ಹೆಣ್ಣಿನ ಭ್ರೂಣಹತ್ಯೆ ಆಗುವುದು ನಿಲ್ಲಬೇಕು, ಜಗತ್ತಿನಲ್ಲಿ ರಜೆ ಇಲ್ಲದೆ ದುಡಿಮೆ ಮಾಡುವ ಒಂದು ಜೀವ ಇದೆ ಎಂದರೆ ಅದು ಹೆಣ್ಣು ಮಾತ್ರ ಎಂದರು.

ಕಾರ್ಯಕ್ರಮದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅರುಣ್ ಕುಮಾರ್, ಹಿರಿಯ ಮೇಲ್ವಿಚಾರಕಿ ತೇಜಸ್ವಿನಿ, ಸಂಯೋಜಕರಾದ ಲೋಕೇಶ್, ಉಪಪ್ರಾಂಶುಪಾಲರಾದ ಕೆ. ದಕ್ಷಿಣಾಮೂರ್ತಿ ಸೇರಿದಂತೆ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

3 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

7 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

16 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

22 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

23 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago