ಹೆಣ್ಣು ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರಬೇಕು-ನ್ಯಾ.ಭೀಮಸೇನ ಬಾಗಡಿ

ಹೆಣ್ಣು ಮಕ್ಕಳಿಗೂ ಸಮಾಜದಲ್ಲಿ ಸಮಾನ ಅವಕಾಶಗಳಿದ್ದು, ಅವಕಾಶಗಳ ಸದುಪಯೋಗ ಪಡೆದುಕಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಶೈಲ ಭೀಮಸೇನ ಬಾಗಡಿ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಹಳಾ ಸಬಲೀಕರಣ ಘಟಕ ಇವರ ಸಹಯೋಗದಲ್ಲಿ ನಡೆದ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯಡಿ ರಾಷ್ಟ್ರೀಯ ಹೆಣ್ಣು ಮಗು ದಿನಾಚರಣೆ ಅಂಗವಾಗಿ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರು ಈಗಲೂ ಕೂಡ ಸಮಾಜದ ಮೂಖ್ಯವಾಹಿನಿಗೆ ಬರಲು ಹಿಂಜರಿಯುತ್ತಾರೆ. ಹೆಣ್ಣು ಮಕ್ಕಳಿಗೆ ಸಿಗಬೇಕಾದ ಸೌಲಭ್ಯಗಳು ಸಿಗುತ್ತಿಲ್ಲ. ಸಂಸತ್ ನಲ್ಲಿ 33% ಮೀಸಲಾತಿ ಇದೆ, ಪಂಚಾಯಿತಿಗಳಲ್ಲಿ ಇದೆ, ಆದರೆ ಈಗಲೂ ಕೂಡ ಪಂಚಾಯಿತಿಗಳಲ್ಲಿ ಹೆಣ್ಣು ಮಕ್ಕಳಿಗೆ ಸ್ವತಂತ್ರ ಸಿಕ್ಕಿಲ್ಲ.

ಗ್ರಾಮಗಳಲ್ಲಿ ಇನ್ನೂ ಕೂಡ ಅನಿಷ್ಟ ಪದ್ದತಿಗಳು ಆಚರಣೆಯಲ್ಲಿವೆ, ಬಾಲ್ಯ ವಿವಾಹ, ಬಾಲ್ಯದಲ್ಲಿ ಗರ್ಭಾವತಿ, ಭ್ರೂಣ ಹತ್ಯೆ, ಮಕ್ಕಳ ಬಲಿ ಕೊಡುವುದು ಇವೆಲ್ಲವು ಕೂಡ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳು. ಭ್ರೂಣ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದರೂ ಸಹ ಖಾಸಗಿ ಆಸ್ಪತ್ರೆಗಳಲ್ಲಿ ಭ್ರೂಣ ಲಿಂಗ ಪತ್ತೆ ಮಾಡುವರು. ಕಾನೂನಿನ ಮೂಲಕ ತಪ್ಪಿತಸ್ತರಿಗೆ ಶಿಕ್ಷೆ ಆಗುವುದು ಖಚಿತ ಎಂದರು.

ಸರ್ಕಾರಿ ನೌಕರರಾದ ನಾವು ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ತಡೆಯುವುದು, ಅವರ ರಕ್ಷಣೆ ಮಾಡಿ ಸಮಾಜದ ಮುಖ್ಯವಾಹಿನಿಗೆ ತರುವಂತ ಕೆಲಸ ನಮ್ಮೆಲ್ಲರ ಜವಾಬ್ದಾರಿ ಆಗಿದೆ, ಹಾಗಾಗಿ ಹೆಣ್ಣು ಮಕ್ಕಳಿಗೆ ಇರುವಂತಹ ಕಾಯ್ದೆ, ಕಾನೂನು, ಸೌಲಭ್ಯಗಳ ಬಗ್ಗೆ ಅರಿತುಕೊಂಡು ಮಹಿಳೆಯರಿಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಮಾತನಾಡಿ ದೇಶದ ಸ್ವಾತಂತ್ರ್ಯ, ಸಮಾನತೆ ಪ್ರತಿಯೊಬ್ಬ ಹೆಣ್ಣು ಮಗುವಿಗೂ ಸಿಗಬೇಕು. ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಅಧಿಕಾರಿಗಳು ಸದಾ ಕಾರ್ಯಪ್ರವೃತ್ತರಾಗಬೇಕು. ಸಾರ್ವಜನಿಕರು ಕೂಡ ಮಕ್ಕಳ ಮೇಲಿನ ದೌರ್ಜನ್ಯ ಕಂಡು ಬಂದಲ್ಲಿ ಸಹಾಯವಾಣಿ 1098 ಸಂಖ್ಯೆಗೆ ಕರೆ ಮಾಡಿ ದೂರು ನೀಡಿ ಮಕ್ಕಳ ರಕ್ಷಣೆಗೆ ಸಹಕಾರ ನೀಡಿ ಎಂದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಮುದ್ದಣ್ಣ, ಮಕ್ಕಳ ರಕ್ಷಣಾಧಿಕಾರಿ ಅನಿತ ಲಕ್ಷ್ಮಿ, ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

2 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

4 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

4 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

6 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

14 hours ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

23 hours ago