ಹೆಣ್ಣು ಮಕ್ಕಳ ಉನ್ನತ ಶಿಕ್ಷಣಕ್ಕೆ ಮೊದಲ ಆದ್ಯತೆ ಅಗತ್ಯ- ಸಿಡಿಪಿಒ ರವಿಕುಮಾರ್‌

ದೊಡ್ಡಬಳ್ಳಾಪುರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಶಿಶು ಅಭಿವೃದ್ದಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಹಯೋಗದಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯ ಅಂಗವಾಗಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಜಾಗೃತಿ ಕಾರ್ಯಕ್ರಮ ಇಲ್ಲಿನ ಶ್ರೀ ದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ಬುಧವಾರ ನಡೆಯಿತು.

ತಾಲೂಕು ಸಿಡಿಪಿಒ ರವಿಕುಮಾರ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯೂ ಒಂದಾಗಿದೆ. ಹೆಣ್ಣು ಮಕ್ಕಳ ಶಿಕ್ಷಣವನ್ನು ಉತ್ತೇಜಿಸಿ, ಸಾಮಾಜಿಕ ಭದ್ರತೆಯನ್ನು ಒದಗಿಸುವ ಮತ್ತು ಸುರಕ್ಷತೆಯನ್ನು ಖಾತರಿ ಪಡಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೆ ಬಂದಿದೆ ಎಂದು ವಿವರಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ತಾಲೂಕು ಶಿಕ್ಷಕರ ಸಂಘದ ಕಾರ್ಯದರ್ಶಿ ಚಂದ್ರಪ್ಪ, ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಿ ಅವರಿಗೆ ಸುರಕ್ಷಿತ ಬದುಕಿನ ಭರವಸೆಯನ್ನು ಮೂಡಿಸಬೇಕು. ಈ ಹಂತದಲ್ಲಿ ಸಾಕ್ಷರತೆಯ ಪ್ರಾಮುಖ್ಯತೆ ಹೆಚ್ಚು. ಪ್ರತಿ ವರ್ಷವೂ ವಿಶ್ವ ಸಂಸ್ಥೆಯ ಮಾರ್ಗದರ್ಶನದಲ್ಲಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಬಾರಿ ಬಹುಭಾಷಿಕ ಅಧ್ಯಯನ, ಸಾಮರಸ್ಯ ಹಾಗೂ ಶಾಂತಿ ಸ್ಥಾಪನೆಗಾಗಿ ಶಿಕ್ಷಣ ಎಂಬ ಮಹತ್ವದ ಧ್ಯೇಯವನ್ನು ಹೊಂದಲಾಗಿದೆ ಎಂದು ವಿವರಿಸಿದರು.

ಉಪಪ್ರಾಂಶುಪಾಲ ಪ್ರೊ. ದಕ್ಷಿಣಾಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಯೋಜಕ ಪ್ರೊ.ಕೆ.ಆರ್.ರವಿಕಿರಣ್, ಸಂಜೆ ಕಾಲೇಜು ಪ್ರಾಂಶುಪಾಲ ಡಾ.ಎಂ.ಚಿಕ್ಕಣ್ಣ, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಕೆ.ಸಿ.ಲಕ್ಷ್ಮೀಶ, ನಿರ್ವಹಣಾ ವಿಭಾಗ ಮುಖ್ಯಸ್ಥೆ ಪಿ.ಚೈತ್ರ, ಮಹಿಳಾ ಕೋಶದ ಸಂಚಾಲಕಿ ಉಷಾಶ್ರೀ, ಉದ್ಯೋಗಾಧಿಕಾರಿ ಬಾಬುಸಾಬಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಿಬ್ಬಂದಿ ಅರುಣ್‌ಕುಮಾರ್, ಲೋಕೇಶ್‌, ಲಯನ್ಸ್‌ ಕ್ಲಬ್‌ ಆಫ್‌ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌, ಲಿಯೋ-ಲಯನ್ಸ್‌ ಕ್ಲಬ್‌ ಆಫ್‌ ಆರ್ಯಭಟ, ಅಕ್ಷಯ ಲಿಯೋ ಕ್ಲಬ್‌ ಪದಾಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

38 minutes ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

2 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

6 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

7 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

15 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

23 hours ago