ಹೆಣ್ಣು ಮಕ್ಕಳ ಉನ್ನತ ಶಿಕ್ಷಣಕ್ಕೆ ಮೊದಲ ಆದ್ಯತೆ ಅಗತ್ಯ- ಸಿಡಿಪಿಒ ರವಿಕುಮಾರ್‌

ದೊಡ್ಡಬಳ್ಳಾಪುರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಶಿಶು ಅಭಿವೃದ್ದಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಹಯೋಗದಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯ ಅಂಗವಾಗಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಜಾಗೃತಿ ಕಾರ್ಯಕ್ರಮ ಇಲ್ಲಿನ ಶ್ರೀ ದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ಬುಧವಾರ ನಡೆಯಿತು.

ತಾಲೂಕು ಸಿಡಿಪಿಒ ರವಿಕುಮಾರ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯೂ ಒಂದಾಗಿದೆ. ಹೆಣ್ಣು ಮಕ್ಕಳ ಶಿಕ್ಷಣವನ್ನು ಉತ್ತೇಜಿಸಿ, ಸಾಮಾಜಿಕ ಭದ್ರತೆಯನ್ನು ಒದಗಿಸುವ ಮತ್ತು ಸುರಕ್ಷತೆಯನ್ನು ಖಾತರಿ ಪಡಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೆ ಬಂದಿದೆ ಎಂದು ವಿವರಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ತಾಲೂಕು ಶಿಕ್ಷಕರ ಸಂಘದ ಕಾರ್ಯದರ್ಶಿ ಚಂದ್ರಪ್ಪ, ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಿ ಅವರಿಗೆ ಸುರಕ್ಷಿತ ಬದುಕಿನ ಭರವಸೆಯನ್ನು ಮೂಡಿಸಬೇಕು. ಈ ಹಂತದಲ್ಲಿ ಸಾಕ್ಷರತೆಯ ಪ್ರಾಮುಖ್ಯತೆ ಹೆಚ್ಚು. ಪ್ರತಿ ವರ್ಷವೂ ವಿಶ್ವ ಸಂಸ್ಥೆಯ ಮಾರ್ಗದರ್ಶನದಲ್ಲಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಬಾರಿ ಬಹುಭಾಷಿಕ ಅಧ್ಯಯನ, ಸಾಮರಸ್ಯ ಹಾಗೂ ಶಾಂತಿ ಸ್ಥಾಪನೆಗಾಗಿ ಶಿಕ್ಷಣ ಎಂಬ ಮಹತ್ವದ ಧ್ಯೇಯವನ್ನು ಹೊಂದಲಾಗಿದೆ ಎಂದು ವಿವರಿಸಿದರು.

ಉಪಪ್ರಾಂಶುಪಾಲ ಪ್ರೊ. ದಕ್ಷಿಣಾಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಯೋಜಕ ಪ್ರೊ.ಕೆ.ಆರ್.ರವಿಕಿರಣ್, ಸಂಜೆ ಕಾಲೇಜು ಪ್ರಾಂಶುಪಾಲ ಡಾ.ಎಂ.ಚಿಕ್ಕಣ್ಣ, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಕೆ.ಸಿ.ಲಕ್ಷ್ಮೀಶ, ನಿರ್ವಹಣಾ ವಿಭಾಗ ಮುಖ್ಯಸ್ಥೆ ಪಿ.ಚೈತ್ರ, ಮಹಿಳಾ ಕೋಶದ ಸಂಚಾಲಕಿ ಉಷಾಶ್ರೀ, ಉದ್ಯೋಗಾಧಿಕಾರಿ ಬಾಬುಸಾಬಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಿಬ್ಬಂದಿ ಅರುಣ್‌ಕುಮಾರ್, ಲೋಕೇಶ್‌, ಲಯನ್ಸ್‌ ಕ್ಲಬ್‌ ಆಫ್‌ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌, ಲಿಯೋ-ಲಯನ್ಸ್‌ ಕ್ಲಬ್‌ ಆಫ್‌ ಆರ್ಯಭಟ, ಅಕ್ಷಯ ಲಿಯೋ ಕ್ಲಬ್‌ ಪದಾಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

47 minutes ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

1 hour ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

2 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

4 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

12 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

12 hours ago