ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ ಕಾಲೋನಿಯಲ್ಲಿ ನಡೆದಿದೆ.
ಕೊಲೆಯಾದವರನ್ನು ನರಸಪ್ಪ (61) ಎಂದು ಗುರುತಿಸಲಾಗಿದ್ದು, ಆರೋಪಿ ಅಳಿಯ ಲಕ್ಷ್ಮಣ (40) ಎಂದು ತಿಳಿದುಬಂದಿದೆ.
ಪೊಲೀಸರ ಮಾಹಿತಿ ಪ್ರಕಾರ, ಲಕ್ಷ್ಮಣ ಮತ್ತು ಆತನ ಪತ್ನಿ ನರಸಪ್ಪ ಅವರ ಮನೆಯಲ್ಲಿ ವಾಸವಾಗಿದ್ದರು. ಈ ವೇಳೆ ಮನೆ ಬಿಟ್ಟು ಹೋಗುವಂತೆ ನರಸಪ್ಪ ಪದೇ ಪದೇ ಹೇಳುತ್ತಿದ್ದು, ಈ ವಿಚಾರವಾಗಿ ಕುಟುಂಬದಲ್ಲಿ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.
ಜೂನ್ 14ರಂದು ನರಸಪ್ಪ ತನ್ನ ಮಗಳೊಂದಿಗೆ ಜಗಳವಾಡಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದ್ದು, ಇದರಿಂದ ಕೋಪಗೊಂಡ ಲಕ್ಷ್ಮಣ “ನನ್ನ ಹೆಂಡತಿಗೆ ಹೊಡೆಯುತ್ತೀಯಾ” ಎಂದು ಪ್ರಶ್ನಿಸಿ ಮಾವನೊಂದಿಗೆ ವಾಗ್ವಾದ ನಡೆಸಿದ್ದಾನೆ. ಬಳಿಕ ಹಲ್ಲೆ ನಡೆಸಿ, ಕಲ್ಲಿನಿಂದ ಎರಡು ಕಾಲುಗಳಿಗೆ ಗಂಭೀರ ಗಾಯಪಡಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಗಾಯಗೊಂಡ ನರಸಪ್ಪ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಆರೋಪಿ ಲಕ್ಷ್ಮಣನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…
ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…