ಹೆಣ್ಣು ಮಕ್ಕಳಿಗೂ ಸಮಾಜದಲ್ಲಿ ಸಮಾನ ಅವಕಾಶಗಳಿದ್ದು, ಅವಕಾಶಗಳ ಸದುಪಯೋಗ ಪಡೆದುಕಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಶೈಲ ಭೀಮಸೇನ ಬಾಗಡಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಹಳಾ ಸಬಲೀಕರಣ ಘಟಕ ಇವರ ಸಹಯೋಗದಲ್ಲಿ ನಡೆದ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯಡಿ ರಾಷ್ಟ್ರೀಯ ಹೆಣ್ಣು ಮಗು ದಿನಾಚರಣೆ ಅಂಗವಾಗಿ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರು ಈಗಲೂ ಕೂಡ ಸಮಾಜದ ಮೂಖ್ಯವಾಹಿನಿಗೆ ಬರಲು ಹಿಂಜರಿಯುತ್ತಾರೆ. ಹೆಣ್ಣು ಮಕ್ಕಳಿಗೆ ಸಿಗಬೇಕಾದ ಸೌಲಭ್ಯಗಳು ಸಿಗುತ್ತಿಲ್ಲ. ಸಂಸತ್ ನಲ್ಲಿ 33% ಮೀಸಲಾತಿ ಇದೆ, ಪಂಚಾಯಿತಿಗಳಲ್ಲಿ ಇದೆ, ಆದರೆ ಈಗಲೂ ಕೂಡ ಪಂಚಾಯಿತಿಗಳಲ್ಲಿ ಹೆಣ್ಣು ಮಕ್ಕಳಿಗೆ ಸ್ವತಂತ್ರ ಸಿಕ್ಕಿಲ್ಲ.
ಗ್ರಾಮಗಳಲ್ಲಿ ಇನ್ನೂ ಕೂಡ ಅನಿಷ್ಟ ಪದ್ದತಿಗಳು ಆಚರಣೆಯಲ್ಲಿವೆ, ಬಾಲ್ಯ ವಿವಾಹ, ಬಾಲ್ಯದಲ್ಲಿ ಗರ್ಭಾವತಿ, ಭ್ರೂಣ ಹತ್ಯೆ, ಮಕ್ಕಳ ಬಲಿ ಕೊಡುವುದು ಇವೆಲ್ಲವು ಕೂಡ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳು. ಭ್ರೂಣ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದರೂ ಸಹ ಖಾಸಗಿ ಆಸ್ಪತ್ರೆಗಳಲ್ಲಿ ಭ್ರೂಣ ಲಿಂಗ ಪತ್ತೆ ಮಾಡುವರು. ಕಾನೂನಿನ ಮೂಲಕ ತಪ್ಪಿತಸ್ತರಿಗೆ ಶಿಕ್ಷೆ ಆಗುವುದು ಖಚಿತ ಎಂದರು.
ಸರ್ಕಾರಿ ನೌಕರರಾದ ನಾವು ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ತಡೆಯುವುದು, ಅವರ ರಕ್ಷಣೆ ಮಾಡಿ ಸಮಾಜದ ಮುಖ್ಯವಾಹಿನಿಗೆ ತರುವಂತ ಕೆಲಸ ನಮ್ಮೆಲ್ಲರ ಜವಾಬ್ದಾರಿ ಆಗಿದೆ, ಹಾಗಾಗಿ ಹೆಣ್ಣು ಮಕ್ಕಳಿಗೆ ಇರುವಂತಹ ಕಾಯ್ದೆ, ಕಾನೂನು, ಸೌಲಭ್ಯಗಳ ಬಗ್ಗೆ ಅರಿತುಕೊಂಡು ಮಹಿಳೆಯರಿಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಮಾತನಾಡಿ ದೇಶದ ಸ್ವಾತಂತ್ರ್ಯ, ಸಮಾನತೆ ಪ್ರತಿಯೊಬ್ಬ ಹೆಣ್ಣು ಮಗುವಿಗೂ ಸಿಗಬೇಕು. ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಅಧಿಕಾರಿಗಳು ಸದಾ ಕಾರ್ಯಪ್ರವೃತ್ತರಾಗಬೇಕು. ಸಾರ್ವಜನಿಕರು ಕೂಡ ಮಕ್ಕಳ ಮೇಲಿನ ದೌರ್ಜನ್ಯ ಕಂಡು ಬಂದಲ್ಲಿ ಸಹಾಯವಾಣಿ 1098 ಸಂಖ್ಯೆಗೆ ಕರೆ ಮಾಡಿ ದೂರು ನೀಡಿ ಮಕ್ಕಳ ರಕ್ಷಣೆಗೆ ಸಹಕಾರ ನೀಡಿ ಎಂದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಮುದ್ದಣ್ಣ, ಮಕ್ಕಳ ರಕ್ಷಣಾಧಿಕಾರಿ ಅನಿತ ಲಕ್ಷ್ಮಿ, ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…